ಐಪಿಎಲ್ 2023 | ಸಾಯಿ ಸುದರ್ಶನ್‌ ತಾಳ್ಮೆಯ ಆಟ; ಗುಜರಾತ್‌ಗೆ ಸತತ ಎರಡನೇ ಗೆಲುವು

Date:

ಯುವ ಆಟಗಾರ ಸಾಯಿ ಸುದರ್ಶನ್‌ ಅವರ ತಾಳ್ಮೆಯ ಆಟ ಹಾಗೂ ರಶೀದ್, ಶಮಿ ಅವರ ಬೌಲಿಂಗ್‌ ದಾಳಿಯ ಪರಿಣಾಮ ಗುಜರಾತ್‌ ಟೈಟಾನ್ಸ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್ ಗೆಲುವು ಸಾಧಿಸಿತು. ಟೂರ್ನಿಯಲ್ಲಿ ಹಾರ್ದಿಕ್‌ ಪಡೆಯ ಸತತ ಎರಡನೆಯ ಗೆಲುವಾಗಿದೆ.

ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 16ನೇ ಆವೃತ್ತಿಯ 7ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ 4 ವಿಕೆಟ್‌ ನಷ್ಟದೊಂದಿಗೆ 18.2 ಓವರ್‌ನಲ್ಲಿ ಜಯಗಳಿಸಿತು.

ಪ್ರಮುಖ ಆಟಗಾರರಾದ ವೃದ್ಧಿಮಾನ್ ಸಾಹ, ಶುಭಮನ್ ಗಿಲ್, ನಾಯಕ ಹಾರ್ದಿಕ್ ಪಾಂಡ್ಯ ವಿಕೆಟ್ ಕಳೆದುಕೊಂಡರೂ ಸಾಯಿ ಸುದರ್ಶನ್‌ ತಾಳ್ಮೆಯ ಅರ್ಧ ಶತಕ (62),ವಿಜಯ್‌ ಶಂಕರ್‌ (29) ಹಾಗೂ ಡೇವಿಡ್‌ ಮಿಲ್ಲರ್ (31) ಸಮಯೋಚಿತ ಆಟದಿಂದ ತಂಡವು ಗೆಲುವಿನ ಗುರಿ ಮುಟ್ಟಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಗುಜರಾತ್‌ ಟೈಟಾನ್ಸ್ ಬೌಲರ್‌ಗಳಾದ ರಶೀದ್ ಖಾನ್‌, ಮೊಹಮ್ಮದ್ ಶಮಿ ಹಾಗೂ ಅಲ್ಜಾರಿ ಜೆಸೋಫ್ ದಾಳಿಗೆ ಸಿಲುಕಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್‌ ಸಾಧಾರಣ ಮೊತ್ತ ದಾಖಲಿಸಿತ್ತು.

ನಾಯಕ ಡೇವಿಡ್ ವಾರ್ನರ್ 37 (32 ಎಸೆತ, 7 ಬೌಂಡರಿ), ಸರ್ಫರಾಜ್ ಖಾನ್ 30 (34 ಎಸೆತ, 2 ಬೌಂಡರಿ), 11 ಎಸೆತಗಳಲ್ಲಿ 2 ಸಿಕ್ಸರ್‌ನೊಂದಿಗೆ 20 ರನ್‌ ಸಿಡಿಸಿದ ಅಭಿಷೇಕ್ ಪೊರೆಲ್, ಸ್ಪಿನ್ನರ್ ಅಕ್ಷರ್ ಪಟೇಲ್ 22 ಚಂಡುಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್‌ನೊಂದಿಗೆ 36 ರನ್‌ ಬಾರಿಸಿದ್ದು, ಗೌರವಾನ್ವಿತ ಮೊತ್ತ ಕಲೆ ಹಾಕಲು ಕಾರಣವಾಯಿತು.

ಸ್ಪಿನ್ನರ್ ರಶೀದ್‌ ಖಾನ್ 31/3, ಮೊಹಮ್ಮದ್ ಶಮಿ 41/3 ಹಾಗೂ ಅಲ್ಜಾರಿ ಜೆಸೋಫ್ 29/2 ವಿಕೆಟ್ ಪಡೆದು ಉತ್ತಮ ಬೌಲರ್‌ಗಳೆನಿಸಿದರು.

ಪಂತ್ ಅನಿರೀಕ್ಷಿತ ಆಗಮನ; ಪ್ರೇಕ್ಷಕರಗೆ ಅಚ್ಚರಿ

ಕಳೆದ ವರ್ಷ ಡಿಸೆಂಬರ್‌ 30 ರಂದು ಭೀಕರ ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಭಾರತದ ಯುವ ಸ್ಟಾರ್ ಕ್ರಿಕೆಟಿಗ ರಿಷಭ್ ಪಂತ್ ತವರು ಕ್ರೀಡಾಂಗಣಕ್ಕೆ ಆಗಮಿಸಿ ಪ್ರೇಕ್ಷಕರಿಗೆ ಅಚ್ಚರಿ ಮೂಡಿಸಿದರು. ರಿಷಭ್ ಪಂತ್ ಕ್ರೀಡಾಂಗಣಕ್ಕೆ ಮರಳುತ್ತಿದ್ದಂತೆ, ಅಭಿಮಾನಿಗಳು ಅವರನ್ನು ನೋಡಿತ್ತಿದ್ದಂತೆ ಹರ್ಷೋದ್ಘಾರ ಕೂಗಿದರು.

ಅಪಘಾತದಲ್ಲಿ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡ ಬಳಿಕ ಅವರ ಕಾಲಿಗೆ 2 ಸರ್ಜರಿ ಕೂಡ ಮಾಡಲಾಗಿತ್ತು. ಈ ಹಿಂದೆ ದೆಹಲಿ ಕ್ಯಾಪಿಟಲ್ಸ್‌ ತಂಡ ರಿಷಭ್ ಅನುಪಸ್ಥಿತಿಯ ಮೊದಲ ಪಂದ್ಯದಲ್ಲಿ, ಅವರ ಜರ್ಸಿಯನ್ನು ಡಗೌಟ್‌ನಲ್ಲಿ ಇರಿಸಿದ್ದರು. ಆಗ ಡೆಲ್ಲಿ ತಂಡದ ಈ ಕ್ರಮ ಎಲ್ಲರ ಮನಗೆದ್ದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...