ಪಂದ್ಯ ವೀಕ್ಷಣೆಗೆ ಭಾರತಕ್ಕೆ ಬಂದ ಆರ್‌ಸಿಬಿ ಮಾಜಿ ಸ್ಟಾರ್‌ ಆಟಗಾರ, ಕಪ್‌ ಗೆಲ್ಲುವುದು ಖಚಿತವೇ?

Date:

ಐಪಿಎಲ್‌ 2025ರ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು (ಮೇ 29) ನಡೆಯುತ್ತಿದ್ದು, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿವೆ. ಈ ನಿರ್ಣಾಯಕ ಪಂದ್ಯವನ್ನು ವೀಕ್ಷಿಸಲು ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಆಗಮಿಸಿದ್ದಾರೆ.

ಬುಧವಾರ ಮುಂಬೈಗೆ ಬಂದಿಳಿದಿರುವ ಎಬಿಡಿ, ಅಲ್ಲಿಂದ ಚಂಡೀಗಢ್​ಗೆ ತೆರಳುವುದಾಗಿ ತಿಳಿಸಿದ್ದಾರೆ. ಅದರಂತೆ ಇಂದು ಮುಲ್ಲನ್​ಪುರ್​ನಲ್ಲಿ ಜರುಗಲಿರುವ ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದ ವೇಳೆ ಎಬಿಡಿ ಕಾಣಿಸಿಕೊಳ್ಳಲಿದ್ದಾರೆ. ಇದು ಆರ್‌ಸಿಬಿ ಅಭಿಮಾನಿಗಳ ಸಂತೋಷವನ್ನು ಹೆಚ್ಚು ಮಾಡಿದೆ.

2008 ರಿಂದ ಐಪಿಎಲ್ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಕಪ್ ಗೆದ್ದಿಲ್ಲ. ಆರ್‌ಸಿಬಿ ತನ್ನ ಇತಿಹಾಸದಲ್ಲಿ ಕ್ರಮವಾಗಿ 2009, 2011 ಮತ್ತು 2016 ರಲ್ಲಿ ಮೂರು ಬಾರಿ ಐಪಿಎಲ್ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಆದಾಗ್ಯೂ, ಮೂರು ಬಾರಿ ಕೂಡ ಫೈನಲ್​ನಲ್ಲಿ ಎಡವಿತ್ತು. ಆದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಡಿ

ಇದಕ್ಕೂ ಮುನ್ನ ಆರ್​ಸಿಬಿ ತಂಡ ಕಪ್ ಗೆಲ್ಲುವ ಭರವಸೆಯನ್ನು ಎಬಿಡಿ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಾರಿ ರಾಯಲ್ ಪಡೆ ಫೈನಲ್​​ಗೇರಿದರೆ ಟ್ರೋಫಿ ಎತ್ತಿ ಹಿಡಿಯಲು ನಾನು ಸಹ ಹಾಜರಿರಲಿದ್ದೇನೆ ಎಂದಿದ್ದರು. ಆದರೆ, ಇದೀಗ ಪ್ಲೇಆಫ್ ಪಂದ್ಯಕ್ಕೂ ಮುನ್ನವೇ ಎಬಿಡಿ ಭಾರತಕ್ಕೆ ಆಗಮಿಸಿದ್ದು, ಈ ಮೂಲಕ ಈ ಬಾರಿ ಆರ್​ಸಿಬಿ ತಂಡ ಕಪ್ ಗೆಲ್ಲುವುದು ಬಹುತೇಕ ಖಚಿತ ವಿಶ್ವಾಸದಲ್ಲಿ ಡಿವಿಲಿಯರ್ಸ್ ಭಾರತಕ್ಕೆ ಆಗಮಿಸಿದಂತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...