IND Vs NZ | ಕೆ.ಎಲ್ ರಾಹುಲ್‌ ಅಬ್ಬರದ ನಡುವೆಯೂ ಸೋಲುಂಡ ಟೀಮ್ ಇಂಡಿಯಾ

Date:

ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು ಸೋಲುಂಡಿದೆ. ಕೆ.ಎಲ್ ರಾಹುಲ್ ಅವರ ಭರ್ಜರಿ ಬ್ಯಾಟಿಂಗ್‌ನ ಹೊರತಾಗಿಯೂ, ತಂಡದ ಸ್ಟಾರ್‌ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ ಮತ್ತು ಹೋಹಿತ್ ಶರ್ಮಾ ಅವರ ಕಳಪೆ ಪ್ರದರ್ಶನದಿಂದಾಗಿ ತಂಡವು ಸೋಲುಂಡಿದೆ ಎಂದು ಅಭಿಮಾನಿಗಳು ನಿರಾಶೆ ವ್ಯಕ್ತಪಡಿಸಿದ್ದಾರೆ.

ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲ ಬ್ಯಾಟಿಂಗ್‌ ಮಾಡಿತು. ಆರಂಭಿಕ ಆಟಗಾರರಾಗಿ ರೋಹಿತ್ ಶರ್ಮಾ ಮತ್ತು ಶಭಮನ್ ಗಿಲ್ ಸ್ಕ್ರೀಜ್‌ಗೆ ಇಳಿದಿದ್ದರು. ರೋಹಿತ್ 24 ರನ್‌ಗಳಿಗೆ ಕ್ಯಾಚ್‌ಕೊಟ್ಟು ನಿರ್ಗಮಿಸಿದರು. 3ನೇ ಕ್ರಮಾಂಕದಲ್ಲಿ ಬಂದ ಕೊಹ್ಲಿ ಕೂಡ 23 ರನ್‌ಗಳಿಗೆ ವಿಕೆಟ್‌ ಅರ್ಪಿಸಿದರು. 5ನೇ ಕ್ರಮಾಂಕದಲ್ಲಿ ಬಂದ ಕೆ.ಎಲ್ ರಾಹುಲ್‌ 112 ರನ್ ಗಳಿಸಿ ಅಜೇಯರಾಗಿ ಉಳಿದರು.

ಶ್ರೇಯಸ್ ಅಯ್ಯರ್ – 8, ಶುಭಮನ್ ಗಿಲ್ – 56, ರವೀಂದ್ರ ಜಡೇಜಾ – 27, ನಿತೀಶ್‌ ಕುಮಾರ್ ರೆಡ್ಡಿ – 20, ಹರ್ಷಿತ್ ರಾಣಾ – 2 ಹಾಗೂ ಕೊನೆಯದಾಗಿ ಬ್ಯಾಟಿಂಗ್‌ಗೆ ಇಳಿದ ಮೊಹಮ್ಮದ್ ಸಿರಾಜ್ 3 ಬಾಲ್‌ಗಳನ್ನು ಎದುರಿಸಿ 2 ರನ್‌ ಗಳಿಸಿದರು. ಭಾರತ ತಂಡವು 50 ಓವರ್‌ಗಳಲ್ಲಿ 284 ರನ್‌ಗಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರನ್‌ಗಳ ಬೆನ್ನತ್ತಿದ ನ್ಯೂಜಿಲೆಂಡ್ ತಂಡ 3 ವಿಕೆಟ್ ನಷ್ಟದೊಂದಿಗೆ 47.3 ಓವರ್‌ಗಳಲ್ಲಿ 286 ರನ್ ಗಳಿಸಿ ಜಯ ಸಾಧಿಸಿದೆ. ನ್ಯೂಜಿಲೆಂಡ್‌ ತಂಡದ ಡೆವಾನ್ ಕನ್ವೇ – 16, ಹೆನ್ರಿ ನಿಕೋಲಸ್ – 10, ವಿಲ್ ಯಂಗ್ – 87, ಡೈರಿಲ್ ಮಿಚೆಲ್ – 131 (ಔಟಾಗದೆ), ಗ್ಲೆನ್ ಫಿಲಿಪ್ಸ್‌ – 32 (ಔಟಾಗದೆ) ರನ್ ಗಳಿಸಿದರು.

ಪಂದ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಮ್‌ ಇಂಡಿಯಾದ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಚೇಟ್, ತಮ್ಮ ಆಟಗಾರರನ್ನು ಸಮರ್ಥಿಸಿಕೊಳ್ಳಲು ನಿರಾಕರಿಸಿದ್ದಾರೆ. “ನಾವು ಇಂದು ಮಾಡಿದ ಬೌಲಿಂಗ್‌ಗಿಂತ ಉತ್ತಮವಾಗಿ ಬೌಲಿಂಗ್‌ ಮಾಡಬೇಕು. ಭಾರತದ ಕಳಪೆ ಸ್ಪಿನ್ ಪ್ರದರ್ಶನ ಮತ್ತು 50 ಓವರ್‌ಗಳ ಸ್ವರೂಪದಲ್ಲಿ ತೀಕ್ಷ್ಣವಾಗಿ ಆಟವಾಡುವ ಅಗತ್ಯವಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...