ಐಪಿಎಲ್‌ 2025 | ಅಶುತೋಷ್‌ ಆರ್ಭಟದಿಂದ ಡೆಲ್ಲಿಗೆ ಜಯ; ಪಂತ್‌ಗೂ ಬಿಸಿ ಮುಟ್ಟಿಸಿದ ಲಖನೌ ಮಾಲೀಕ!

Date:

ಏಳು ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿದ್ದರು ಕೊನೆಯಲ್ಲಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕ್ರೀಸ್‌ಗ ಬಂದ ಅಶುತೋಷ್‌ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಡೆಲ್ಲಿ ತಂಡ ಲಖನೌ ವಿರುದ್ಧ 1 ವಿಕೆಟ್‌ ರೋಚಕ ಜಯ ಸಾಧಿಸಿದೆ.

ವಿಶಾಖಪಟ್ಟಣಂನಲ್ಲಿ ನಡೆದ 18ನೇ ಆವೃತ್ತಿಯ 4ನೇ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಲಖನೌ 8 ವಿಕೆಟ್‌ ನಷ್ಟಕ್ಕೆ 209 ರನ್‌ ಹೊಡೆಯಿತು. ಕಠಿಣ ಸವಾಲು ಬೆನ್ನತ್ತಿದ ಡೆಲ್ಲಿ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡರೂ ಅಂತಿಮವಾಗಿ 19.3 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 211 ರನ್‌ಗಳಿಸಿ ಗೆಲುವು ಪಡೆಯಿತು.

ಡೆಲ್ಲಿ 7 ರನ್‌ಗಳಿಸುವಷ್ಟರಲ್ಲೇ 3 ವಿಕೆಟ್‌ ಕಳೆದುಕೊಂಡು ತೊಂದರೆಯಲ್ಲಿತ್ತು. ನಾಯಕ ಅಕ್ಷರ್‌ ಪಟೇಲ್‌ 22 ರನ್ (11 ಎಸೆತ, 3 ಬೌಂಡರಿ, 1 ಸಿಕ್ಸ್‌), ಡುಪ್ಲೆಸಿಸ್‌ 29 ರನ್‌(18 ಎಸೆತ, 3 ಬೌಂಡರಿ, 2 ಸಿಕ್ಸ್‌) ಸಿಡಿಸಿ ಸ್ವಲ್ಪ ಚೇತರಿಕೆ ನೀಡಿದರು. ಟ್ರಿಸ್ಟಾನ್ ಸ್ಟಬ್ಸ್ 34 ರನ್‌(22 ಎಸೆತ, 1 ಬೌಂಡರಿ, 3 ಸಿಕ್ಸ್‌) ಸಿಡಿಸಿ ಔಟಾದಾಗ ಪಂದ್ಯ ಲಖನೌ ಪರ ವಾಲಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

7ನೇ ವಿಕೆಟಿಗೆ ಅಶುತೋಷ್‌ ಮತ್ತು ನಿಗಮ್‌ 22 ಎಸೆತಗಳಲ್ಲಿ 55 ರನ್‌ ಹೊಡೆಯುವ ಮೂಲಕ ಪಂದ್ಯಕ್ಕೆ ರೋಚಕ ತಿರುವು ನೀಡಿದರು. ಡೆಲ್ಲಿ ಪರ 16ನೇ ಓವರ್‌ನಲ್ಲಿ 20 ರನ್‌, 17 ನೇ ಓವರ್‌ನಲ್ಲಿ 3 ರನ್‌, 18ನೇ ಓವರ್‌ನಲ್ಲಿ 17 ರನ್‌, 19ನೇ ಓವರ್‌ನಲ್ಲಿ 16 ರನ್‌ ಬಂದಿತ್ತು. 20ನೇ ಓವರ್‌ನಲ್ಲಿ 6 ರನ್‌ ಬೇಕಿತ್ತು.

ಸ್ಟ್ರೈಕ್‌ನಲ್ಲಿದ್ದ ಮೋಹಿತ್‌ ಶರ್ಮಾ ಮೊದಲ ಎಸೆತದಲ್ಲಿ ಸ್ಟಂಪ್‌ ಔಟಾಗುವ ಸಾಧ್ಯತೆ ಇತ್ತು. ಎರಡನೇ ಎಸೆತದಲ್ಲಿ 1 ರನ್‌ ಓಡಿ ಅಶುತೋಷ್‌ಗೆ ಸ್ಟ್ರೈಕ್‌ ನೀಡಿದರು.3ನೇ ಎಸೆತವನ್ನು ಅಶುತೋಶ್‌ ಸಿಕ್ಸ್‌ಗೆ ಅಟ್ಟುವ ಮೂಲಕ ಡೆಲ್ಲಿ ತಂಡಕ್ಕೆ ಜಯವನ್ನು ತಂದುಕೊಟ್ಟರು.

