IND – ENG 2ND Test: ರವೀಂದ್ರ ಜಡೇಜ ಅರ್ಧ ಶತಕ, ಬೃಹತ್‌ ಮೊತ್ತದತ್ತ ಭಾರತ

Date:

ಭಾರತ – ಇಂಗ್ಲೆಂಡ್‌ ನಡುವೆ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದ ಎರಡನೇ ದಿನವಾದ ಇಂದು ಟೀಂ ಇಂಡಿಯಾ ಬೃಹತ್‌ ಮೊತ್ತದತ್ತ ದಾಪುಗಾಲಿಡುತ್ತಿದೆ. ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರು ನಾಯಕ ಶುಭ್‌ಮನ್‌ ಗಿಲ್‌ಗೆ ಅವರೊಂದಿಗಿನ ಜೊತೆಯಾಟದಲ್ಲಿ ಅರ್ಧ ಶತಕ ಪೂರೈಸಿದರು. ಪಾನೀಯ ವಿರಾಮದ ವೇಳೆಗೆ ಟೀಂ ಇಂಡಿಯಾ 100 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 375 ರನ್‌ ಪೇರಿಸಿದೆ.

ಇಂಗ್ಲೆಂಡ್‌ ವಿರುದ್ಧ ಮೊದಲ ದಿನದ ಗೌರವಕ್ಕೆ ಪಾತ್ರವಾಗಿ 85 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 310 ರನ್‌ ಪೇರಿಸಿ ಎರಡನೇ ದಿನಾದಾಟ ಆರಂಭಿಸಿದ ನಾಯಕ ಶುಭಮನ್‌ ಗಿಲ್ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ ತಮ್ಮ ಮುರಿಯದ 6ನೇ ವಿಕೆಟ್‌ ಜೊತೆಯಾಟವನ್ನು ಮುಂದುವರಿಸಿದ್ದಾರೆ. 230 ಎಸೆತಗಳಲ್ಲಿ 162 ರನ್‌ ಕಲೆ ಹಾಕಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

113 ಚೆಂಡುಗಳಲ್ಲಿ ರವೀಂದ್ರ ಜಡೇಜಾ 9 ಬೌಂಡರಿ ನೆರವಿನಿಂದ ಅಜೇಯ 68 ರನ್‌ ಬಾರಿಸಿದ್ದಾರೆ. ನಾಯಕ ಶುಭಮನ್‌ ಗಿಲ್‌ ಜವಾಬ್ದಾರಿಯನ್ನು ಅರಿತು ಬ್ಯಾಟಿಂಗ್‌ ಮಾಡುತ್ತಿದ್ದು, 263 ಚೆಂಡುಗಳಲ್ಲಿ 17 ಬೌಂಡರಿ ನೆರವಿನಿಂದ ಅಜೇಯ 150 ರನ್‌ ಬಾರಿಸಿ ಆಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೂವರು ಸ್ಟಾರ್ ಆಟಗಾರರ ದಾಖಲೆ ಮುರಿಯುವ ಹೊಸ್ತಿಲಲ್ಲಿ ಯಶಸ್ವಿ ಜೈಸ್ವಾಲ್‌

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. ಸಮಯೋಚಿತ ಬ್ಯಾಟಿಂಗ್ ನಡೆಸುವಲ್ಲಿ ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ವಿಫಲರಾದರು. ಪ್ರವಾಸಿ ತಂಡ 15 ರನ್‌ ಕಲೆ ಹಾಕುವಷ್ಟರಲ್ಲಿ ಒಂದು ವಿಕೆಟ್‌ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಈ ವೇಳೆ ಎರಡನೇ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್‌ ಹಾಗೂ ಕರುಣ್ ನಾಯರ್‌ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 90 ಎಸೆತಗಳಲ್ಲಿ 80 ರನ್‌ ಸೇರಿಸಿತು. ಇನ್ನು ಕರುಣ್‌ ನಾಯರ್‌ (31) ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು.

ಮೂರನೇ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್‌ ಹಾಗೂ ನಾಯಕ ಶುಭಮನ್‌ ಗಿಲ್ ಜೋಡಿ ವಿಕೆಟ್‌ ಬೀಳದಂತೆ ಕಾಯ್ದುಕೊಳ್ಳುವಲ್ಲಿ ಸಫಲವಾಯಿತು. ಈ ಜೋಡಿ 131 ಎಸೆತಗಳಲ್ಲಿ 66 ರನ್‌ ಸೇರಿಸಿತು. ಈ ವೇಳೆ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದ ಯಶಸ್ವಿ ಜೈಸ್ವಾಲ್‌ ಕಳಪೆ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಇವರು 107 ಎಸೆತಗಳಲ್ಲಿ 13 ಬೌಂಡರಿ ನೆರವಿನಿಂದ 87 ರನ್‌ ಬಾರಿಸಿ ಅಬ್ಬರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...