ಇಂಡಿಯನ್ ಕ್ರಿಕೆಟ್ ಟೀಮ್‌ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

Date:

ಟೀಂ ಇಂಡಿಯಾ ಪುರುಷರ ತಂಡದ ಮುಖ್ಯ ಕೋಚ್‌ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್‌ ಗಂಭೀರ್‌ ಅವರನ್ನು ಬಿಸಿಸಿಐ ಇಂದು ನೇಮಕ ಮಾಡಿದೆ.

ಟಿ20 ವಿಶ್ವಕಪ್‌ ನಂತರ ರಾಹುಲ್‌ ದ್ರಾವಿಡ್ ಅವರ ಕೋಚ್‌ ಅವಧಿ ಮುಕ್ತಾಯಗೊಂಡಿತ್ತು. ಗಂಭೀರ್‌ ಕೋಚ್‌ ಆಗುವುದು ಬಹುತೇಕ ಖಚಿತವಾಗಿದ್ದರೂ ಅಧಿಕೃತ ಆದೇಶ ಮಾತ್ರ ಬಾಕಿಯುಳಿದಿತ್ತು.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಗೌತಮ್‌ ಗಂಭೀರ್ ಅವರನ್ನು ಭಾರತ ತಂಡದ ಮುಖ್ಯ ಕೋಚ್‌ ಆಗಿ ನೇಮಕ ಮಾಡುವುದಕ್ಕೆ ಅಪಾರ ಸಂತಸವಾಗುತ್ತಿದೆ. ಆಧುನಿಕ ಕ್ರಿಕೆಟ್ ತ್ವರಿತವಾಗಿ ವಿಕಸಿತವಾಗುತ್ತಿದ್ದು, ಗೌತಮ್‌ ಅವರು ಇದನ್ನು ಉನ್ನತ ಹಂತದಲ್ಲಿ ಬದಲಿಸುವಲ್ಲಿ ಪ್ರಮುಖ ಕಾರಣಕರ್ತರಾಗಿದ್ದಾರೆ. ಅವರು ತಮ್ಮ ವೃತ್ತಿಯುದ್ದಕ್ಕೂ ಹೋರಾಟದ ಹಾದಿಯೊಂದಿಗೆ ಹಲವು ಮೈಲಿಗಲ್ಲು ಸಾಧಿಸಿದ್ದಾರೆ. ಭಾರತ ಕ್ರಿಕೆಟ್ ತಂಡ ಬೆಳವಣಿಗೆ ಸಾಧಿಸಲು ಗೌತಮ್‌ ಒಬ್ಬ ಆದರ್ಶ ವ್ಯಕ್ತಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೇರಳ ಕ್ರಿಕೆಟ್ ಸಂಸ್ಥೆಯ ಕೋಚ್‌ನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ

ಇವರ ಸ್ಪಷ್ಟ ಉದ್ದೇಶ ಟೀಂ ಇಂಡಿಯಾವನ್ನು ತಮ್ಮ ಅದ್ಭುತ ಅನುಭವದೊಂದಿಗೆ ಉನ್ನತ ಹಂತಕ್ಕೆ ಕೊಂಡೊಯ್ಯುವುದು. ಬಿಸಿಸಿಐ ಇವರ ನೂತನ ಹಾದಿಗೆ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಜಯ್‌ ಶಾ ಹೇಳಿದ್ದಾರೆ.

ಗೌತಮ್‌ ಗಂಭೀರ್ 240ಕ್ಕೂ ಹೆಚ್ಚು ಟೆಸ್ಟ್‌, ಏಕದಿನ, ಟಿ20 ಪಂದ್ಯಗಳನ್ನು ಆಡಿದ್ದು 10 ಸಾವಿರಕ್ಕೂ ಹೆಚ್ಚು ರನ್‌ ಪೇರಿಸಿದ್ದಾರೆ. ಗಂಭೀರ್ 2011ರ ಏಕದಿನ ವಿಶ್ವಕಪ್‌ ವಿಜೇತ ಟೀಂ ಇಂಡಿಯಾದ ಸದಸ್ಯರಾಗಿದ್ದರು. ಕೆಕೆಆರ್‌ ಸಾರಥ್ಯ ವಹಿಸಿದ್ದ ಗಂಭೀರ್‌ ಎರಡು ಬಾರಿ ಕಪ್‌ ಜಯಿಸಲು ಕಾರಣವಾಗಿದ್ದರು.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...