ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಮೊಹಮ್ಮದ್ ಶಮಿ ಸೇರಿ 26 ಮಂದಿಗೆ ಪ್ರತಿಷ್ಠಿತ ‘ಅರ್ಜುನ ಪ್ರಶಸ್ತಿ’

Date:

ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಅದರಂತೆ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಸೇರಿದಂತೆ 26 ಕ್ರೀಡಾಪಟುಗಳು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬ್ಯಾಡ್ಮಿಂಟನ್‌ನಲ್ಲಿ ಮಿಂಚಿದ್ದ ಸ್ಟಾರ್ ಜೋಡಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಅವರಿಗೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿ ಒಲಿದಿದೆ. ಎಲ್ಲ ಕ್ರೀಡಾಪಟುಗಳಿಗೆ 2024 ರ ಜನವರಿ 9ರಂದು ನಡೆಯಲ್ಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜುನ ಮತ್ತು ಖೇಲ್‌ರತ್ನ ಪ್ರಶಸ್ತಿಗೆ 19 ವಿವಿಧ ಕ್ರೀಡೆಗಳ 28 ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. ಮೊಹಮ್ಮದ್ ಶಮಿ ಸೇರಿದಂತೆ ಒಟ್ಟು 26 ಆಟಗಾರರು ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದು ವಿವಿಧ ಕ್ರೀಡೆಗಳ ಪ್ರಮುಖ ಆಟಗಾರರನ್ನು ಒಳಗೊಂಡಿದೆ.

ಅರ್ಜುನ ಪ್ರಶಸ್ತಿಗೆ ಆಯ್ಕೆಯಾದವ ವಿವರ ಹೀಗಿದೆ:

  1. ಓಜಸ್ ಪ್ರವೀಣ್ ದೇವತಾಳೆ: ಬಿಲ್ಲುಗಾರಿಕೆ (ಆರ್ಚರಿ)
  2. ಅದಿತಿ ಗೋಪಿಚಂದ್ ಸ್ವಾಮಿ: ಬಿಲ್ಲುಗಾರಿಕೆ (ಆರ್ಚರಿ)
  3. ಶ್ರೀಶಂಕರ್ ಎಂ: ಅಥ್ಲೆಟಿಕ್ಸ್
  4. ಪಾರುಲ್ ಚೌಧರಿ: ಅಥ್ಲೆಟಿಕ್ಸ್
  5. ಮೊಹಮ್ಮದ್ ಹುಸಾಮುದ್ದೀನ್: ಬಾಕ್ಸಿಂಗ್
  6. ಆರ್ ವೈಶಾಲಿ: ಚೆಸ್
  7. ಮೊಹಮ್ಮದ್ ಶಮಿ: ಕ್ರಿಕೆಟ್
  8. ಅನುಷ್ ಅಗರ್ವಾಲ್: ಕುದುರೆ ಸವಾರಿ
  9. ದಿವ್ಯಾಕೃತಿ ಸಿಂಗ್: ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್
  10. ದೀಕ್ಷಾ ದಾಗರ್: ಗಾಲ್ಫ್
  11. ಕೃಷ್ಣ ಬಹದ್ದೂರ್ ಪಾಠಕ್: ಹಾಕಿ
  12. ಪುಖ್ರಾಂಬಂ ಸುಶೀಲಾ ಚಾನು: ಹಾಕಿ
  13. ಪವನ್ ಕುಮಾರ್: ಕಬಡ್ಡಿ
  14. ರಿತು ನೇಗಿ: ಕಬಡ್ಡಿ
  15. ನಸ್ರೀನ್: ಖೋ-ಖೋ
  16. ಪಿಂಕಿ: ಲಾನ್ ಬಾಲ್ಸ್
  17. ಐಶ್ವರ್ಯಾ ಪ್ರತಾಪ್ ಸಿಂಗ್ ತೋಮರ್: ಶೂಟಿಂಗ್
  18. ಇಶಾ ಸಿಂಗ್: ಶೂಟಿಂಗ್
  19. ಹರಿಂದರ್ ಪಾಲ್ ಸಿಂಗ್ ಸಂಧು: ಸ್ಕ್ವಾಷ್
  20. ಅಹಿಕಾ ಮುಖರ್ಜಿ: ಟೇಬಲ್ ಟೆನಿಸ್
  21. ಸುನೀಲ್ ಕುಮಾರ್: ಕುಸ್ತಿ
  22. ಶ್ರೀಮತಿ ಆಂಟಿಮ್: ಕುಸ್ತಿ
  23. ನವೋರೆಮ್ ರೋಶಿಬಿನಾ ದೇವಿ: ವುಶು
  24. ಶೀತಲ್ ದೇವಿ: ಪ್ಯಾರಾ ಆರ್ಚರಿ
  25. ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ: ಅಂಧರ ಕ್ರಿಕೆಟ್
  26. ಪ್ರಾಚಿ ಯಾದವ್: ಪ್ಯಾರಾ ಕ್ಯಾನೋಯಿಂಗ್

