ವಾಷಿಂಗ್ಟನ್ ಸುಂದರ್ ಜತೆ ತಮಿಳಿನಲ್ಲಿ ಮಾತನಾಡಿದ ಕನ್ನಡಿಗ ರಾಹುಲ್: ಕಾಮೆಂಟರಿ ಬಾಕ್ಸ್‌ನಲ್ಲಿ ‘ರಾಷ್ಟ್ರಭಾಷೆ’ ವಿವಾದ

Date:

ಇಲ್ಲಿನ ಬಿಸಿಎ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಸಾಧಿಸಿದೆ. ಆದರೆ, ಪಂದ್ಯದ ವೇಳೆ ವಿಕೆಟ್ ಕೀಪರ್, ಕನ್ನಡಿಗ ಕೆ ಎಲ್ ರಾಹುಲ್ ಮತ್ತು ಬೌಲರ್ ವಾಷಿಂಗ್ಟನ್ ಸುಂದರ್ ನಡುವಿನ ತಮಿಳು ಸಂಭಾಷಣೆ ಹಾಗೂ ಈ ಕುರಿತು ವೀಕ್ಷಕ ವಿವರಣೆಗಾರ (ಕಾಮೆಂಟೇಟರ್) ಸಂಜಯ್ ಬಂಗಾರ್ ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

​ಪಂದ್ಯದ ನಿರ್ಣಾಯಕ ಹಂತದಲ್ಲಿ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಅವರಿಗೆ ಬೌಲಿಂಗ್ ಸಲಹೆಗಳನ್ನು ನೀಡುವಾಗ ರಾಹುಲ್ ತಮಿಳು ಭಾಷೆಯನ್ನು ಬಳಸಿದರು. ಈ ವೇಳೆ ಕಾಮೆಂಟರಿ ಬಾಕ್ಸ್‌ನಲ್ಲಿದ್ದ ಮಾಜಿ ಕ್ರಿಕೆಟಿಗರಾದ ವರುಣ್ ಆರೋನ್ ಮತ್ತು ಸಂಜಯ್ ಬಂಗಾರ್ ನಡುವೆ ನಡೆದ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

​ಏನಿದು ಘಟನೆ?
ನ್ಯೂಜಿಲೆಂಡ್ ಬ್ಯಾಟರ್‌ಗಳಾದ ಡೆವೊನ್ ಕಾನ್ವೇ ಮತ್ತು ಹೆನ್ರಿ ನಿಕೋಲ್ಸ್ ಉತ್ತಮ ಆರಂಭ ಪಡೆದಿದ್ದ ಸಮಯವದು. ಈ ವೇಳೆ ದಾಳಿಗಿಳಿದ ವಾಷಿಂಗ್ಟನ್ ಸುಂದರ್ ಅವರಿಗೆ, ಚೆಂಡಿನ ವೇಗವನ್ನು ತಗ್ಗಿಸುವಂತೆ ವಿಕೆಟ್ ಹಿಂದಿದ್ದ ರಾಹುಲ್ ತಮಿಳಿನಲ್ಲಿ ಸೂಚನೆ ನೀಡುತ್ತಿದ್ದರು. ಸುಂದರ್ ಅವರ ಮಾತೃಭಾಷೆ ತಮಿಳು ಆಗಿರುವುದರಿಂದ, ಅವರಿಗೆ ವಿಷಯವನ್ನು ಸ್ಪಷ್ಟವಾಗಿ ಅರ್ಥಮಾಡಿಸಲು ರಾಹುಲ್ ಈ ಮಾರ್ಗ ಅನುಸರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಸ್ಟಂಪ್ ಮೈಕ್‌ನಲ್ಲಿ ರಾಹುಲ್ ತಮಿಳು ಮಾತು ಕೇಳಿಸುತ್ತಿದ್ದಂತೆಯೇ, ಕಾಮೆಂಟರಿ ಮಾಡುತ್ತಿದ್ದ ವರುಣ್ ಆರೋನ್, “ಕೆ.ಎಲ್.ರಾಹುಲ್ ವಾಷಿಂಗ್ಟನ್ ಸುಂದರ್ ಜತೆ ತಮಿಳಿನಲ್ಲಿ ಮಾತನಾಡಬೇಕಾಗಿ ಬಂತು. ಅವರು ವೇಗವಾಗಿ ಬೌಲಿಂಗ್ ಮಾಡದಂತೆ ಹೇಳುತ್ತಿದ್ದಾರೆ. ಸಂಜಯ್ ಭಾಯ್, ಸುಂದರ್ ಅವರಿಗೆ ತಮಿಳು ಚೆನ್ನಾಗಿ ಅರ್ಥವಾಗುತ್ತದೆ ಎಂಬುದನ್ನು ನೀವು ಒಪ್ಪುವುದಿಲ್ಲವೇ?” ಎಂದು ಸಹ-ಕಾಮೆಂಟೇಟರ್ ಸಂಜಯ್ ಬಂಗಾರ್ ಅವರನ್ನು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಟಿ20 ಆರ್ಭಟದಲ್ಲಿ ಮಂಕಾಗುತ್ತಿರುವ ‘ಏಕದಿನ’ದ ಅಸ್ತಿತ್ವ: ಕ್ರಿಕೆಟ್ ಜಗತ್ತಿನ ಮುಂದಿದೆ ಯಕ್ಷಪ್ರಶ್ನೆ

