ಸೋಲಿನೊಂದಿಗೆ ಐಪಿಎಲ್‌ಗೆ ವಿದಾಯ ಹೇಳಿದ ‘ಮ್ಯಾಚ್ ಫಿನಿಶರ್ ದಿನೇಶ್ ಕಾರ್ತಿಕ್’

Date:

17ನೇ ಆವೃತ್ತಿಯ ಫೈನಲ್ ತಲುಪುವ ಭರವಸೆ ಮೂಡಿಸಿದ್ದ ಅಭಿಮಾನಿಗಳ ಫೇವರೀಟ್ ತಂಡ ಆರ್‌ಸಿಬಿ, ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಸೋಲುವ ಮೂಲಕ ಮುಗ್ಗರಿಸಿದೆ. ಇದರಿಂದ ಕೋಟ್ಯಂತರ ಅಭಿಮಾನಿಗಳ ಆರ್‌ಸಿಬಿ ಈ ಸಲವಾದರೂ ಕಪ್ ಗೆಲ್ಲಲೇಬೇಕೆಂಬ ಕನಸು ಭಗ್ನವಾಗಿದೆ.

ರಾಜಸ್ಥಾನ ವಿರುದ್ಧದ ಸೋಲಿನೊಂದಿಗೆ ಆರ್‌ಸಿಬಿಯ ಫಿನಿಶರ್ ದಿನೇಶ್ ಕಾರ್ತಿಕ್ ವಿದಾಯ ಹೇಳಿದ್ದಾರೆ. 2024ರ ಐಪಿಎಲ್‌ನಲ್ಲಿ ಅಬ್ಬರಿಸುವ ಮೂಲಕ ಆರ್​ಸಿಬಿಗೆ ಗೆಲುವಿನ ಗಿಫ್ಟ್ ನೀಡುತ್ತಿದ್ದ ಮ್ಯಾಚ್ ಫಿನಿಶರ್ ಡಿಕೆ, ಎಲಿಮಿನೇಟರ್ ಪಂದ್ಯದಲ್ಲೂ ಇಂತಹದ್ದೇ ಪ್ರದರ್ಶನ ನೀಡಲಿ ಎಂದು ಅಭಿಮಾನಿಗಳು ಹಾರೈಸಿದ್ದರು.ಆದರೆ, ಅದು ಸಾಧ್ಯವಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ 16 ವರ್ಷದಲ್ಲಿ ಆರ್‌ಸಿಬಿ, ಚೆನ್ನೈ ಸೂಪರ್ ಕಿಂಗ್ಸ್‌ ಸೇರಿದಂತೆ ಒಟ್ಟು ಆರು ಫ್ರಾಂಚೈಸಿಗಳಲ್ಲಿ ಆಡಿದ್ದ ದಿನೇಶ್ ಕಾರ್ತಿಕ್ ಐಪಿಎಲ್‌ಗೆ ಸೋಲಿನೊಂದಿಗೆ ವಿದಾಯ ಹೇಳಿದ್ದಾರೆ.

 

ಎಲಿಮಿನೇಟರ್‌ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಶೂನ್ಯಕ್ಕೆ ಔಟಾದರು. ನಂತರ ಕ್ರಿಸ್‌ಗೆ ಬಂದ ದಿನೇಶ್‌ ಕಾರ್ತಿಕ್‌ 15ನೇ ಓವರ್‌ನಲ್ಲಿ ಆವೇಶ್‌ ಖಾನ್‌ ಅವರ ಎಸೆತದಲ್ಲಿ ಚೆಂಡನ್ನು ಅರಿಯುವಲ್ಲಿ ವಿಫಲರಾಗಿ ಪ್ಯಾಡ್‌ ಮೇಲೆ ಹಾಕಿಕೊಂಡರು. ಅದರಂತೆ ಫೀಲ್ಡ್‌ ಅಂಪೈರ್‌ ಔಟ್‌ ಕೊಟ್ಟರು. ಆದರೆ, ಅಂಪೈರ್‌ ನಿರ್ಧಾರದ ವಿರುದ್ಧ ಬ್ಯಾಟರ್‌ ದಿನೇಶ್‌ ಕಾರ್ತಿಕ್‌ ಡಿಆರ್‌ಎಸ್ ತೆಗೆದುಕೊಂಡರು.

ಅದರಂತೆ ವಿಡಿಯೋವನ್ನು ಪರಿಶೀಲಿಸಿದ ಥರ್ಡ್‌ ಅಂಪೈರ್‌ ಅನಿಲ್‌ ಚೌಧರಿ ಅಂತಿಮ ನಿರ್ಧಾರವನ್ನು ಪ್ರಕಟಿಸಲು ಕೆಲವು ನಿಮಿಷಗಳನ್ನು ತೆಗೆದುಕೊಂಡರು. ವಿಡಿಯೋ ರೀಪ್ಲೆನಲ್ಲಿ ಬ್ಯಾಟ್‌ಗೆ ಚೆಂಡು ತಗಲುವುದಕ್ಕೂ ಮುನ್ನ ಅಲ್ಟ್ರಾ ಎಡ್ಜ್‌ನ ಸ್ಪೈಕ್ ಆಗುತ್ತಿತ್ತು. ಇದನ್ನು ಗಮನಿಸಿದ ಮೂರನೇ ಅಂಪೈರ್‌ ಬ್ಯಾಟ್‌ಗೆ ಚೆಂಡು ತಗುಲಿದೆ ಎಂದು ಎಲ್‌ಬಿಡಬ್ಲ್ಯು ನಿರಾಕರಿಸುವಂತೆ ಫೀಲ್ಡ್‌ ಅಂಪೈರ್‌ಗೆ ಸೂಚಿಸಿದರು.

