ಅಮಾಯಕ ಕಂದಮ್ಮಗಳು ಸಾಯುತ್ತಿವೆ, ಜಗತ್ತು ಮೌನವಾಗಿದೆ: ಕ್ರಿಕೆಟಿಗ ಇರ್ಫಾನ್ ಪಠಾಣ್ ನೋವಿನ ನುಡಿ

Date:

ಇಸ್ರೇಲ್ – ಹಮಾಸ್ ಹೋರಾಟಗಾರರ ಯುದ್ಧದಲ್ಲಿ ಅಮಾಯಕರು ಮೃತಪಡುತ್ತಿದ್ದಾರೆ. ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪ್ರಪಂಚದಾದ್ಯಂತದ ಕೆಲವು ಕ್ರೀಡಾಪಟುಗಳು ಈ ಇಸ್ರೇಲ್‌, ಗಾಝಾ ಪಟ್ಟಣದಲ್ಲಿ ನಡೆಸುತ್ತಿರುವ ದೌರ್ಜನ್ಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ನಡುವೆ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಕೂಡ ಗಾಝಾ ದುರಂತದಲ್ಲಿ ದಿನನಿತ್ಯವು ಅಮಾಯಕರು ಮೃತಪಡುತ್ತಿರುವ ಬಗ್ಗೆ ನೋವನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಇರ್ಫಾನ್ ಪಠಾಣ್ ಅವರು, ‘ಗಾಝಾದಲ್ಲಿ 0-10 ವರ್ಷ ವಯಸ್ಸಿನ ಮುಗ್ಧ ಮಕ್ಕಳ ಹತ್ಯೆಯಾಗುತ್ತಿದೆ. ಇಷ್ಟೆಲ್ಲಾ ಆದರೂ ಜಗತ್ತು ಮೌನವಾಗಿದೆ. ಒಬ್ಬ ಕ್ರೀಡಾಪಟುವಾಗಿ ನನಗೆ ನನ್ನ ಅಭಿಪ್ರಾಯ ವ್ಯಕ್ತಪಡಿಸಲು ಮಾತ್ರ ಸಾಧ್ಯ. ಆದರೆ ವಿಶ್ವ ನಾಯಕರು ಒಂದಾಗಲು ಮತ್ತು ಈ ಪ್ರಜ್ಞಾಶೂನ್ಯ ಹತ್ಯೆಯನ್ನು ಕೊನೆಗೊಳಿಸಲು ಇದು ಉತ್ತಮ ಸಮಯ. ಗಾಝಾದಲ್ಲಿ ಮಕ್ಕಳ ಹತ್ಯೆಯನ್ನು ನಿಲ್ಲಿಸಿ” ಎಂದು ವಿಶ್ವಸಂಸ್ಥೆಗೆ ಟ್ಯಾಗ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಕಾಂಗ್ರೆಸ್‌ಗೆ ಬೆಂಬಲ ಎಂದ ವೈ ಎಸ್ ಶರ್ಮಿಳಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿಗೆ ಇಸ್ರೇಲ್ ಗಾಝಾದ ಉತ್ತರದಲ್ಲಿರುವ ನಿರಾಶ್ರಿತರ ಶಿಬಿರವನ್ನು ನಾಶ ಮಾಡಿದೆ. ಹಮಾಸ್ ಇರುವ ಭೂಪ್ರದೇಶದಲ್ಲಿ ನೂರಾರು ಪ್ಯಾಲೇಸ್ತೀನ್‌ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಹಾಗೂ ಸಾವಿರಾರು ಮಂದಿ ಗಾಯಗೊಂಡಿದ್ದಾರೆ.

ಇಸ್ರೇಲ್‌ ನಡೆಸುತ್ತಿರುವ ದಿನನಿತ್ಯದ ವೈಮಾನಿಕ ದಾಳಿಯಿಂದ ಪ್ಯಾಲಿಸ್ತೀನಿ ಸೇನೆಯ ಜೊತೆ ಸಾವಿರಾರು ಅಮಾಯಕರು ಹತರಾಗಿದ್ದಾರೆ. ಇತ್ತೀಚಿನ ವರದಿಗಳಂತೆ 10 ಸಾವಿಕ್ಕೂ ಹೆಚ್ಚು ಮಂದಿ ನಾಗರಿಕರು ಮೃತಪಟ್ಟಿದ್ದಾರೆ. ಅಸುನೀಗಿದವರಲ್ಲಿ ಬಹುತೇಕರು ಮಕ್ಕಳು, ಮಹಿಳೆಯರೆ ಇದ್ದಾರೆ. ಅಮೆರಿಕ ಸೇರಿದಂತೆ ಯೂರೋಪಿನ ಕೆಲವು ರಾಷ್ಟ್ರಗಳು ಇಸ್ರೇಲ್‌ ನಡೆಸುತ್ತಿರುವ ನರಹತ್ಯೆಗೆ ನೇರವಾಗಿ ಬೆಂಬಲ ನೀಡುತ್ತಿರುವುದು ಬಹುತೇಕರಲ್ಲಿ ಬೇಸರ ತಂದಿದೆ.

ಸ್ವತಃ ವಿಶ್ವಸಂಸ್ಥೆ ಕದನ ವಿರಾಮಕ್ಕೆ ಮನವಿ ಮಾಡಿಕೊಂಡರೂ ರಕ್ತ ಪಿಪಾಸು ಇಸ್ರೇಲ್ ಒಪ್ಪುತ್ತಿಲ್ಲ. ಮಸೀದಿ, ಚರ್ಚ್‌ಗಳ ಜೊತೆಗೆ ನಿರಾಶ್ರಿತರ ಶಿಬಿರಗಳ ಮೇಲೆ ನಿತ್ಯವೂ ದಾಳಿಗಳು ನಡೆಯುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...