ಏಕದಿನ ವಿಶ್ವಕಪ್‌ 2023 | ಆಗಸ್ಟ್‌ 29 ʻಡೆಡ್‌ಲೈನ್‌ʼ ನಿಗದಿಪಡಿಸಿದ ಐಸಿಸಿ

Date:

ಐಸಿಸಿ ಏಕದಿನ ವಿಶ್ವಕಪ್‌ 2023 ಟೂರ್ನಿಯು ಅಕ್ಟೋಬರ್‌-ನವೆಂಬರ್‌ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿದೆ.

ಹಾಲಿ ಚಾಂಪಿಯನ್‌ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ನ್ಯೂಜಿಲೆಂಡ್, ಹಾಗೂ ಆತಿಥೇಯ ಭಾರತ ಸೇರಿದಂತೆ ಒಟ್ಟು 7 ತಂಡಗಳು ಈಗಾಗಲೇ ಟೂರ್ನಿಗೆ ಅರ್ಹತೆ ಪಡೆದಿವೆ. ಉಳಿದ 3 ಸ್ಥಾನಗಳಿಗಾಗಿ 15 ತಂಡಗಳ ನಡುವೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ.

 ಈ ನಡುವೆ ಮಹತ್ವದ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳುವ ತಂಡಗಳಿಗೆ, ತಮ್ಮ ಆಟಗಾರರ ಪಟ್ಟಿಯನ್ನು ಸಲ್ಲಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಗಸ್ಟ್ 29ರ ಗಡುವನ್ನು ನಿಗದಿಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯು ಅಕ್ಟೋಬರ್ 5ರಿಂದ ಪ್ರಾರಂಭವಾಗಲಿದೆ. ಹೀಗಾಗಿ ತಂಡವನ್ನು ಅಂತಿಮಗೊಳಿಸಲು 2 ತಿಂಗಳುಗಳ ಅವಧಿ ಬಾಕಿಯಿದೆ. ಆದರೆ ಐಸಿಸಿಗೆ ಸಲ್ಲಿಸಲಾಗುವ ಪಟ್ಟಿಯಲ್ಲಿ, ಪಂದ್ಯಾವಳಿ ಪ್ರಾರಂಭವಾಗುವ ಒಂದು ವಾರ ಮುಂಚಿತವಾಗಿ ಬದಲಾವಣೆ ಮಾಡಿಕೊಳ್ಳಲು, ಅವಕಾಶವಿರುತ್ತದೆ. ಇದಾದ ಬಳಿಕ ಆಟಗಾರರ ಬದಲಾವಣೆಗೆ  ಐಸಿಸಿ ತಾಂತ್ರಿಕ ಸಮಿತಿಯ ಒಪ್ಪಿಗೆ ಪಡೆಯುವ ಅಗತ್ಯವಿದೆ.

ಈ ಸುದ್ದಿ ಓದಿದ್ದೀರಾ?: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ; ಐಪಿಎಲ್‌ ಸ್ಟಾರ್‌ ಆಟಗಾರರಿಗೆ ಸ್ಥಾನ

ಬಿಸಿಸಿಐಗೆ ತಲೆನೋವು!

ಐಸಿಸಿ ವಿಧಿಸಿರುವ ʻಡೆಡ್‌ಲೈನ್‌ʼ ಬಿಸಿಸಿಐ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ. ಫೆಬ್ರವರಿಯಲ್ಲಿ ಚೇತನ್‌ ಶರ್ಮಾ ರಾಜೀನಾಮೆ ನೀಡಿದ ಬಳಿಕ ಹಿರಿಯರ ಆಯ್ಕೆ ಸಮಿತಿಯು ʻಅಧ್ಯಕ್ಷʼರಿಲ್ಲದೆ ಕಾರ್ಯ ನಿರ್ವಹಿಸುತ್ತಿದೆ. ವಿಶ್ವಕಪ್‌ಗೂ ಮುನ್ನ ಭಾರತ ತಂಡ ವೆಸ್ಟ್‌ ಇಂಡೀಸ್‌, ಏಷ್ಯಾ ಕಪ್‌ ಮತ್ತು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನಾಡಲಿದೆ.

ಚೇತನ್ ಶರ್ಮಾ ರಾಜೀನಾಮೆ ನೀಡಿ ಅದಾಗಲೇ ಐದು ತಿಂಗಳು ಕಳೆದಿದೆ. ಸುಬ್ರೋತೊ ಬ್ಯಾನರ್ಜಿ, ಸಲೀಲ್ ಅಂಕೋಲಾ, ಶ್ರೀಧರನ್ ಶರತ್ ಸದ್ಯಸರಾಗಿರುವ ಆಯ್ಕೆ ಸಮಿತಿಯಲ್ಲಿ ಶಿವಸುಂದರ್ ದಾಸ್ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬಿಸಿಸಿಐ ಹಿರಿಯರ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಲು, ಕನಿಷ್ಠ 24 ಟೆಸ್ಟ್‌ ಪಂದ್ಯಗಳನ್ನಾಡಿದ ಅನುಭವ ಹೊಂದಿರಬೇಕು ಎಂಬ ನಿಯಮವಿದೆ. ಆದರೆ ಸದ್ಯ ಸಮಿತಿಯಲ್ಲಿರುವವರು ಈ ಅರ್ಹತೆಯನ್ನು ಹೊಂದಿಲ್ಲ. ಹೀಗಾಗಿ ನೂತನ ಅಧ್ಯಕ್ಷರ ನೇಮಕವಾಗಬೇಕಿದೆ. ಆದರೆ ಅನುಭವಿ, ಖ್ಯಾತ ಮಾಜಿ ಆಟಗಾರರು ಯಾರೂ ಸಹ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಲು ಉತ್ಸಾಹ ತೋರುತ್ತಿಲ್ಲ. ಇದು ಬಿಸಿಸಿಐಗೆ ಸಂಕಷ್ಟ ತಂದಿಟ್ಟಿದೆ.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...