ಈ ಸುದ್ದಿ ಓದಿದ್ದೀರಾ? ಪಾಕಿಸ್ತಾನ V/s ನ್ಯೂಜಿಲೆಂಡ್‌ | ಬ್ಯಾಟರ್​ಗಳ ಅಬ್ಬರ; ವಿಶ್ವ ದಾಖಲೆ ಛಿದ್ರಗೊಳಿಸಿದ ಪಾಕ್‌ ತಂಡ

ವಿಪ್ರಜ್‌ ನಿಗಮ್‌ 39 ರನ್‌(15 ಎಸೆತ, 5 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದರೆ ಅಶುತೋಷ್‌ ಔಟಾಗದೇ 66 ರನ್‌(31 ಎಸೆತ, 5 ಬೌಂಡರಿ, 5 ಸಿಕ್ಸ್‌) ಸಿಡಿಸಿ ಗೆಲುವು ತಂದರು.

ಈ ಮೊದಲು ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಲಖನೌ ಉತ್ತಮ ಆರಂಭ ಪಡೆಯಿತು. ಮಾಕ್ರಮ್‌ ಮತ್ತು ಮಿಚೆಲ್‌ ಮಾರ್ಶ್‌ ಮೊದಲ ವಿಕೆಟಿಗೆ 46 ರನ್‌ ಹೊಡೆದರು. ಎರಡನೇ ವಿಕೆಟಿಗೆ ಮಾರ್ಶ್‌ ಮತ್ತು ನಿಕೂಲಸ್‌ ಪೂರನ್‌ 42 ರನ್‌ ಎಸೆತಗಳಲ್ಲಿ 87 ರನ್‌ ಜೊತೆಯಾಟವಾಡಿದರು.

ಮಾರ್ಶ್‌ 72 ರನ್‌(36 ಎಸೆತ, 6 ಬೌಂಡರಿ, 6 ಸಿಕ್ಸರ್‌) ಹೊಡೆದರೆ ಪೂರನ್‌ 75 ರನ್‌(30 ಎಸೆತ, 6 ಬೌಂಡರಿ, 7 ಸಿಕ್ಸ್‌) ಹೊಡೆದು ಔಟಾದರು. ಕೊನೆಯಲ್ಲಿ ಡೇವಿಡ್‌ ಮಿಲ್ಲರ್‌ ಔಟಾಗದೇ 27 ರನ್‌( 19 ಎಸೆತ, 1 ಬೌಂಡರಿ, 2 ಸಿಕ್ಸ್‌) ಸಿಡಿಸಿದ ಪರಿಣಾಮ ಲಖನೌ 200 ರನ್‌ಗಳ ಗಡಿಯನ್ನು ದಾಟಿತು.

ಪಂತ್‌ಗೂ ಬಿಸಿ ಮುಟ್ಟಿಸಿದ ಲಖನೌ ಮಾಲೀಕ ಸಂಜೀವ್‌ ಗೋಯಂಕಾ!

ಐಪಿಎಲ್​ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ 1 ವಿಕೆಟ್​ನಿಂದ ಸೋಲೊಪ್ಪಿಕೊಂಡಿದೆ.​ ಈ ಸೋಲಿನ ಬೆನ್ನಲ್ಲೇ ಎಲ್‌ಎಸ್‌ಜಿ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಕಳೆದ ಆವೃತ್ತಿಯಲ್ಲಿ​ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಎಲ್‌ಎಸ್‌ಜಿ ತಂಡವು ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬಳಿಕ ಸಂಜೀವ್ ಗೊಯೆಂಕಾ ಎಲ್​ಎಸ್​ಜಿ ತಂಡದ ನಾಯಕರಾಗಿದ್ದ ಕೆ ಎಲ್ ರಾಹುಲ್ ಅವರನ್ನು ಮೈದಾನದಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

ಲಖನೌ ಸೂಪರ್ ಜೈಂಟ್ಸ್ ತಂಡದ ಮಾಲೀಕರ ಈ ನಡೆಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಅಲ್ಲದೆ ಇದೇ ಕಾರಣದಿಂದ ಕೆ ಎಲ್ ರಾಹುಲ್ ಕೂಡ ಎಲ್‌ಎಸ್‌ಜಿ ತಂಡವನ್ನು ತೊರೆದಿದ್ದರು. ಇದೀಗ ನಾಯಕ ಬದಲಾದರೂ, ಲಖನೌ ಸೂಪರ್ ಜೈಂಟ್ಸ್ ಮಾಲೀಕರು ಮಾತ್ರ ಬದಲಾಗಿಲ್ಲ.

ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಹೊಸ ನಾಯಕ ರಿಷಭ್ ಪಂತ್ ಅವರೊಂದಿಗೆ ಸಂಜೀವ್ ಗೊಯೆಂಕಾ ಪಂದ್ಯದ ಬಗ್ಗೆ ಚರ್ಚಿಸುತ್ತಿರುವುದು ದೃಶ್ಯಗಳಲ್ಲಿ ಕಾಣಿಸಿಕೊಂಡಿದೆ. ಇದ ಕೆ ಎಲ್ ರಾಹುಲ್​ಗೆ ಆದ ಪರಿಸ್ಥಿತಿಯೇ ಪಂತ್​ಗೂ ಬಂದು ಎರಗಲಿದೆಯಾ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

Sanjeev goenka
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...