IND – ENG 2ND TEST | ಗೆಲುವಿಗಾಗಿ ಟೀಂ ಇಂಡಿಯಾದಿಂದ ಹಲವು ತಂತ್ರ

Date:

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಇಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುನ್ನಡೆ ಸಾಧಿಸಲು ಇಂಗ್ಲೆಂಡ್ ತವಕದಲ್ಲಿದ್ದರೆ, ಸರಣಿ ಸಮಬಲಗೊಳಿಸಲು ಟೀಂ ಇಂಡಿಯಾ ಹಲವು ಕಾರ್ಯತಂತ್ರ ರೂಪಿಸುತ್ತಿದೆ.

ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ನ ಬಾಝ್ ಬಾಲ್ ಶೈಲಿಯ ಆಟಕ್ಕೆ ಕಡಿವಾಣ ಹಾಕುವಲ್ಲಿ ವಿಫಲವಾಗಿದ್ದ ಭಾರತ ತಂಡ ಇದೀಗ ಬೌಲಿಂಗ್ ವಿಭಾಗದಲ್ಲಿ ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ. ತಂಡದಲ್ಲಿ ಇಬ್ಬರು ಸ್ಪಿನ್ನರ್‌ಗಳಿಗೆ ಅವಕಾಶ ನೀಡಲು ಟೀಮ್ ಇಂಡಿಯಾ ನಿರ್ಧರಿಸಿದೆ. ರವೀಂದ್ರ ಜಡೇಜಾ ಜೊತೆಗೆ ವಾಷಿಂಗ್ಟನ್ ಸುಂದರ್ ಅಥವಾ ಕುಲ್ದೀಪ್ ಯಾದವ್ ಆಡುತ್ತಾರಾ ಎಂದು ನೋಡಬೇಕಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಕುಲ್ದೀಪ್ ಯಾದವ್ ಅವರನ್ನು ಆಡಿಸದ ಕಾರಣ ಟೀಮ್ ಇಂಡಿಯಾಗೆ ದುಬಾರಿಯಾಯಿತು. ನಾಲ್ಕನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ 371 ರನ್‌ಗಳ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೀಡ್ಸ್‌ನಲ್ಲಿ ಶಾರ್ದುಲ್ ಠಾಕೂರ್ ಬೌಲಿಂಗ್ ಆಲ್ ರೌಂಡರ್ ಆಗಿ ಆಡಿದ್ದರೂ ಉತ್ತಮ ಪ್ರದರ್ಶನ ನೀಡಲಿಲ್ಲ. ಆದ್ದರಿಂದ ನಿತೀಶ್ ರೆಡ್ಡಿ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಪ್ರಮುಖ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಆಡುವುದು ಇನ್ನೂ ಖಚಿತವಾಗಿಲ್ಲ. ಅವರು ಆಡದಿದ್ದರೆ ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಮತ್ತು ಪ್ರಸಿದ್ಧ್ ಕೃಷ್ಣ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಭಾರತ ತಂಡವು ಬ್ಯಾಟಿಂಗ್‌ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಕಡಿಮೆ.

ಇನ್ನು ಬರ್ಮಿಂಗ್‌ಹ್ಯಾಮ್‌ನ ವಾತಾವರಣವು ತೇವಾಂಶದಿಂದ ಕೂಡಿರುವುದರಿಂದ ಭಾರತ ತಂಡವು ಹೇಗೆ ಆಡುತ್ತದೆ ಎಂಬುದರ ಮೇಲೆ ಪಂದ್ಯದ ಫಲಿತಾಂಶ ನಿರ್ಧಾರವಾಗುತ್ತದೆ. ಭಾರತ ಆಡಿರುವ 8 ಟೆಸ್ಟ್‌ಗಳಲ್ಲಿ 7 ಇಂಗ್ಲೆಂಡ್‌ ಗೆದ್ದಿದ್ದು, ಒಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಹೆಡಿಂಗ್ಲೆಯಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳು ಉತ್ತಮವಾಗಿ ಆಡಿದರು. ಆದರೆ ಬರ್ಮಿಂಗ್‌ಹ್ಯಾಮ್‌ನಲ್ಲಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡಬೇಕಿದೆ. ಫೀಲ್ಡಿಂಗ್‌ನಲ್ಲಿ ಸುಧಾರಣೆ ಮಾಡಿಕೊಳ್ಳುವುದು ಮುಖ್ಯ. ಯಶಸ್ವಿ ಜೈಸ್ವಾಲ್ ಪಳಗೊಂಡು ಹಲವರು ಮೊದಲ ಟೆಸ್ಟ್‌ನಲ್ಲಿ ಹಲವು ಕ್ಯಾಚ್‌ಗಳನ್ನು ಕೈಬಿಟ್ಟರು. ಹೀಗಾಗಿ ಅವರ ಫೀಲ್ಡಿಂಗ್ ಸ್ಥಾನ ಬದಲಾಗುವ ಸಾಧ್ಯತೆ ಇದೆ.

