ಹೋಗಿ ರಣಜಿ ಕ್ರಿಕೆಟ್‌ ಆಡಿ: ವಿರಾಟ್‌, ರೋಹಿತ್‌ ವಿರುದ್ಧ ರವಿ ಶಾಸ್ತ್ರಿ ಕಿಡಿ

Date:

ಕಳಪೆ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟ್ ಆಟಗಾರರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ವಿರುದ್ಧ ಭಾರತ ತಂಡದ ಮಾಜಿ ಕೋಚ್‌ ಹಾಗೂ ರವಿ ಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಸಿಸಿ ಪರಿಶೀಲನಾ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, “ಅವರಿಗೆ ಟೆಸ್ಟ್‌ನಲ್ಲಿ ಹೆಚ್ಚು ಅಂತರವಿದ್ದರೆ ಅವರು ದೇಶೀಯ ಕ್ರಿಕೆಟ್‌ಗೆ ಹಿಂತಿರುಗಿ ಅಲ್ಲಿ ಕೆಲವು ಪಂದ್ಯಗಳನ್ನು ಆಡಬೇಕು. ನೀವು ಹೆಚ್ಚು ಸಮಯವಿರುವ ಟೆಸ್ಟ್‌ ಕ್ರಿಕೆಟ್ ಆಡುವಾಗ ಎರಡು ಕಾರಣಗಳಿಗೆ ದೇಶೀಯ ಕ್ರಿಕೆಟ್ ಮುಖ್ಯವಾಗುತ್ತದೆ. ನೀವು ಇಂದಿನ ಪೀಳಿಗೆಯ ಆಟಗಾರರ ಜೊತೆ ಇರುತ್ತೀರಿ. ನಿಮ್ಮ ಅನುಭವದೊಂದಿಗೆ ಕಿರಿಯರಿಗೆ ಮಾರ್ಗದರ್ಶನ ನೀಡಲು ಅನುಕೂಲವಾಗುತ್ತದೆ” ಎಂದು ತಿಳಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್‌ – ಗವಾಸ್ಕರ್‌ ಟ್ರೋಫಿಯನ್ನು ಟೀಂ ಇಂಡಿಯಾ ಸೋತಾದ ಹಲವು ಹಿರಿಯ ಆಟಗಾರರ ವಿರುದ್ದ ಟೀಕೆಗಳು ವ್ಯಕ್ತವಾದವು. ಈ ಸರಣಿಯಲ್ಲಿ ಕೊಹ್ಲಿ 5 ಟೆಸ್ಟ್‌ಗಳಲ್ಲಿ 190 ರನ್‌ ಮಾತ್ರ ಪೇರಿಸಿದ್ದರೆ, ನಾಯಕ ರೋಹಿತ್‌ ಶರ್ಮಾ ಬ್ಯಾಟಿಂಗ್‌ ಸರಾಸರಿ 6.2 ಮಾತ್ರ ಇತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

“ಎದುರಾಳಿ ತಂಡದಲ್ಲಿ ಗುಣಮಟ್ಟದ ಸ್ಪಿನ್ನರ್‌ಗಳಿದ್ದರೆ, ಅವರು ಬ್ಯಾಟರ್‌ಗಳಿಗೆ ತೊಂದರೆ ನೀಡುತ್ತಾರೆ. ಹಾಗೆಯೇ ಟಿಂ ಇಂಡಿಯಾಗೂ ಮಾರಕವಾಗಿ ಪರಿಣಮಿಸುತ್ತಾರೆ. ಇಬ್ಬರು ಆಟಗಾರರಿಗೆ ರನ್‌ಗಳ ಬರ ಎಷ್ಟಿದೆಯೆಂದು ತಿಳಿಯುತ್ತದೆ. ಒಬ್ಬರಿಗೆ 36 ವರ್ಷವಾಗಿದ್ದರೆ, ಮತ್ತೊಬ್ಬರಿಗೆ 38 ವರ್ಷವಾಗಿದೆ. ನೀವು ತೆಂಡೂಲ್ಕರ್‌ ಅವರ ಕೊನೆಯ ಆಟದ ವರ್ಷಗಳನ್ನು ಗಮನಿಸಿ, ಅವರು ಉತ್ತಮ ಆಟವಾಡದಿದ್ದರೂ ಮುಂದಿನ ಪೀಳಿಗೆಯ ಆಟಗಾರರಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು” ಎಂದು ರವಿಶಾಸ್ತ್ರಿ ಹೇಳಿದ್ದಾರೆ.

“ವಿರಾಟ್‌ ಕೊಹ್ಲಿ ಅವರಂತಹ ಹಿರಿಯರಿಂದ ಯಶಸ್ವಿ ಜೈಸ್ವಾಲ್, ಶುಭ್‌ಮನ್‌ ಗಿಲ್, ರಿಷಭ್ ಪಂತ್‌ರಂಥ ಕಿರಿಯರು ಮಾರ್ಗದರ್ಶನ ಪಡೆಯಬೇಕಿದೆ. ಈ ಇಬ್ಬರು ಆಟಗಾರರು ಕಿರಿಯರಿಗೆ ತಮ್ಮ ವೃತ್ತಿ ಜೀವನದ ಅನುಭವವನ್ನು ಧಾರೆ ಎರೆಯಬೇಕಿದೆ” ಎಂದು ರವಿ ಶಾಸ್ತ್ರಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...