ಫೀಲ್ಡ್ ಅಂಪೈರ್‌ ನೀಡಿದ್ದ ಎಲ್‌ಬಿಡಬ್ಲ್ಯು ನಿರ್ಧಾರವನ್ನು ನಿರಾಕರಿಸಿದ ಮೂರನೇ ಅಂಪೈರ್‌ ‘ನಾಟ್‌ಔಟ್‌’ ಕೊಟ್ಟರು. ಈ ಹಿನ್ನೆಲೆಯಲ್ಲಿ ಈ ವಿವಾದಾತ್ಮಕ ಎಲ್‌ಬಿಡಬ್ಲ್ಯು ನಿರ್ಧಾರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಆ ಬಳಿಕ 13 ಎಸೆತಗಳನ್ನು ಎದುರಿಸಿದ ದಿನೇಶ್ ಕಾರ್ತಿಕ್, ಕೇವಲ 1 ಬೌಂಡರಿಯ ನೆರವಿನಿಂದ 11 ರನ್ ಗಳಿಸಿದ್ದಾಗ ಆವೇಶ್ ಖಾನ್ ಎಸೆತದಲ್ಲಿ ಯಶಸ್ವಿ ಜೈಸ್ವಾಲ್‌ಗೆ ಕ್ಯಾಚಿತ್ತು ಔಟಾದರು.


ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಸೋತು ಹೊರಬಿದ್ದ ಬಳಿಕ, ಮೈದಾನದ ಸುತ್ತ ನೆರೆದಿದ್ದ ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್, ಧನ್ಯವಾದ ಸಲ್ಲಿಸಿದರೆ. ಭಾವುಕರಾಗಿದ್ದ ದಿನೇಶ್ ಕಾರ್ತಿಕ್ ಅವರನ್ನು ತಬ್ಬಿಕೊಳ್ಳುವ ಮೂಲಕ ಆರ್‌ಸಿಬಿಯ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಂತೈಸಿದರು.

2022ರ ಐಪಿಎಲ್​​ನಲ್ಲಿ ನಂಬರ್​ 1 ಫಿನಿಷರ್​ ಆಗಿದ್ದ ಕಾರ್ತಿಕ್, 2023ರ ಸೀಸನ್​ನಲ್ಲಿ ಸತತ ವೈಫಲ್ಯಕ್ಕೆ ಒಳಗಾಗಿ 13 ಪಂದ್ಯಗಳಲ್ಲಿ ಕೇವಲ 140 ರನ್. ಇದರಿಂದ ಸಾಕಷ್ಟು ಟೀಕೆ ಮತ್ತು ಟ್ರೋಲ್​ಗೆ ಗುರಿಯಾಗಿದ್ದರು. ಆತನನ್ನು ಕೈಬಿಟ್ಟು ಯುವಕರಿಗೆ ಅವಕಾಶ ನೀಡಬೇಕೆಂಬ ಕೂಗು ಕೇಳಿಬಂದಿತ್ತು. ಮಿನಿ ಹರಾಜಿಗೆ ಡಿಕೆ ಕೈಬಿಡದ ಕಾರಣಕ್ಕೆ ಆರ್​ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಆದರೆ ತಂಡಕ್ಕೆ ಬೇಡವಾಗಿದ್ದ ಆಟಗಾರ, ಈ ಬಾರಿ ಆರ್​ಸಿಬಿ ಅತ್ಯುತ್ತಮ ಫಿನಿಷರ್ ಆಗಿ ಗುರುತಿಸಿಕೊಂಡಿದ್ದರು.​

ಇದನ್ನು ಓದಿದ್ದೀರಾ? ಐಪಿಎಲ್ | ರಾಜಸ್ಥಾನಕ್ಕೆ ಜಯ: ಆರ್‌ಸಿಬಿ ಕಪ್ ಕನಸು ಮತ್ತೆ ಭಗ್ನ

17ನೇ ಸೀಸನ್​ ಆರಂಭದಿಂದಲೇ ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಡಿಕೆ, ಅಭಿಮಾನಿಗಳು ಹಾಗೂ ಟೀಕಿಸಿದವರಿಂದ ಶಹಬ್ಬಾಷ್‌ಗಿರಿ ಪಡೆದುಕೊಂಡಿದ್ದರು.

ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದರ ಪರಿಣಾಮವೇ, ಈ ಬಾರಿಯ ಐಪಿಎಲ್‌ನಲ್ಲಿ ಮೇ 18ರಂದು ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈಯನ್ನು ಮಣಿಸಿದ್ದಲ್ಲದೇ, ರನ್‌ರೇಟ್ ಆಧಾರದಲ್ಲಿ ಪ್ಲೇ ಆಫ್‌ಗೆ ಪ್ರವೇಶಿಸಲು ಪ್ರಮುಖ ಕಾರಣವಾಗಿತ್ತು. ಆದರೆ, ಸೋಲಿನೊಂದಿಗೆ ಐಪಿಎಲ್‌ಗೆ ವಿದಾಯ ಹೇಳಿದ್ದು ಮಾತ್ರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...