ಗೌತಮ್ ಗಂಭೀರ್ ಬೇಡಿಕೆಗಳಿಗೆ ಬಿಸಿಸಿಐ ಒಪ್ಪಿಗೆ: ಟೀಂ ಇಂಡಿಯಾ ಕೋಚ್ ಸ್ಥಾನ ಬಹುತೇಕ ಖಚಿತ

Date:

ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್‌ನ ಮುಖ್ಯ ಕೋಚ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಗೌತಮ್‌ ಗಂಭೀರ್‌ ಅವರು ಟೀಂ ಇಂಡಿಯಾ ಮುಖ್ಯ ಕೋಚ್‌ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ.

ಪ್ರಸ್ತುತ ಮುಖ್ಯ ತರಬೇತುದಾರನಾಗಿ ಕಾರ್ಯನಿರ್ವಹಿಸುತ್ತಿರುವ ರಾಹುಲ್‌ ದ್ರಾವಿಡ್‌ ಅವರ ಅವಧಿ ಟಿ20 ವಿಶ್ವಕಪ್‌ ನಂತರ ಮುಕ್ತಾಯಗೊಳ್ಳಲಿದ್ದು, ಗಂಭೀರ್‌ ದ್ರಾವಿಡ್‌ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಶೀಘ್ರದಲ್ಲಿಯೇ ಗಂಭೀರ್‌ ಅವರನ್ನು ಬಿಸಿಸಿಐ ಮುಖ್ಯ ಕೋಚ್‌ ಆಗಿ ನೇಮಿಸಲಿದೆ. ಕೋಚ್‌ ಸ್ಥಾನ ಅಲಂಕರಿಸುವಂತೆ ಬಿಸಿಸಿಐನ ಮನವಿಯನ್ನು ಗಂಭೀರ್‌ ಒಪ್ಪಿಕೊಂಡಿದ್ದು, ಇದರ ಜೊತೆ ಗೌತಮ್‌ ಗಂಭೀರ್‌ ಅವರ ಕೆಲವು ಬೇಡಿಕೆಗಳಿಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಮ್ಮತಿ ಸೂಚಿಸಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತ ತಂಡದ ಮುಖ್ಯ ಕೋಚ್‌ ನೇಮಕಕ್ಕೆ ಸಂಬಂಧಿಸಿದಂತೆ ನಾವು ಗಂಭೀರ್‌ ಅವರೊಂದಿಗೆ ಮಾತನಾಡಿದ್ದೇವೆ. ಟಿ20 ವಿಶ್ವಕಪ್‌ ನಂತರ ನಿರ್ಗಮಿಸುತ್ತಿರುವ ರಾಹುಲ್ ದ್ರಾವಿಡ್‌ ಅವರ ಸ್ಥಾನವನ್ನು ಗಂಭೀರ್‌ ತುಂಬಲಿದ್ದಾರೆ” ಎಂದು ಮಾಧ್ಯಮವೊಂದಕ್ಕೆ ಬಿಸಿಸಿಐ ತಿಳಿಸಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್ | ಬಾಂಗ್ಲಾ ವಿರುದ್ಧ ಜಯದೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ

ತಮ್ಮ ನಿರ್ಧಾರದಂತೆ ಬೆಂಬಲಿತ ಸಿಬ್ಬಂದಿಯನ್ನು ನೇಮಸಿಕೊಂಡರೆ ತಾವು ಕೋಚ್‌ ಹುದ್ದೆಯನ್ನು ಒಪ್ಪಿಕೊಳ್ಳುವುದಾಗಿ ಗೌತಮ್‌ ಗಂಭೀರ್‌ ಬಿಸಿಸಿಐಗೆ ತಿಳಿಸಿದ್ದಾರೆ ಎನ್ನಲಾಗಿದೆ. ಗಂಭೀರ ಅವರ ಬೇಡಿಕೆಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಒಪ್ಪಿಕೊಂಡಿದ್ದು ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳ ಆರಂಭದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ರವಿ ಶಾಸ್ತ್ರಿ ಅವರು ಮುಖ್ಯ ಕೋಚ್‌ ಆಗಿದ್ದಾಗ ಸಂಜಯ್‌ ಬಂಗಾರ್‌ ಅವರನ್ನು ವಿಕ್ರಮ್‌ ರಾಥೋರ್‌ ಬದಲಿಗೆ ಬ್ಯಾಟಿಂಗ್‌ ಕೋಚ್‌ ಆಗಿ ನೇಮಿಸಿಕೊಳ್ಳಲಾಗಿತ್ತು. ದ್ರಾವಿಡ್‌ ಅವರು ಮುಖ್ಯ ಕೋಚ್‌ ಆದ ನಂತರ ವಿಕ್ರಮ್‌ ರಾಥೋರ್‌ ಬ್ಯಾಟಿಂಗ್‌ ಕೋಚ್‌ ಆಗಿ ಮುಂದುವರೆದಿದ್ದರು.

ಪ್ರಸ್ತುತ ಪರಾಸ್‌ ಮಾಂಬ್ರೆ ಬೌಲಿಂಗ್‌ ಹಾಗೂ ಟಿ ದಿಲೀಪ್‌ ಫೀಲ್ಡಿಂಗ್‌ ಕೋಚ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗೌತಮ್‌ ಗಂಭೀರ್‌ ಕೋಚ್‌ ಆದ ನಂತರವಷ್ಟೆ ಬೆಂಬಲಿತ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇನ್ನೊಂದು ಪ್ರಮುಖವಾದ ವಿಚಾರವೆಂದರೆ ಗಂಭೀರ್ ತಂಡದಲ್ಲೂ ಬದಲಾವಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಕೆಕೆಆರ್‌ನ ಮುಖ್ಯ ಕೋಚ್‌ ಹಾಗೂ ಮಾರ್ಗದರ್ಶಕರಾಗಿರುವ ಗಂಭೀರ್‌ ನೇತೃತ್ವದಲ್ಲಿ ತಂಡವು  ಐಪಿಎಲ್‌ನಲ್ಲಿ 2024ರಲ್ಲಿ ಟ್ರೋಫಿಯನ್ನು ಎತ್ತಿಹಿಡಿದಿತ್ತು.

“ನಾನು ಭಾರತ ತಂಡದ ಕೋಚ್‌ ಆಗಲು ಇಷ್ಟಪಡುತ್ತೇನೆ.ನಮ್ಮ ರಾಷ್ಟ್ರೀಯ ತಂಡದ ಮುಖ್ಯ ಕೋಚ್‌ ಸ್ಥಾನಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.ನೀವು 140 ಕೋಟಿ ಭಾರತೀಯರು ಹಾಗೂ ವಿಶ್ವವನ್ನು ಪ್ರತಿನಿಧಿಸುತ್ತೀರಿ” ಎಂದು ಇತ್ತೀಚಿಗಷ್ಟೆ ಸಂದರ್ಶನವೊಂದರಲ್ಲಿ ಗಂಭೀರ್ ಹೇಳಿದ್ದರು.

ಗಂಭೀರ್‌ 2011ರ ಏಕದಿನ ವಿಶ್ವಕಪ್‌ ಹಾಗೂ 2007ರ ಟಿ20 ವಿಶ್ವಕಪ್‌ ಭಾರತ ವಿಜೇತ ತಂಡದ ಸದಸ್ಯರಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...