ಕಾಂಗ್ರೆಸ್‌ನ ಸಂಪತ್ತಿನ ಮರು ಹಂಚಿಕೆ ಸಮೀಕ್ಷೆಯನ್ನು ಐಪಿಎಲ್‌ಗೆ ಹೋಲಿಸಿದ ಕ್ರಿಕೆಟಿಗ ವೆಂಕಿ: ನೆಟ್ಟಿಗರ ಆಕ್ರೋಶ

Date:

ಭಾರತ ತಂಡದ ಮಾಜಿ ಕ್ರಿಕೆಟಿಗ ಕರ್ನಾಟಕದ ಬಿ ಎಸ್ ವೆಂಕಟೇಶ್ ಪ್ರಸಾದ್ ಕಾಂಗ್ರೆಸ್‌ನ ಚುನಾವಣೆ ಪ್ರಣಾಳಿಕೆಯಾದ ಸಂಪತ್ತಿನ ಮರು ಹಂಚಿಕೆ ಸಮೀಕ್ಷೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ಈ ಯೋಜನೆಯನ್ನು ‘ಕರುಣಾಜನಕ’ ಎಂದು ಕರೆದಿದ್ದಾರೆ.

ವೆಂಕಟೇಶ್ ಪ್ರಸಾದ್ ಅವರು ಕಾಂಗ್ರೆಸ್ ಹೆಸರನ್ನು ಬಳಸದೆ ಪರೋಕ್ಷವಾಗಿ ಟೀಕಿಸಿದ್ದು, ಸಂಪತ್ತಿನ ಮರು ಹಂಚಿಕೆ ಸಮೀಕ್ಷೆಯನ್ನು ಐಪಿಎಲ್ ತಂಡಗಳಿಗೆ ಹೋಲಿಸಿದ್ದಾರೆ.

“ರಾಜಕೀಯ ಪಕ್ಷವೊಂದರ ಚುನಾವಣಾ ಪ್ರಣಾಳಿಕೆಯು ಬಡವರಿಗೆ ಶ್ರೀಮಂತರ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿದೆ. ನಿಜವಾಗಿಯು ಬಡವರನ್ನು ಮೇಲೆತ್ತಬೇಕಿದೆ, ಆದರೆ ಈ ಯೋಜನಾ ಪ್ರಕ್ರಿಯೆಯು ಕರುಣಾಜನಕವಾಗಿದೆ. ರಾಜಸ್ಥಾನ ರಾಯಲ್ಸ್, ಕೆಕೆಆರ್ ಹಾಗೂ ಹೈದರಾಬಾದ್ ತಂಡಗಳು ಗಳಿಸಿದ ತಲಾ 4 ಅಂಕಗಳನ್ನು ಕೆಳಗಿರುವ ಮೂರು ತಂಡಗಳಿಗೆ ಮರು ಹಂಚಿಕೆ ಮಾಡಿದರೆ ಅವರು ಪ್ಲೇಆಫ್‌ಗೆ ಹೋಗುತ್ತಾರೆ” ಎಂದು ಅಣಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಕ್ರಿಕೆಟಿಗನ ನಡೆಯನ್ನು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಿಯಾಜ್ ಎಂಬ ನೆಟ್ಟಿಗರು ಮಣಿಪುರ ಹಿಂಸಾಚಾರ, ಚುನಾವಣಾ ಬಾಂಡ್ ಹಗರಣ, ಕುಸ್ತಿಪಟುಗಳ ಪ್ರತಿಭಟನೆ ಹಾಗೂ ರೈತರ ಪ್ರತಿಭಟನೆ ನಿಮಗೆ ತಿಳಿದಿದೆಯೆ? ಎಂದು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ನೆಟ್ಟಿಗರು, ಮುಂದಿನ ಪೀಳಿಗೆ ಉತ್ತಮ ಅನುಕೂಲಗಳನ್ನು ಪಡೆದು ಸಂತಸದಿಂದಿರುವುದು ನಿಮಗೆ ಇಷ್ಟವಿಲ್ಲದ ಕಾರಣ ನೀವು ಆರ್ಥಿಕ ಹಾಗೂ ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದೀರಿ ಎಂದು ಟೀಕಿಸಿದ್ದಾರೆ.

ಬೆಲೆ ಏರಿಕೆ, ಪೆಟ್ರೋಲ್ ಏರಿಕೆ, ಹಣದುಬ್ಬರ, ಕಪ್ಪು ಹಣ, ನೋಟು ರದ್ದತಿ, ಮನೆಗಳ ನೆಲಸಮ, ನರಮೇಧ, ರೈತರ ಪ್ರತಿಭಟನೆ, ಜೆಎನ್‌ಯು ಗಲಭೆಗಳ ಬಗ್ಗೆ ನೀವು ಬಾಯಿ ಬಿಡುತ್ತಿಲ್ಲ. ಇದಕ್ಕೆಲ್ಲ ಉತ್ತರ ಸಂಪತ್ತಿನ ಮರುಹಂಚಿಕೆಯಾಗಿದೆ. ಬಿಸಿಸಿಐನ ಪ್ರಭಾವಿ ಹುದ್ದೆ ಹಾಗೂ ರಾಜ್ಯಸಭೆ ಸೀಟಿಗಾಗಿ ಈ ರೀತಿ ಮಾತನಾಡುತ್ತಿದ್ದೀರಿ ಎಂದು ಮತ್ತೊಬ್ಬ ನೆಟ್ಟಿಗರು ಕುಟುಕಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತೆಲ್ಲವನ್ನು ಹೆಚ್ಚು ಮಕ್ಕಳಿರುವ ಕುಟುಂಬಕ್ಕೆ ನೀಡುತ್ತಾರೆ ಎಂದು ರಾಜಸ್ಥಾನದ ಚುನಾವಣಾ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ ಒಂದು ದಿನದ ನಂತರ ವೆಂಕಟೇಶ್ ಪ್ರಸಾದ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಏಪ್ರಿಲ್‌ 6 ರಂದು ಹೈದರಾಬಾದ್‌ನಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ರಾಹುಲ್ ಗಾಂಧಿ, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಆರ್ಥಿಕ ಹಾಗೂ ಸಾಂಸ್ಥಿಕ ಸಮೀಕ್ಷೆಯನ್ನು ಹಮ್ಮಿಕೊಂಡು ಅವರ ಸಂಪತ್ತನ್ನು ದೇಶದ ಕಡು ಬಡವರಿಗೆ ನೀಡಲಾಗುವುದು ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...