​ಇದಕ್ಕೆ ಪ್ರತ್ಯುತ್ತರ ನೀಡಿದ ಭಾರತ ತಂಡದ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್, “ನಾನು ರಾಷ್ಟ್ರಭಾಷೆಯನ್ನು (ಹಿಂದಿ) ಹೆಚ್ಚು ನಂಬುತ್ತೇನೆ,” ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು. ತಕ್ಷಣವೇ ಪ್ರತಿಕ್ರಿಯಿಸಿದ ಆರೋನ್, “ನಾನು ಪ್ರಾದೇಶಿಕ ಭಾಷೆಗಳನ್ನು ಮಾತ್ರ ನಂಬುತ್ತೇನೆ ಎಂದು ಎಲ್ಲಿ ಹೇಳಿದೆ?” ಎಂದು ಮರುಪ್ರಶ್ನಿಸಿದರು. ನಂತರ ಬಂಗಾರ್, “ನೋಡಿ, ಹಿಂದಿನ ಎಸೆತವನ್ನು ಅವರು 92 ಕಿ.ಮೀ ವೇಗದಲ್ಲಿ ಎಸೆದಿದ್ದಾರೆ. ಹೀಗಾಗಿ ಭಾಷೆ ಅಷ್ಟು ಮುಖ್ಯ ಎಂದು ನನಗನ್ನಿಸುವುದಿಲ್ಲ,” ಎಂದು ಮಾತು ಬದಲಿಸಿದರು.

​ಹಿಂದಿ ರಾಷ್ಟ್ರಭಾಷೆಯಲ್ಲ: ವಾಸ್ತವವೇನು?
ಸಂಜಯ್ ಬಂಗಾರ್ ಅವರು ಪರೋಕ್ಷವಾಗಿ ಹಿಂದಿಯನ್ನು ‘ರಾಷ್ಟ್ರಭಾಷೆ’ ಎಂದು ಉಲ್ಲೇಖಿಸಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಾಸ್ತವದಲ್ಲಿ ಭಾರತದ ಸಂವಿಧಾನದ ಪ್ರಕಾರ ದೇಶಕ್ಕೆ ಯಾವುದೇ ‘ರಾಷ್ಟ್ರಭಾಷೆ’ ಇಲ್ಲ. ಸಂವಿಧಾನದ 8ನೇ ಪರಿಚ್ಛೇದದ ಅಡಿಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಿಗೆ ಕೇಂದ್ರ ಸರ್ಕಾರದ ಆಡಳಿತಕ್ಕೆ ಬಳಸುವ ‘ಅಧಿಕೃತ ಭಾಷೆಗಳ’ ಸ್ಥಾನಮಾನವಿದೆಯೇ ಹೊರತು, ರಾಷ್ಟ್ರಭಾಷೆಯ ಸ್ಥಾನಮಾನವಿಲ್ಲ. ಕನ್ನಡಿಗ ರಾಹುಲ್ ಸಮಯೋಚಿತವಾಗಿ ತಮಿಳು ಬಳಸಿದ್ದನ್ನು ಸಮರ್ಥಿಸುವ ಬದಲು ಬಂಗಾರ್ ‘ರಾಷ್ಟ್ರಭಾಷೆ’ಯ ಪಾಠ ಮಾಡಲು ಹೋಗಿದ್ದು ಕ್ರೀಡಾಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಭಾರತಕ್ಕೆ 4 ವಿಕೆಟ್‌ಗಳ ಜಯ
ವಿವಾದದ ನಡುವೆಯೂ ಟೀಂ ಇಂಡಿಯಾ ಅಮೋಘ ಪ್ರದರ್ಶನ ನೀಡಿತು. ನ್ಯೂಜಿಲೆಂಡ್ ನೀಡಿದ್ದ 301 ರನ್‌ಗಳ ಗುರಿಯನ್ನು ಬೆನ್ನತ್ತಿದ ಭಾರತ, ವಿರಾಟ್ ಕೊಹ್ಲಿ (93) ಮತ್ತು ನಾಯಕ ಶುಭಮನ್ ಗಿಲ್ (56) ಅವರ ಜವಾಬ್ದಾರಿಯುತ ಆಟದ ನೆರವಿನಿಂದ 4 ವಿಕೆಟ್‌ಗಳ ಜಯ ಸಾಧಿಸಿತು. ಶ್ರೇಯಸ್ ಅಯ್ಯರ್ 49 ರನ್ ಗಳಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.
​ಇದಕ್ಕೂ ಮುನ್ನ ನ್ಯೂಜಿಲೆಂಡ್ ಪರ ಡ್ಯಾರಿಲ್ ಮಿಚೆಲ್ ಅರ್ಧಶತಕ ಬಾರಿಸಿ ತಂಡದ ಮೊತ್ತವನ್ನು 300ಕ್ಕೆ ತಲುಪಿಸಿದರು. ಭಾರತದ ಪರ ಹರ್ಷಿತ್ ರಾಣಾ, ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ತಲಾ 2 ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ಭಾರತ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...