ಖೇಲ್ ರತ್ನ ಪ್ರಶಸ್ತಿ

  1. ಚಿರಾಗ್ ಶೆಟ್ಟಿ – ಬ್ಯಾಡ್ಮಿಂಟನ್
  2. ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ – ಬ್ಯಾಡ್ಮಿಂಟನ್

ಅತ್ಯುತ್ತಮ ತರಬೇತುದಾರರಿಗೆ ನೀಡುವ ದ್ರೋಣಾಚಾರ್ಯ ಪ್ರಶಸ್ತಿಗೆ(ಸಾಮಾನ್ಯ ವಿಭಾಗ): ಲಲಿತ್ ಕುಮಾ‌ರ್ (ಕುಸ್ತಿ), ಆರ್ ಬಿ ರಮೇಶ್ (ಚೆಸ್), ಮಹಾವೀರ್ ಪ್ರಸಾದ್ ಸೈನಿ (ಪ್ಯಾರಾ ಅಥ್ಲೆಟಿಕ್ಸ್‌), ಶಿವೇಂದ್ರ ಸಿಂಗ್ (ಹಾಕಿ), ಗಣೇಶ್ ಪ್ರಭಾಕರ್ ದೇವುರುಷ್ಕರ್ (ಮಲ್ಲಕಂಬ).

ದ್ರೋಣಾಚಾರ್ಯ ಪ್ರಶಸ್ತಿಯ ಜೀವಮಾನ ಸಾಧನೆ ವಿಭಾಗದಲ್ಲಿ ಜಸ್ಕಿರತ್ ಸಿಂಗ್ ಗ್ರೆವಾಲ್ (ಗಾಲ್ಫ್), ಇ ಭಾಸ್ಕರನ್(ಕಬಡ್ಡಿ), ಜಯಂತ ಕುಮಾ‌ರ್ ಪುಶಿಲಾಲ್ (ಟೇಬಲ್ ಟೆನಿಸ್).

ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿಗೆ ಮಂಜೂಷಾ ಕನ್ವರ್ (ಬ್ಯಾಡ್ಮಿಂಟನ್), ವಿನೀತ್ ಕುಮಾರ್ ಶರ್ಮಾ (ಹಾಕಿ), ಕವಿತಾ ಸೆಲ್ವರಾಜ್ (ಕಬಡ್ಡಿ).

ಮೌಲಾನಾ ಅಬುಲ್ ಕಲಾಂ ಆಜಾದ್ (MAKA) ಟ್ರೋಫಿ 2023:

ಗುರು ನಾನಕ್ ದೇವ್ ವಿಶ್ವವಿದ್ಯಾಲಯ, ಅಮೃತಸರ

ಲವಿ ಪ್ರೊಫೆಷನಲ್ ಯೂನಿವರ್ಸಿಟಿ, ಪಂಜಾಬ್ (1ನೇ ರನ್ನರ್-ಅಪ್)

ಕುರುಕ್ಷೇತ್ರ ವಿಶ್ವವಿದ್ಯಾಲಯ, ಕುರುಕ್ಷೇತ್ರ (2ನೇ ರನ್ನರ್ ಅಪ್)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...