ಐಪಿಎಲ್ 2023 | ಶುಭಮನ್‌ ಅಮೋಘ ಆಟ; ಗುಜರಾತ್‌ಗೆ ರೋಚಕ ಜಯ

Date:

ಯುವ ಆಟಗಾರ ಶುಭಮನ್ ಗಿಲ್ ಅವರ ಭರ್ಜರಿ ಅರ್ಧ ಶತಕ ಹಾಗೂ ರಶೀದ್‌ ಖಾನ್‌ ಅವರ ಆಲ್‌ರೌಂಡ್‌ ಆಟದ ನೆರವಿನಿಂದ ಗುಜರಾತ್‌ ಟೈಟಾನ್ಸ್‌ ತಂಡ ಚೆನ್ನೈ ತಂಡದ ವಿರುದ್ಧ 5 ವಿಕೆಟ್‌ಗಳ ಜಯಗಳಿಸಿದರು

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 16ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್‌ ಸಿಕ್ಸ್‌ ನೀಡಿದ 178 ನೀಡಿದ ರನ್‌ಗಳ ಗುರಿಯನ್ನು ಹಾರ್ದಿಕ್‌ ಪಾಂಡ್ಯ ನೇತೃತ್ವದ ಗುಜರಾತ್‌ ತಂಡ 19.2 ಓವರ್‌ಗಳಲ್ಲಿ ಗೆಲುವು ಸಾಧಿಸಿದರು.

ಚೆನ್ನೈ ನೀಡಿದ 179 ರನ್‌ ಗುರಿಯೊಂದಿಗೆ ಬ್ಯಾಟಿಂಗ್‌ ಇಳಿದ ಗುಜರಾತ್‌ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ವೃದ್ಧಿಮಾನ್‌ ಸಾಹ (16 ಎಸೆತದಲ್ಲಿ 25 ರನ್‌,2 ಬೌಂಡರಿ, 2 ಸಿಕ್ಸರ್) ಬಿರುಸಿನ ಇನ್ನಿಂಗ್ಸ್‌ನೊಂದಿಗೆ ಆಟವಾಡುತ್ತಿದ್ದರು. ನಾಲ್ಕನೇ ಓವರ್‌ನಲ್ಲಿ ಬೌಲಿಂಗ್‌ ಮಾಡಿದ ರಾಜವರ್ಧನ್ ಹಂಗರಗೇಕರ್, ಸಾಹ ಅವರನ್ನು ಪೆವಿಲಿಯನ್‌ಗೆ ಕಳಿಸಿದರು.   

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಆಟ ಮುಂದುವರೆಸಿದ  ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್  ಉತ್ತಮವಾಗಿ ಇನ್ನಿಂಗ್ಸ್ ಕಟ್ಟಿದರು.  ಆದರೆ ಯುವ ಆಟಗಾರ ಸಾಯಿ, 10 ಓವರ್‌ನಲ್ಲಿ 22 ರನ್‌ ಗಳಿಸಿದ್ದಾಗ ರಾಜವರ್ಧನ್ ಹಂಗರಗೇಕರ್ ಬೌಲಿಂಗ್‌ನಲ್ಲಿ ಧೋನಿಗೆ ಕ್ಯಾಚಿತ್ತು ನಿರ್ಗಮಿಸಿದರು.

ಮೂರನೇ ಕ್ರಮಾಂಕದಲ್ಲಿ ಆಗಮಿಸಿದ ನಾಯಕ ಹಾರ್ದಿಕ್‌ ಪಾಂಡ್ಯ, ಶುಭಮನ್ ಗಿಲ್‌ಗೆ  ಉತ್ತಮ ಜೊತೆಯಾಟ ನೀಡತೊಡಗಿದರು.  ಆದರೆ 13ನೇ ಓವರ್‌ನಲ್ಲಿ  ಸ್ಪಿನ್ನರ್ ರವೀಂದ್ರ ಜಡೇಜಾ, ಪಾಂಡ್ಯರನ್ನು ಬೌಲ್ಡ್‌ ಮಾಡುವ ಮೂಲಕ ಪೆವಿಲಿಯನ್‌ಗೆ ಕಡೆ ದಾರಿ ತೋರಿಸಿದರು.

