IND – ENG 3RD Test: 2ನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್‌ಗೆ ಆರಂಭಿಕ ಆಘಾತ

Date:

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ – ಇಂಗ್ಲೆಂಡ್‌ ನಡುವಿನ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನವಾದ ಇಂದು ಆಂಗ್ಲರ ತಂಡ ತನ್ನ ಎರಡನೇ ಇನಿಂಗ್ಸ್‌ನಲ್ಲಿ ಆರಂಭಿಕ ಆಘಾತ ಅನುಭವಿಸಿದೆ.

2 ರನ್‌ಗಳಿಗೆ ನಾಲ್ಕನೇ ದಿನದಾಟ ಆರಂಭಿಸಿದ ಇಂಗ್ಲೆಂಡ್‌ ತಂಡ 22 ರನ್‌ ಆಗುವಷ್ಟರಲ್ಲಿಯೇ ಮೊದಲ ವಿಕೆಟ್ ಕಳೆದುಕೊಂಡಿರು. ಆರಂಭಿಕ ಆಟಗಾರ ಬೆನ್‌ ಡೆಕೆಟ್‌ 12 ರನ್‌ ಗಳಿಸಿದ್ದಾಗ ಮೊಹಮ್ಮದ್ ಸಿರಾಜ್‌ ಬೌಲಿಂಗ್‌ನಲ್ಲಿ ಬುಮ್ರಾಗೆ ಕ್ಯಾಚ್‌ ನೀಡಿ ಪೆವಿಲಿಯನ್‌ಗೆ ತೆರಳಿದರು. 12ನೇ ಓವರ್‌ನಲ್ಲಿ 4 ರನ್‌ ಗಳಿಸಿದ್ದ ಓಲಿ ಪೋಪ್‌ ಸಿರಾಜ್‌ ಅವರ ಎಲ್‌ಬಿ ಬಲೆಗೆ ಬಿದ್ದರು. ಪಾನೀಯ ವಿರಾಮದ ವೇಳೆಗೆ ಆಂಗ್ಲರ ತಂಡ 12 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 42ರನ್‌ ಗಳಿಸಿದೆ. ಆರಂಭಿಕ ಜಾಕ್‌ ಕ್ರಾಲಿ(17) ಹಾಗೂ ಅನುಭವಿ ಜೋರೂಟ್ (0) ಆಟವಾಡುತ್ತಿದ್ದಾರೆ.

ಶನಿವಾರ ಭಾರತ ಮೊದಲ ಇನಿಂಗ್ಸ್‌ನಲ್ಲಿ 3 ವಿಕೆಟ್‌ಗೆ 145 ರನ್‌ಗಳಿಂದ ಆಟ ಮುಂದುವರೆಸಿತು. ನಾಲ್ಕನೇ ವಿಕೆಟ್‌ಗೆ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಜೊಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಮೊದಲಾವಧಿಯ ಕೊನೆಯ ವರೆಗೂ ಎಚ್ಚರಿಕೆಯ ಬ್ಯಾಟ್ ಮಾಡಿತು. ಈ ವೇಳೆ ಈ ಜೊಡಿ 198 ಎಸೆತಗಳನ್ನು ಎದುರಿಸಿ 141 ರನ್‌ಗಳ ಕಾಣಿಕೆ ನೀಡಿತು. ಆದರೆ ರಿಷಭ್‌ ಪಂತ್‌ ಭೋಜನ ವಿರಾಮದ ಕೊನೆಯ ಓವರ್‌ನಲ್ಲಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಇಂಗ್ಲೆಂಡ್‌ ನೆಲದಲ್ಲಿ ಹೊಸ ದಾಖಲೆ ಬರೆದ ಭಾರತದ ಮಹಿಳಾ ಕ್ರಿಕೆಟ್ ತಂಡ

ರಿಷಭ್ ಪಂತ್‌ 112 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಹಾಯದಿಂದ 72 ರನ್‌ ಬಾರಿಸಿ ಮಿಂಚಿದರು. ಕನ್ನಡಿಗ ಕೆ ಎಲ್ ರಾಹುಲ್‌ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು ತಮ್ಮ ಕ್ಷಮತೆಗೆ ತಕ್ಕ ಆಟವನ್ನು ಆಡಿದರು. ಇವರು 177 ಎಸೆತಗಳಲ್ಲಿ 13 ಬೌಂಡರಿ ನೆರವಿನಿಂದ 100 ರನ್‌ ಬಾರಿಸಿ ಔಟ್ ಆದರು. ಆರನೇ ವಿಕೆಟ್‌ಗೆ ರವೀಂದ್ರ ಜಡೇಜಾ ಹಾಗೂ ನಿತೀಶ್‌ ಕುಮಾರ್‌ ರೆಡ್ಡಿ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೊಡಿ ಬಹು ಸಮಯ ಇಂಗ್ಲೆಂಡ್‌ ಬೌಲರ್‌ಗಳನ್ನು ಕಾಡಿತು. ಈ ಜೋಡಿ 165 ಎಸೆತಗಳಲ್ಲಿ 72 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿ ತಂಡಕ್ಕೆ ಆಸರೆಯಾಯಿತು. 30 ರನ್‌ ಬಾರಿಸಿ ಭರವಸೆಯ ಮೂಡಿಸಿದ್ದ ನಿತೀಶ್‌ ಕುಮಾರ್ ರೆಡ್ಡಿ ಇಲ್ಲದ ಹೊಡೆತಕ್ಕೆ ಮುಂದಾಗಿ ಸ್ಟೋಕ್ಸ್‌ಗೆ ವಿಕೆಟ್‌ ಒಪ್ಪಿಸಿದರು.

ಏಳನೇ ವಿಕೆಟ್‌ಗೆ ವಾಷಿಂಗ್ಟನ್‌ ಸುಂದರ್‌ ಹಾಗೂ ರವೀಂದ್ರ ಜಡೇಜಾ ಜೋಡಿ ಸಹ ತಂಡಕ್ಕೆ ಆಧಾರವಾಯಿತು. ಈ ಜೊಡಿ 113 ಎಸೆತಗಳಲ್ಲಿ 50 ರನ್‌ ಸೇರಿಸಿತು. ಈ ವೇಳೆ ಜಡೇಜಾ 8 ಬೌಂಡರಿ, 1 ಸಿಕ್ಸರ್ ಸಹಾಯದಿಂದ 72 ರನ್‌ ಬಾರಿಸಿ ಅಬ್ಬರಿಸಿತು. ವಾಷಿಂಗ್ಟನ್‌ ಸುಂದರ್‌ 23 ರನ್‌ ಬಾರಿಸಿ ತಂಡಕ್ಕೆ ಆಧಾರವಾದರು. ಅಂತಿಮವಾಗಿ ಭಾರತ 387 ರನ್‌ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಕ್ರಿಸ್‌ ವೋಕ್ಸ್‌ 3, ಜೋಫ್ರಾ ಆರ್ಚರ್‌, ಬೆನ್‌ ಸ್ಟೋಕ್ಸ್‌ ತಲಾ ಎರಡು ವಿಕೆಟ್‌ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...