ಟೀಂ ಇಂಡಿಯಾ ಸೋತರೂ ವರುಣ್ ಚಕ್ರವರ್ತಿಯಿಂದ ವಿನೂತನ ದಾಖಲೆ

Date:

ಭಾರತದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ. ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು. 171 ರನ್​​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಯಾವುದೇ ಹಂತದಲ್ಲೂ ಪ್ರತಿರೋಧ ತೋರಲಿಲ್ಲ. 5 ಪಂದ್ಯಗಳ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ.

ಅದರಲ್ಲೂ ಸ್ಪಿನ್ನರ್ ಆದಿಲ್ ರಶೀದ್ ಅವರ ಎಸೆತಗಳನ್ನು ಎದುರಿಸಲು ಭಾರತೀಯ ಬ್ಯಾಟರ್​ಗಳು ತಡಕಾಡಿದರು. ಪರಿಣಾಮ 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 145 ರನ್ ಬಾರಿಸಿ ಟೀಮ್ ಇಂಡಿಯಾ 26 ರನ್​ಗಳಿಂದ ಸೋಲೊಪ್ಪಿಕೊಂಡಿತು. ಭಾರತ ಸೋತರೂ ಟೀಂ ಇಂಡಿಯಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಮೂವರು ಮಾತ್ರ 2 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಈ ಮೂವರಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳ ಮೂಲಕ ಎರಡು ಬಾರಿ 5 ವಿಕೆಟ್​ಗಳ ಸಾಧನೆ ಮಾಡಿರುವುದು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ. ಈ ಮೂಲಕ ಈ ಹಿಂದೆ ಎರಡು ಬಾರಿ 5 ವಿಕೆಟ್​ಗಳನ್ನು ಕಬಳಿಸಿ ದಾಖಲೆ ಬರೆದಿದ್ದ ಬೌಲರ್​ಗಳನ್ನು ಹಿಂದಿಕ್ಕಿ ವರುಣ್ ಚಕ್ರವರ್ತಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಿ20 ಕ್ರಿಕೆಟ್​ನಲ್ಲಿ ಓವರ್​ಸ್ಪಿನ್ ಹಾಗೂ ಮಿಸ್ಟರಿ ಎಸೆತಗಳ ಮೂಲಕವೇ ಸಂಚಲನ ಸೃಷ್ಟಿಸಿರುವ ವರುಣ್ ಚಕ್ರವರ್ತಿ ಇದೀಗ ಟೀಮ್ ಇಂಡಿಯಾ ಪರ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸ್ವಿಂಗ್ ಮಾಸ್ಟರ್ ಭುವನೇಶ್ವರ್ ಕುಮಾರ್ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರ ದಾಖಲೆಗಳನ್ನು ಮುರಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಣಜಿ ಟ್ರೋಫಿ: ಟೀಂ ಇಂಡಿಯಾದ 7 ಆಟಗಾರರಿದ್ದರೂ 120 ರನ್‌ಗೆ ಮುಂಬೈ ಆಲೌಟ್

ವರುಣ್ 4 ಓವರ್​ಗಳಲ್ಲಿ ಕೇವಲ 24 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಎರಡು ಬಾರಿ 5 ವಿಕೆಟ್ ಕಬಳಿಸಿದ 3ನೇ ಬೌಲರ್ ಎನಿಸಿಕೊಂಡರು.

ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭುವನೇಶ್ವರ್ ಕುಮಾರ್ ಯಾದವ್ ಕುಲ್ದೀಪ್ ಯಾದವ್. 87 ಟಿ20 ಪಂದ್ಯಗಳನ್ನಾಡಿರುವ ಭುವನೇಶ್ವರ್ ಕುಮಾರ್ 2 ಬಾರಿ 5 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 40 ಟಿ20 ಮ್ಯಾಚ್​ಗಳ ಮೂಲಕ 2 ಬಾರಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಆದರೆ ಭುವನೇಶ್ವರ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ಹೆಸರಿನಲ್ಲಿರುವ ಈ ದಾಖಲೆಗಳನ್ನು ಸರಿಗಟ್ಟಲು ವರುಣ್ ಚಕ್ರವರ್ತಿ ತೆಗೆದುಕೊಂಡಿರುವುದು ಕೇವಲ 16 ಪಂದ್ಯಗಳನ್ನು ಮಾತ್ರ. ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸಿದ್ದ ವರುಣ್, ಇದೀಗ ಇಂಗ್ಲೆಂಡ್ ವಿರುದ್ಧ 24 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ.

ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಬಾರಿ 5 ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಭಾರತದ ಪರ ಸತತ 2 ಸರಣಿಗಳಲ್ಲಿ 5 ವಿಕೆಟ್ ಪಡೆದ ಏಕೈಕ ಬೌಲರ್ ಎಂಬ ದಾಖಲೆಯನ್ನು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ತಮ್ಮದಾಗಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...