6 ದಶಕಗಳ ಕಾಯುವಿಕೆ ಅಂತ್ಯ: ಬಂಗಾಳವನ್ನು ಬಗ್ಗು ಬಡಿದು ರಣಜಿ ಫೈನಲ್ ಪ್ರವೇಶಿಸಿದ ಜಮ್ಮು ಕಾಶ್ಮೀರ

Date:

ಪಶ್ಚಿಮ ಬಂಗಾಳದ ಕಲ್ಯಾಣಿ ನಗರದ ಬಿಸಿಎ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಎರಡು ಬಾರಿಯ ಚಾಂಪಿಯನ್ ಬಂಗಾಳ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದ ಜಮ್ಮು ಮತ್ತು ಕಾಶ್ಮೀರ ತಂಡವು, ತನ್ನ 67 ವರ್ಷಗಳ ರಣಜಿ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸುವ ಮೂಲಕ ಹೊಸ ಮೈಲಿಗಲ್ಲು ನೆಟ್ಟಿದೆ.

ಬಂಗಾಳ ತಂಡದ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರ 8 ವಿಕೆಟ್‌ಗಳ ಅಸಾಧಾರಣ ಸಾಧನೆಯ ನಡುವೆಯೂ, ಜಮ್ಮು-ಕಾಶ್ಮೀರ ಆಟಗಾರರು ತೋರಿದ ಸಂಯಮದ ಆಟ ಅವರಿಗೆ ಈ ಐತಿಹಾಸಿಕ ಗೆಲುವು ತಂದುಕೊಟ್ಟಿತು.

ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಬಂಗಾಳ 328 ರನ್‌ ಗಳಿಸಿದ್ದರೆ, ಜಮ್ಮು-ಕಾಶ್ಮೀರ 302 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಹಿನ್ನಡೆ ಅನುಭವಿಸಿತ್ತು. ಮೊದಲ ಇನಿಂಗ್ಸ್‌ನಲ್ಲಿ ಮೊಹಮ್ಮದ್ ಶಮಿ 8 ವಿಕೆಟ್ ಕಬಳಿಸಿ ಮಿಂಚಿದ್ದರು. ಆದರೆ ಎರಡನೇ ಇನಿಂಗ್ಸ್‌ನಲ್ಲಿ ತಿರುಗೇಟು ನೀಡಿದ ಜಮ್ಮು-ಕಾಶ್ಮೀರ, ವೇಗಿ ಆಕಿಬ್ ನಬಿ ಅವರ (ಪಂದ್ಯದಲ್ಲಿ ಒಟ್ಟು 9 ವಿಕೆಟ್) ನಿಖರ ದಾಳಿಯ ನೆರವಿನಿಂದ ಬಂಗಾಳ ತಂಡವನ್ನು ಕೇವಲ 99 ರನ್‌ಗಳಿಗೆ ಆಲೌಟ್ ಮಾಡಿತು. ಇದರಿಂದ ಜಮ್ಮು-ಕಾಶ್ಮೀರ ತಂಡಕ್ಕೆ ಗೆಲ್ಲಲು ಕೇವಲ 126 ರನ್‌ಗಳ ಸಾಧಾರಣ ಗುರಿ ದೊರೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬ್ಯಾಟ್ ಬೀಸಿದ ‘ಫಿನಿಶರ್’ಗೆ ಕ್ಲೀನ್ ಬೌಲ್ಡ್ ಆದ ಸಂಸದೆ

ಈ ಗುರಿಯನ್ನು ಬೆನ್ನಟ್ಟಿದ ಜಮ್ಮು-ಕಾಶ್ಮೀರ 43 ರನ್ ಗಳಿಸುವಷ್ಟರಲ್ಲಿ ಶುಭಂ ಪುಂಡೀರ್ ಹಾಗೂ ನಾಯಕ ಪರಾಸ್ ಡೋಗ್ರಾ ಅವರ ವಿಕೆಟ್ ಕಳೆದುಕೊಂಡು ಅಲ್ಪ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಬಂಗಾಳ ತಂಡವು ಮತ್ತೆ ಪಂದ್ಯದ ಮೇಲೆ ಹಿಡಿತ ಸಾಧಿಸುವ ಲಕ್ಷಣಗಳು ಗೋಚರಿಸಿದ್ದವು. ಆದರೆ ಒತ್ತಡದ ಪರಿಸ್ಥಿತಿಯಲ್ಲಿ ಅದ್ಭುತ ಜೊತೆಯಾಟವಾಡಿದ ವಂಶಜ್ ಶರ್ಮಾ (ಅಜೇಯ 43) ಮತ್ತು ಅಬ್ದುಲ್ ಸಮದ್ (ಅಜೇಯ 30), ಮುರಿಯದ 55 ರನ್‌ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಅಂತಿಮವಾಗಿ ತಂಡವು 34.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿ ವಿಜಯಿಯಾಯಿತು.

1959-60ರ ಆವೃತ್ತಿಯಲ್ಲಿ ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ್ದ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಇದುವರೆಗೆ ಪ್ರಬಲ ಪ್ರಶಸ್ತಿ ಆಕಾಂಕ್ಷಿ ಎಂದು ಪರಿಗಣಿಸಿರಲಿಲ್ಲ. 2013-14ರ ಆವೃತ್ತಿಯಲ್ಲಿ ನಾಕೌಟ್ ಹಂತ ಪ್ರವೇಶಿಸಿದ್ದೇ ಅವರ ಈವರೆಗಿನ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಆರು ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಚೊಚ್ಚಲ ಬಾರಿಗೆ ಫೈನಲ್ ತಲುಪಿರುವುದು ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಆ ತಂಡದ ಗಮನಾರ್ಹ ಬೆಳವಣಿಗೆಯನ್ನು ಸಾಬೀತುಪಡಿಸಿದೆ.

ಫೆ. 24 ರಂದು ನಡೆಯುವ ಫೈನಲ್‌ ಪಂದ್ಯದಲ್ಲಿ ಪ್ರಶಸ್ತಿ ಸುತ್ತಿಗಾಗಿ ಕರ್ನಾಟಕ ತಂಡವನ್ನು ಎದುರಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...