ಅದ್ಭುತ ಆಟವಾಡಿದ ಶುಭಮನ್ 15ನೇ ಓವರ್‌ನ ಕಡೆಯ ಎಸೆತದಲ್ಲಿ ತುಷಾರ್‌ ದೇಶಪಾಂಡೆ ಬೌಲಿಂಗ್‌ನಲ್ಲಿ ರುತುರಾಜ್‌ ಗಾಯಕ್‌ವಾಡ್‌ಗೆ ಕ್ಯಾಚ್‌ ನೀಡಿ ಔಟಾದರು. ಇವರ ಮನಮೋಹಕ 36 ಎಸೆತಗಳ 63 ರನ್‌ಗಳ ಅಮೋಘ ಆಟದಲ್ಲಿ 6 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್‌ ಒಳಗೊಂಡಿತ್ತು.

ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿದ ವಿಜಯ್‌ ಶಂಕರ್‌ 21 ಎಸೆತಗಳಲ್ಲಿ 27 ರನ್ ಬಾರಿಸಿ ಔಟಾದರು. ಆಪತ್ಬಾಂಧವನಂತೆ ಆಗಮಿಸಿದ ಆಲ್‌ರೌಂಡರ್‌ ರಶೀದ್‌ ಖಾನ್‌ 3 ಎಸೆತಗಳಲ್ಲಿ 10 ರನ್‌ ಗಳಿಸುವ ಮೂಲಕ ಗುಜರಾತ್‌ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಚೆನ್ನೈ ತಂಡದ ಪರ ರಾಜವರ್ಧನ್ ಹಂಗರಗೇಕರ್ /2, ಹಾಗೂ ರವೀಂದ್ರ ಜಡೇಜಾ ತುಷಾರ್‌ ದೇಶಪಾಂಡೆ ತಲಾ ಒಂದೊಂದು ವಿಕೆಟ್ ಪಡೆದರು.

ಇದಕ್ಕೂ ಮುನ್ನ  ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ರುತುರಾಜ್‌ ಗಾಯಕ್ವಾಡ್ ಅವರ ಭರ್ಜರಿ ಆಟದೊಂದಿಗೆ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ  178 ರನ್‌ ಗಳಿಸಿತ್ತು.  50 ಎಸೆತಗಳಲ್ಲಿ 92 ರನ್‌ ಬಾರಿಸಿದ ಗಾಯಕ್ವಾಡ್ ಸ್ಫೋಟಕ 9 ಸಿಕ್ಸರ್ ಹಾಗೂ 4 ಆಕರ್ಷಕ ಬೌಂಡರಿ ಚಚ್ಚಿದ್ದರು. ಉಳಿದಂತೆ ಚೆನ್ನೈ ಪರ ಮೊಯಿನ್ ಆಲಿ 23, ಶಿವಂ ದುಬೆ 19 ಹಾಗೂ ನಾಯಕ ಧೋನಿ 14 ರನ್‌ ಗಳಿಸಿದರು.

ಗುಜರಾತ್‌ ಪರ ರಶೀದ್‌ ಖಾನ್ 26/2, ಅಲ್ಜಾರಿ ಜೊಸೆಫ್ 33/2 ,ಮೊಹಮ್ಮದ್ ಶಮಿ 29/2 ವಿಕೆಟ್ ಗಳಿಸಿ ಯಶಸ್ವಿ ಬೌಲರ್‌ ಎನಿಸಿದರು.

100 ವಿಕೆಟ್​ ಪಡೆದು ಶಮಿ ಸಾಧನೆ

ಗುಜರಾತ್‌ ತಂಡದ ಅನುಭವಿ ವೇಗಿ ಮೊಹಮ್ಮದ್ ಶಮಿ  ಐಪಿಎಲ್‌ನಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಶಮಿ ತಮ್ಮ 94ನೇ  ಐಪಿಎಲ್​ ಪಂದ್ಯದಲ್ಲಿ 100 ವಿಕೆಟ್‌ಗಳನ್ನು ಪೂರೈಸಿದ ಸಾಧನೆ ಮಾಡಿದರು. ಮೊಹಮ್ಮದ್ ಶಮಿ ಅವರು ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಮೊದಲ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...