ಇಂಗ್ಲೆಂಡ್‌ ಆಟಗಾರರ ವಿರುದ್ಧ ಶುಭ್‌ಮನ್‌ ಗಿಲ್ ವಾಗ್ವಾದ; ವೈರಲ್‌ ಆದ ವಿಡಿಯೋ

Date:

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೊದಲ ದಿನದಾಟದಲ್ಲಿ ಬಾಝ್ ಬಾಲ್ ಬದಲಿಗೆ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಇಂಗ್ಲೆಂಡ್ ಬ್ಯಾಟರ್​ಗಳನ್ನು ವ್ಯಂಗ್ಯವಾಡಿ ಗಮನ ಸೆಳೆದಿದ್ದ ಗಿಲ್, ಇದೀಗ ಮೂರನೇ ದಿನದಾಟದ ಅಂತ್ಯದ ವೇಳೆ ಆಂಗ್ಲ ಬ್ಯಾಟರ್​ಗಳ ಚಳಿ ಬಿಡಿಸಲು ಮುಂದಾಗಿದ್ದಾರೆ. ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ 387 ರನ್​ಗಳಿಸಿ ಆಲೌಟ್ ಆದರೆ, ಟೀಮ್ ಇಂಡಿಯಾ ಕೂಡ 387 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತ್ತು.

ಇದರ ಬೆನ್ನಲ್ಲೇ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದರು. ಆದರೆ ಮೂರನೇ ದಿನದಾಟದ ಅಂತ್ಯದ ವೇಳೆ ಇನಿಂಗ್ಸ್ ಆರಂಭಿಸಿದ್ದರಿಂದ ಇಂಗ್ಲೆಂಡ್ ಆರಂಭಿಕ ಜೋಡಿ ಸಮಯ ವ್ಯರ್ಥ ಮಾಡುವ ಕಾಯಕಕ್ಕೆ ಕೈ ಹಾಕಿದ್ದರು. ಇತ್ತ ಅಲ್ಪ ಸಮಯದೊಳಗೆ ಎಷ್ಟು ಸಾಧ್ಯವೊ ಅಷ್ಟು ಓವರ್​ಗಳನ್ನು ಎಸೆಯುವ ನಿರ್ಧಾರದೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾಗೆ ಇಂಗ್ಲೆಂಡ್ ಬ್ಯಾಟರ್​ಗಳ ನಾಟಕ ಸ್ಪಷ್ಟವಾಗಿ ತಿಳಿಯಿತು.

ಜಸ್​ಪ್ರೀತ್ ಬುಮ್ರಾ ಎಸೆದ 2ನೇ ಓವರ್​ನ 5ನೇ ಎಸೆತವು ಇಂಗ್ಲೆಂಡ್ ಆಟಗಾರ ಝಾಕ್ ಕ್ರಾಲಿ ಗ್ಲೌಸ್​ಗೆ ತಾಗಿದೆ. ಇದನ್ನೆ ನೆಪ ಮಾಡಿಕೊಂಡ ಕ್ರಾಲಿ ಕ್ರೀಸ್​ನಿಂದ ಹೊರಗೆ ನಿಂತು ನೋವಾಗುತ್ತಿದೆ ಎಂದು ನಾಟಕ ಮಾಡಲಾರಂಭಿಸಿದ್ದಾರೆ. ಇತ್ತ ಟೀಮ್ ಇಂಡಿಯಾ ಆಟಗಾರರು ಝಾಕ್ ಕ್ರಾಲಿಯ ಈ ನಾಟಕವನ್ನು ಚಪ್ಪಾಳೆ ತಟ್ಟುತ್ತಾ ಗೇಲಿ ಮಾಡಿದರು. ಅಲ್ಲದೆ ಜ್ಯಾಕ್ ಕ್ರಾಲಿ ಹಲವಾರು ಬಾರಿ ಸ್ಕ್ರೀಜ್‌ನಿಂದ ದೂರ ಸರಿದು ಸಮಯ ವ್ಯರ್ಥ ಮಾಡಿದರು. ಇದಕ್ಕೆ ಭಾರತದ ನಾಯಕ ಶುಭ್‌ಮನ್‌ ಗಿಲ್ ಜ್ಯಾಕ್ ಕ್ರಾಲಿಯ ಬಳಿ ಬಂದು ತಮ್ಮ ಕೋಪವನ್ನು ವ್ಯಕ್ತಪಡಿಸಲು ಕೈಯಿಂದ ಸನ್ನೆ ಮಾಡಿದರು. “ಕೊನೆಯವರೆಗೂ ಆಡುವಷ್ಟು ತಾಕತ್ತು ಪ್ರದರ್ಶಿಸು” ಎಂದು ಜಾಕ್‌ ಕ್ರಾಲಿಗೆ ಸವಾಲೆಸೆದರು. ಆದಾದ ನಂತರ ಇಬ್ಬರ ನಡುವೆ ಕೆಲಕ್ಷಣಗಳವರೆಗಿನ ವಾಗ್ವಾದಕ್ಕೆ ಕಾರಣವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಇಂಗ್ಲೆಂಡ್‌ ನೆಲದಲ್ಲಿ ಹೊಸ ದಾಖಲೆ ಬರೆದ ಭಾರತದ ಮಹಿಳಾ ಕ್ರಿಕೆಟ್ ತಂಡ

ಆದರೆ ಇಷ್ಟಕ್ಕೆ ಸುಮ್ಮನಾಗದ ಜ್ಯಾಕ್‌ ಕ್ರಾಲಿ, ಕೆಲವು ಎಸೆತಗಳ ನಂತರ ಮತ್ತೆ ಸಮಯ ವ್ಯರ್ಥ ಮಾಡುವ ತಂತ್ರಗಾರಿಕೆಗೆ ಮೊರೆ ಹೋದರು. ಡಕೆಟ್ ಜೊತೆ ಮಾತನಾಡಲು ತೆರಳಿದ ಕ್ರಾಲಿ ಅವರಿಗೆ ಭಾರತೀಯ ಆಟಗಾರರು ವ್ಯಂಗ್ಯ ಮಾಡಲು ಚಪ್ಪಾಳೆ ತಟ್ಟಿದರು. ಈ ವೇಳೆ ಮತ್ತೊಮ್ಮೆ ಕ್ರಾಲಿ ಬಳಿ ಬಂದ ಗಿಲ್‌, ವಾಗ್ವಾದಕ್ಕಿಳಿದರು. ಇದಾದ ಬಳಿಕ ಮತ್ತೋರ್ವ ಆಟಗಾರ ಬೆನ್ ಡಕೆಟ್ ಹಾಗೂ ಶುಭ್​ಮನ್ ಗಿಲ್ ನಡುವೆ ಮಾತಿನ ಚಕಮಕಿ ನಡೆಯಿತು. ಕೂಡಲೇ ಮಧ್ಯಪ್ರವೇಶಿದ ಅಂಪೈರ್‌ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಇದೀಗ ಶುಭ್​ಮನ್ ಗಿಲ್ ಅವರ ಈ ವಾರ್ನಿಂಗ್ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...