ವಿಶೇಷಚೇತನ ಚಾಂಪಿಯನ್ಸ್ ಟ್ರೋಫಿ | ಟೀಮ್ ಇಂಡಿಯಾಗೆ ಭರ್ಜರಿ ಗೆಲುವು

Date:

ಶ್ರೀಲಂಕಾದಲ್ಲಿ ನಡೆದ ವಿಶೇಷಚೇತನ ಚಾಂಪಿಯನ್ಸ್ ಟ್ರೋಫಿಯ ಕ್ರಿಕೆಟ್‌ ಟೂರ್ನಿಯಲ್ಲಿ ಟೀಮ್‌ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು, ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಲಂಕಾದ ಕೊಲಂಬೊದಲ್ಲಿ ಭಾರತ ಮತ್ತು ಇಂಗ್ಲೆಂಡ್‌ ತಂಡಗಳ ನಡುವೆ ಫೈನಲ್ ಪಂದ್ಯ ನಡೆದಿದ್ದು, ಇಂಗ್ಲೆಂಡ್‌ಅನ್ನು ಮಣಿಸಿ ಟೀಮ್‌ ಇಂಡಿಯಾ ಗೆಲುವಿನ ಗರಿಯನ್ನು ಮುಡಿಗೇರಿಸಿಕೊಂಡಿದೆ.

ಇದೇ ಮೊದಲ ಬಾರಿಗೆ ವಿಶೇಷಚೇತನ ಚಾಂಪಿಯನ್ಸ್ ಟ್ರೋಫಿಯ ಪಂದ್ಯಾವಳಿಗಳು ನಡೆದಿದ್ದು, ಚೊಚ್ಚಲ ಟೂರ್ನಿಯಲ್ಲಿ ಭಾರತೀಯ ತಂಡ ಗೆದ್ದು ಬೀಗಿದೆ.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 10 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 197 ರನ್ ಕಲೆ ಹಾಕಿತ್ತು. ಭಾರತೀಯ ತಂಡದಲ್ಲಿ ಆಡಿದ ಯೋಗೇಂದ್ರ ಬಧೋರಿಯಾ 40 ಎಸೆತಗಳಲ್ಲಿ 73 ರನ್ ಬಾರಿಸಿ, ಗರಿಷ್ಟ ರನ್‌ ಗಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೀಮ್ ಇಂಡಿಯಾ ನೀಡಿದ್ದ ಬೃಹತ್ ರನ್‌ಗಳ ಬೆನ್ನತ್ತಿದ ಇಂಗ್ಲೆಂಡ್‌ ತಂಡ 19.2 ಓವರ್‌ಗಳಲ್ಲಿ 118 ರನ್‌ ಗಳಿಸಿ ಆಲೌಟ್‌ ಆಯಿತು. ಇಂಗ್ಲೆಂಡ್‌ ತಂಡವನ್ನು ಕಟ್ಟಿ ಹಾಕಿದ ಭಾರತದ ತಂಡ ಟ್ರೋಫಿ ಗೆದ್ದುಕೊಂಡಿದೆ.

ಭಾರತ ತಂಡದಲ್ಲಿ ವಿಕ್ರಾಂತ್ ರವೀಂದ್ರ ಕೆನ್ನಿ (ನಾಯಕ), ರವೀಂದ್ರ ಗೋಪಿನಾಥ್ ಸಂತೆ (ಉಪನಾಯಕ), ದೇವೇಂದ್ರ ಸಿಂಗ್ (ವಿಕೆಟ್ ಕೀಪರ್), ಯೋಗೇಂದರ್ ಬಧೋರಿಯಾ, ಅಖಿಲ್ ರೆಡ್ಡಿ, ರಾಧಿಕ ಪ್ರಸಾದ್, ಆಕಾಶ್ ಅನಿಲ್ ಪಾಟೀಲ್, ಸನ್ನಿ ಗೋಯತ್, ಪವನ್ ಕುಮಾರ್, ಜಿತೇಂದ್ರ, ರಾಜೇಶ್ ನಿಖಿಲ್ ಮನ್ಹಾಸ್, ಅಮೀರ್ ಹಾಸನ್, ಮಜಿದ್ ಮಗರೆ, ಕುನಾಲ್ ದತ್ತಾತ್ರೇಯ ಫಣಸಾಯ್ ಆಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...