‘ಸಾಕ್ಷಿ ಮಲಿಕ್‌ ಬಗ್ಗೆ ಹೆಮ್ಮೆ ಪಡುತ್ತೇನೆ’ : ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿ ಮತ್ತೊಬ್ಬ ಕುಸ್ತಿಪಟು ಪ್ರಧಾನಿಗೆ ಪತ್ರ

Date:

ಪ್ರಮುಖ ಕುಸ್ತಿಪಟು ಬಜರಂಗ್ ಪೂನಿಯಾ ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿ ಪ್ರಧಾನಿಗೆ ಪತ್ರ ಬರೆದ ನಂತರ ಮತ್ತೊಬ್ಬ ಅಗ್ರಮಾನ್ಯ ಕುಸ್ತಿಪಟು ವೀರೇಂದ್ರ ಸಿಂಗ್‌ ಅವರು ತಾನು ಪದ್ಮಶ್ರೀ ಪ್ರಶಸ್ತಿಯನ್ನು ಸರ್ಕಾರಕ್ಕೆ ವಾಪಸ್‌ ನೀಡುವುದಾಗಿ ಹೇಳಿ ಕ್ರೀಡೆಯನ್ನು ತ್ಯಜಿಸುವುದಾಗಿ ಘೋಷಿಸಿದ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್‌ ಅವರಿಗೆ ಬೆಂಬಲ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವೀರೇಂದ್ರ ಸಿಂಗ್‌, “ಪ್ರಧಾನಿ ನರೇಂದ್ರ ಮೋದಿ ಅವರೇ, ನನ್ನ ಸಹೋದರಿ ಮತ್ತು ದೇಶದ ಸುಪುತ್ರಿಯಾದ ಸಾಕ್ಷಿ ಮಲಿಕ್ ಅವರ ಬಗ್ಗೆ ಹೆಮ್ಮೆಪಡುತ್ತೇನೆ, ಪದ್ಮಶ್ರೀ ಪ್ರಶಸ್ತಿಯನ್ನು ನನ್ನ ಸಹೋದರಿ ಸಾಕ್ಷಿ ಮಲಿಕ್ ಅವರಿಗಾಗಿ ಹಿಂದಿರುಗಿಸುತ್ತೇನೆ. ದೇಶದ ಅಗ್ರ ಕ್ರೀಡಾಪಟುಗಳು ಈ ರೀತಿಯ ನಿರ್ಧಾರ ಕೈಗೊಳ್ಳುವಂತೆ ವಿನಂತಿಸುತ್ತೇನೆ” ಎಂದು ಒಲಿಂಪಿಕ್ ಪದಕ ವಿಜೇತ ನೀರಜ್‌ ಚೋಪ್ರಾ ಹಾಗೂ ಖ್ಯಾತ ಕ್ರಿಕೆಟ್ ಆಟಗಾರ ಸಚಿನ್‌ ತೆಂಡೂಲ್ಕರ್‌ ಅವರಿಗೆ ಟ್ಯಾಗ್‌ ಮಾಡಿದ್ದಾರೆ.

ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟು ಬಜರಂಗ್‌ ಪೂನಿಯಾ ಪದ್ಮಶ್ರೀ ಪ್ರಶಸ್ತಿ ವಾಪಸ್‌ ಮಾಡುವುದಾಗಿ ಪ್ರಧಾನಿಗೆ ಪತ್ರ ಬರೆದ ನಂತರ ದೆಹಲಿಯ ಪ್ರಧಾನ ಮಂತ್ರಿ ಕಚೇರಿ ಮಾರ್ಗದ ಪಾದಚಾರಿ ರಸ್ತೆಯಲ್ಲಿ ಪದಕವನ್ನು ಇರಿಸಿದರು. ನಂತರ ಪೊಲೀಸರು ಅದನ್ನು ವಶಕ್ಕೆ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಮಹಿಳಾ ಕುಸ್ತಿಪಟುಗಳಿಗೆ ಗೌರವ ಸಿಗದಿದ್ದಾಗ ನಾನು ಈ ಗೌರವಕ್ಕೆ ಅರ್ಹನಲ್ಲ, 40 ದಿನಗಳಿಂದ ರಸ್ತೆಗಿಳಿದಿದ್ದೇವೆ, ಆದರೆ ಸರ್ಕಾರ ನೀಡಿದ ಭರವಸೆ ಈಡೇರಿಲ್ಲ. ನಮ್ಮ ಹೋರಾಟ ಸರ್ಕಾರದ ವಿರುದ್ಧ ಅಲ್ಲ, ಒಬ್ಬ ವ್ಯಕ್ತಿ ವಿರುದ್ಧ. ನಾನು ನ್ಯಾಯಾಂಗವನ್ನು ನಂಬುತ್ತೇನೆ. ಆದರೆ ಇತ್ತೀಚಿಗೆ ನನಗೆ ವ್ಯವಸ್ಥೆಯಲ್ಲಿ ನಂಬಿಕೆಯಿಡಲು ಸಾಧ್ಯವಾಗುತ್ತಿಲ್ಲ” ಎಂದು ಬಜರಂಗ್‌ ಪೂನಿಯಾ ಪದಕವಿರಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಮಡಿಲಿನಲ್ಲಿರುವ ಕುಸ್ತಿಪಟುಗಳು: ಬ್ರಿಜ್‌ ಭೂಷಣ್ ಸಿಂಗ್

ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಬಾಕ್ಸರ್ ವಿಜೇಂದರ್ ಸಿಂಗ್ ಕೂಡ ನಿನ್ನೆ ಕುಸ್ತಿ ತ್ಯಜಿಸಿದ ಸಾಕ್ಷಿ ಮಲಿಕ್‌ಗೆ ಬೆಂಬಲ ಘೋಷಿಸಿದ್ದಾರೆ.

“ಒಲಿಂಪಿಕ್ ಪದಕ ವಿಜೇತರಿಗೆ ನ್ಯಾಯ ನೀಡದಿದ್ದರೆ, ನಾವು ಅದನ್ನು ಹೇಗೆ ಪಡೆಯುತ್ತೇವೆ ಎಂದು ಹೆಣ್ಣುಮಕ್ಕಳ ಪೋಷಕರು ಚಿಂತಿಸುತ್ತಾರೆ? ಪ್ರಧಾನಿ, ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿ ಎಲ್ಲರೂ ಬಂದು ಇದು ಏಕೆ ಸಂಭವಿಸಿತು ಎಂದು ಉತ್ತರಿಸಬೇಕು. ನ್ಯಾಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ರಚನೆಯ ಮೇಲೆ ಇದು ಬಹಳಷ್ಟು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ” ಎಂದು ವಿಜೇಂದರ್ ಸಿಂಗ್ ತಿಳಿಸಿದ್ದಾರೆ.

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಭಾರತದ ಅಗ್ರಗಣ್ಯ ಕುಸ್ತಿಪಟುಗಳು ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಕುಸ್ತಿಪಟುಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಬಂಧನಕ್ಕೆ ಒತ್ತಾಯಿಸಿ ಹಲವು ತಿಂಗಳುಗಳ ಕಾಲ ನವದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು.

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ ನಂತರ ಅವರು ಜೂನ್‌ನಲ್ಲಿ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...