ಪ್ಯಾರಾಲಿಂಪಿಕ್‌ ಪಟು ವಿಶ್ವಾಸ್‌ಗೆ ಬಹುಮಾನ ನೀಡದ ಸರ್ಕಾರಕ್ಕೆ 2 ಲಕ್ಷ ರೂ. ದಂಡ: ಹೈಕೋರ್ಟ್

Date:

ಅಂತಾರಾಷ್ಟ್ರೀಯ ಪ್ಯಾರಾ-ಈಜು ಸ್ಪರ್ಧೆಯಲ್ಲಿ ವಿಶ್ವಾಸ್‌ ಕೆ.ಎಸ್‌ ಅವರು ಕೈಗಳಿಲ್ಲದಿದ್ದರೂ, ಈಜಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರಿಗೆ ರಾಜ್ಯ ಸರ್ಕಾರವು ಯಾವುದೇ ಬಹುಮಾನ ನೀಡಿಲ್ಲ, ಗೌರವಿಸಿಲ್ಲ. ವಿಶ್ವಾಸ್‌ ಅವರನ್ನು ಸರ್ಕಾರ ಗೌರವಿಸಬೇಕಿತ್ತು ಎಂದಿರುವ ಕರ್ನಾಟಕ ಹೈಕೋರ್ಟ್‌, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗೆ 2 ಲಕ್ಷ ರೂ. ದಂಡ ವಿಧಿಸಿದೆ.

2017 ಮತ್ತು 2023ರಲ್ಲಿ ಚಾಂಪಿಯನ್ ಆಗಿರುವ ವಿಶ್ವಾಸ್‌ ಅವರು ಪ್ರಾತಿನಿಧ್ಯಗಳನ್ನು ಸಲ್ಲಿಸಿದ್ದರು. ಆದರೂ, ಅವರಿಗೆ ಸರ್ಕಾರದಿಂದ ಯಾವುದೇ ಗೌರವ ದೊರೆತಿಲ್ಲ. ಪರಿಹಾರ ನೀಡಲಾಗಿಲ್ಲ. ಸರ್ಕಾರದ ಧೋರಣೆಯನ್ನು ಪ್ರಶ್ನಿಸಿ ವಿಶ್ವಾಸ್ ಅವರು 2023ರಲ್ಲಿ ಹೈಕೋರ್ಟ್‌ ಮೂಲಕ ನೋಟಿಸ್‌ ನೀಡಿದ ಬಳಿಕ, 4.74 ಲಕ್ಷ ರೂ.ಗಳನ್ನು ಸರ್ಕಾರ ಪಾವತಿಸಿತ್ತು.

ಆದಾಗ್ಯೂ, ಪದಕಗಳನ್ನು ಗೆದ್ದಿದ್ದಕ್ಕಾಗಿ ಗೌರವಾರ್ಥವಾಗಿ ನೀಡಬೇಕಿದ್ದ 6 ಲಕ್ಷ ರೂಪಾಯಿಗಳಲ್ಲಿ 1.26 ಲಕ್ಷ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿರಲಿಲ್ಲ. ಇದನ್ನು ಪ್ರಶ್ನಿಸಿ ವಿಶ್ವಾಸ್‌ ಮತ್ತೆ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, “ಚಾಂಪಿಯನ್‌ ವಿಶ್ವಾಸ್ ಅವರು ಕೈಗಳಿಲ್ಲದೆ ಇದ್ದರೂ, ಈಜುಕೊಳಗಳಿಗೆ ಧುಮುಕಿ ವಿಜಯಶಾಲಿಯಾಗಿದ್ದಾರೆ. ಮಾತ್ರವಲ್ಲದೆ, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಅವರನ್ನು ರಾಜ್ಯ ಸರ್ಕಾರವು ಗೌರವಿಸಬೇಕು. ಆದರೆ, ಅವರ ಹಕ್ಕನ್ನು ಹತ್ತಿಕ್ಕಿದೆ. ಇದು ಉತ್ತಮ ನಡೆಯಲ್ಲ” ಎಂದು ಹೇಳಿದೆ.

“ವಿಶ್ವಾಸ್‌ ಅವರಿಗೆ ಸರ್ಕಾರ ಬಿಡುಗಡೆ ಮಾಡಬೇಕಿದ್ದ 1.26 ಲಕ್ಷ ರೂ. ಮತ್ತು ಅವರ ಮೊಕದ್ದಮೆ ವೆಚ್ಚ 74 ಲಕ್ಷ ರೂ. ಎರಡೂ ಸೇರಿ 2 ಲಕ್ಷ ರೂ. ಪಾವತಿ ಮಾಡಬೇಕು. ಸರ್ಕಾರವು ಎರಡು ವಾರಗಳಲ್ಲಿ ಹಣವನ್ನು ಪಾವತಿಸದಿದ್ದರೆ, ವಿಳಂಬದ ದಿನಗಳಲ್ಲಿ ಎಷ್ಟು ದಿನ ತಡವಾಗುತ್ತದೆಯೋ, ಅಷ್ಟೂ ದಿನಕ್ಕೆ 1,000 ರೂ. ಭತ್ಯೆ ಪಾವತಿಸಬೇಕು” ಎಂದು ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...