ಇದನ್ನು ಓದಿದ್ದೀರಾ? US Open Badminton: ಕರ್ನಾಟಕದ ಆಯೂಷ್‌ ಶೆಟ್ಟಿ ಚಾಂಪಿಯನ್‌;ಮಹಿಳೆಯರ ವಿಭಾಗದಲ್ಲಿ ತನ್ವಿ ಶರ್ಮಾ ರನ್ನರ್‌ ಅಪ್‌

ಕೆ.ಎಲ್. ರಾಹುಲ್, ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್ ಮತ್ತು ವಿಕೆಟ್ ಕೀಪರ್ ರಿಷಬ್ ಪಂತ್ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಲಿದ್ದಾರೆ. ಸಾಯಿ ಸುದರ್ಶನ್ ಮತ್ತು ಕರುಣ್ ನಾಯರ್ ಅವರಿಗೆ ಮತ್ತೊಂದು ಅವಕಾಶ ಸಿಗುವ ಸಂಭವವಿದೆ.

ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ತಂಡವು “ಬಾಝ್ ಬಾಲ್” ಮಾದರಿಯನ್ನು ಅನುಸರಿಸುತ್ತಿದೆ. ಕೌಟುಂಬಿಕ ಕಾರಣಗಳಿಂದಾಗಿ ಜೋಫ್ರಾ ಆರ್ಚರ್ ಆಡುತ್ತಿಲ್ಲ. ಹೀಗಾಗಿ ಹಿಂದಿನ ಪಂದ್ಯದಲ್ಲಿ ಆಡಿದ ಆಟಗಾರರೇ ಈ ಪಂದ್ಯದಲ್ಲಿಯೂ ಆಡಲಿದ್ದಾರೆ.

ಮಳೆ ಸಾಧ್ಯತೆ
ಸ್ಥಳೀಯ ಹವಾಮಾನ ವರದಿಯ ಪ್ರಕಾರ ಮೊದಲ ದಿನ ಪಂದ್ಯ ಪ್ರಾರಂಭಕ್ಕೂ ಮುನ್ನ ಅಂದರೆ ಜುಲೈ 2ರಂದು ಮಳೆಯಾಗುವ ಸಾಧ್ಯತೆಯಿದೆ. ಬಳಿಕ ಜುಲೈ 3 ಮತ್ತು 4ರಂದು ನಿರಾತಂಕವಾಗಿ ಆಟ ಆಡಬಹುದು. ಯಾವುದೇ ಮಳೆ ಆತಂಕವಿಲ್ಲ. ಅದೇ ಪಂದ್ಯದ ನಾಲ್ಕನೇ ದಿನವಾದ ಜುಲೈ5ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇಧೆ. ಕೊನೇ ದಿನವಾದ 6ರಂದು ದಿನವಿಡೀ ಮಳೆ ಆಗಲಿದೆ ಎಂದು ವರದಿ ತಿಳಿಸಿದೆ. ಪ್ರತಿದಿನವೂ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪಂದ್ಯ ಆರಂಭ: ಮಧ್ಯಾಹ್ನ 3.30

ಸ್ಥಳ: ಎಜ್‌ಬಾಸ್ಟನ್‌, ಬರ್ಮಿಂಗ್‌ಹ್ಯಾಮ್‌

ನೇರ ಪ್ರಸಾರ: ಸೋನಿ ನೆಟ್‌ವರ್ಕ್ ಚಾನಲ್ ಮತ್ತು ಜಿಯೋ ಹಾಟ್ ಸ್ಟಾರ್ ಆ್ಯಪ್

ಎಜ್‌ಬಾಸ್ಟನ್‌ನಲ್ಲಿ ಭಾರತ ಸಾಧನೆ (1967-2022)

8 ಮುಖಾಮುಖಿ

7 ಭಾರತ ಸೋಲು

1 ಡ್ರಾ

137 ಮುಖಾಮುಖಿ

52 ಇಂಗ್ಲೆಂಡ್‌ ಗೆಲುವು

35 ಭಾರತ ಜಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...