ಒಂದು ಬಾರಿ ಪ್ರಶಸ್ತಿ ಗೆಲ್ಲುವುದೇ ಕಷ್ಟ; ಕೊಹ್ಲಿ ಕಾಲೆಳೆದ ಗೌತಮ್‌ ಗಂಭೀರ್

Date:

ಐಪಿಎಲ್‌ 16ನೇ ಆವೃತ್ತಿಗೆ ತೆರೆ ಬಿದ್ದರೂ ಸಹ ಲಖನೌ ತಂಡದ ಮಾರ್ಗದರ್ಶಕ ಗೌತಮ್ ಗಂಭೀರ್‌ ಅವರಿಗೆ ವಿರಾಟ್‌ ಕೊಹ್ಲಿ ಮೇಲಿನ ಕೋಪ ಇನ್ನೂ ಕಡಿಮೆಯಾದಂತೆ ಅನಿಸುತ್ತಿಲ್ಲ.

ಅಹಮದಾಬಾದ್‌ನಲ್ಲಿ ಸೋಮವಾರ ತಡರಾತ್ರಿ ನಡೆದ ರೋಮಾಂಚನಕಾರಿ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡವನ್ನು ಮಣಿಸಿ ಎಂಎಸ್‌ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 5ನೇ ಬಾರಿಗೆ ಚಾಂಪಿಯನ್‌ ಪಟ್ಟವನ್ನೇರಿತ್ತು. ಆ ಮೂಲಕ ಐಪಿಎಲ್‌ನಲ್ಲಿ ಅತಿಹೆಚ್ಚು ಪ್ರಶಸ್ತಿ ಗೆದ್ದ ಮುಂಬೈ ಇಂಡಿಯನ್ಸ್‌ ದಾಖಲೆಯನ್ನು ಸಿಎಸ್‌ಕೆ ಸರಿಗಟ್ಟಿತ್ತು.

ಪಂದ್ಯದ ಬಳಿಕ ಟ್ವೀಟ್‌ ಮಾಡಿದ ಲಖನೌ ಸೂಪರ್‌ ಜೈಂಟ್ಸ್‌ ತಂಡದ ಮೆಂಟರ್‌ ಗೌತಮ್ ಗಂಭೀರ್‌, “ಸಿಎಸ್‌ಕೆ ತಂಡಕ್ಕೆ ಅಭಿನಂದನೆಗಳು. ಐಪಿಎಲ್‌ನಲ್ಲಿ ಒಂದು ಬಾರಿ ಪ್ರಶಸ್ತಿ ಗೆಲ್ಲುವುದೇ ಕಷ್ಟ. ಐದು ಬಾರಿ ಪ್ರಶಸ್ತಿ ಗೆಲ್ಲುವುದು ನಂಬಲಾಗದ ಸಾಧನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಕಡೆ ಧೋನಿ ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸಿದ ಗಂಭೀರ್‌ ಮತ್ತೊಂದೆಡೆ ಕಳೆದ 16 ಆವೃತ್ತಿಯಲ್ಲೂ ಒಮ್ಮೆಯೂ ಐಪಿಎಲ್‌ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದ ವಿರಾಟ್‌ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ ತಂಡಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

ಗಂಭೀರ್‌-ಕೊಹ್ಲಿ ಚಕಮಕಿ

ಈ ಬಾರಿಯ ಐಪಿಎಲ್‌ನ ಲೀಗ್‌ ಹಂತದಲ್ಲಿ ಲಖನೌ ತಂಡ ತನ್ನ ತವರು ಮೈದಾನದಲ್ಲಿ ಆರ್‌ಸಿಬಿ ತಂಡಕ್ಕೆ 18 ರನ್‌ಗಳಿಂದ ಶರಣಾಗಿತ್ತು. ಪಂದ್ಯದ ಬಳಿಕ ಎರಡೂ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ನೀಡುತ್ತಿದ್ದ ವೇಳೆ, ವಿರಾಟ್‌ ಕೊಹ್ಲಿ ಮತ್ತು ಗೌತಮ್‌ ಗಂಭೀರ್ ನಡುವೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...