ಮೋದಿಯ ತವರು ಗುಜರಾತ್‌ಗೆ ಅತೀ ಹೆಚ್ಚು ಕ್ರೀಡಾ ಅನುದಾನ: ಏಷ್ಯನ್ ಕ್ರೀಡಾಕೂಟದಲ್ಲಿ ಶೂನ್ಯ ಪದಕ

Date:

ಖೇಲೋ ಇಂಡಿಯಾ ಯೋಜನೆಯಡಿ ಅತೀ ಹೆಚ್ಚು ಅನುದಾನ ಪಡೆದಿರುವ ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ಗುಜರಾತ್‌ ರಾಜ್ಯದ ಯಾವ ಕ್ರೀಡಾಪಟುವು ಕೂಡ ಒಂದೂ ಪದಕವನ್ನು ಪಡೆದಿಲ್ಲ. ಈ ಸಂಗತಿಯೂ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿ ಸಾರ್ವಜನಿಕರು ಕೇಂದ್ರ ಸರ್ಕಾರದ ನಡೆಗೆ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 19ನೇ ಏಷ್ಯನ್ ಕ್ರೀಡಕೂಟದಲ್ಲಿ ಭಾರತ 28 ಚಿನ್ನ, 38 ಬೆಳ್ಳಿ ಹಾಗೂ 41 ಕಂಚಿನೊಂದಿಗೆ ಒಟ್ಟು 107 ಪದಕ ಗಳಿಸಿ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿತ್ತು. 107 ಪದಕ ಪಡೆದವರಲ್ಲಿ 75 ಕ್ಕೂ ಹೆಚ್ಚು ಕ್ರೀಡಾಳುಗಳು ಪಂಜಾಬ್‌ ಹಾಗೂ ಹರ್ಯಾಣ ರಾಜ್ಯದವರಾಗಿದ್ದಾರೆ.

ಇವೆರಡು ರಾಜ್ಯಗಳಿಗೆ ಕ್ರೀಡಾಳುಗಳಿಗೆ ನೆರವು ನೀಡುವ ಖೇಲೋ ಇಂಡಿಯಾ ಯೋಜನೆಯಡಿ ಕೇಂದ್ರ ಸರ್ಕಾರ ಅತ್ಯಲ್ಪ ಅನುದಾನ ನೀಡಿತ್ತು. ಹರ್ಯಾಣಕ್ಕೆ 88.89 ಕೋಟಿ ರೂ. ನೀಡಿದ್ದರೆ, ಪಂಜಾಬ್‌ಗೆ 93.71 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ದೇಶದಲ್ಲೇ 608 ಕೋಟಿ ರೂ. ಅನುದಾನದೊಂದಿಗೆ ಅತಿ ಹೆಚ್ಚು ಅನುದಾನ ಪಡೆದಿರುವ ಗುಜರಾತ್ ಒಂದೂ ಪದಕವನ್ನು ಗೆದ್ದಿಲ್ಲ. 503.02 ಕೋಟಿಯೊಂದಿಗೆ ಎರಡನೇ ಅತಿ ಹೆಚ್ಚು ಅನುದಾನ ಪಡೆದಿರುವ ಉತ್ತರ ಪ್ರದೇಶ ಗೆದ್ದಿರುವುದು 10ಕ್ಕೂ ಹೆಚ್ಚು ಪದಕಗಳಷ್ಟೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದಿನ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಹರಿಸಿರುವ ಪ್ಯಾಲೆಸ್ತೀನ್‌ನನ್ನು ಮರಳಿಸಲಿ ಇಸ್ರೇಲ್

ಅನುದಾನ ಬಿಡುಗಡೆಯಲ್ಲೂ ನರೇಂದ್ರ ಮೋದಿ ಸರ್ಕಾರ ತಾರತಮ್ಯವೆಸಗಿದೆ. ಪ್ರಧಾನಿ ತವರು ಹಾಗೂ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ರಾಜ್ಯಗಳಿಗೆ ಅತೀ ಹೆಚ್ಚು ಅನುದಾನ ಬಿಡುಗಡೆ ಮಾಡಿರುವುದಕ್ಕೆ ಸಾರ್ವಜನಿಕರಿಂದ ಪ್ರತಿಭಟನೆ ವ್ಯಕ್ತವಾಗಿದೆ. ಕ್ರೀಡೆಯಲ್ಲಿ ಪಕ್ಷಪಾತ ಸಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖೇಲೋ ಇಂಡಿಯಾ ಯೋಜನೆಯಡಿ 28 ರಾಜ್ಯ ಹಾಗೂ 8 ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 2754.28 ಕೋಟಿ ಅನುದಾನ ನೀಡಲಾಗಿತ್ತು. ಗುಜರಾತ್ ಹಾಗೂ ಉತ್ತರ ಪ್ರದೇಶ ರಾಜ್ಯಗಳಿಗೆ ಅರ್ಧದಷ್ಟು ಅನುದಾನ ನೀಡಲಾಗಿತ್ತು.

ಈ ದಿನ ಸುದ್ದಿ ಓದಿದ್ದೀರಾ? ಇಷ್ಟು ಚೆನ್ನಾಗಿದ್ದೀರಾ, ಯಾಕಿನ್ನೂ ಮದುವೆಯಾಗಿಲ್ಲ ಎಂಬ ವಿದ್ಯಾರ್ಥಿನಿ ಪ್ರಶ್ನೆಗೆ ರಾಹುಲ್ ಸ್ಮಾರ್ಟ್ ಉತ್ತರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...