IND vs SA 2nd Test | ಮೊದಲ ದಿನ ದಕ್ಷಿಣ ಆಫ್ರಿಕಾ 247/6; ಕುಲ್‌ದೀಪ್‌ಗೆ 3 ವಿಕೆಟ್

Date:

ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್‌ನ ಮೊದಲ ದಿನದಲ್ಲಿ ಸಮಾಧಾನಕರ ಬ್ಯಾಟಿಂಗ್ ಪ್ರದರ್ಶಿಸಿತು. 81.5 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 247 ರನ್‌ಗಳು ಪೇರಿಸಿ ದಿನದ ಆಟವನ್ನು ಮುಗಿಸಿತು. ಆರಂಭದಲ್ಲಿ ಉತ್ತಮ ಆಟವಾಡಿದರೂ, ನಂತರದಲ್ಲಿ ಭಾರತೀಯ ಸ್ಪಿನ್ನರ್‌ಗಳು ಹರಿಣಗಳ ಬ್ಯಾಟರ್‌ಗಳಿಗೆ ಒತ್ತಡ ನೀಡಿದರು.

ಗುವಾಹಟಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡುವುದಾಗಿ ತೀರ್ಮಾನಿಸಿತು. ಪಿಚ್ ಬ್ಯಾಟಿಂಗ್‌ಗೆ ಸಹಾಯವಾಗುವುದನ್ನು ಗಮನಿಸಿದ ಅವರು, ಮೊದಲ ದಿನ ಹೆಚ್ಚು ರನ್‌ಗಳನ್ನು ಸೇರಿಸುವ ಉದ್ದೇಶದಿಂದ ಇನಿಂಗ್ಸ್ ಆರಂಭಿಸಿದರು.

ಮಾರ್ಕ್ರಮ್ 38 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ನಂತರ ರಿಕ್ಕೆಲ್ಟನ್ 35 ಮತ್ತು ನಾಯಕ ತೆಂಬು ಬವುಮಾ 41 ರನ್ ಬಾರಿಸಿದರೆ, ಟ್ರಿಸ್ಟನ್ ಸ್ಟಬ್ಸ್ 49 ರನ್‌ ಗಳಿಸಿ ಕುಲ್‌ದೀಪ್‌ ಯಾದವ್‌ಗೆ ವಿಕೆಟ್‌ ನೀಡಿದರು. ಡಿ ಝೋರ್ಝಿ 28 ರನ್‌ ಗಳಿಸಿ ಔಟಾದರೆ, ದಿನದಾಂತ್ಯಕ್ಕೆ ಮುತ್ತುಸ್ವಾಮಿ 25 ರನ್‌ನೊಂದಿಗೆ ಕ್ರೀಸ್‌ನಲ್ಲಿ ಉಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? U19 ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ: ತಂಡಗಳು 16, ಭಾರತಕ್ಕೆ ಮೂರು ಎದುರಾಳಿಗಳು

ಭಾರತದ ಬೌಲಿಂಗ್‌ನಲ್ಲಿ ಸ್ಪಿನ್ನರ್‌ಗಳು ಹೆಚ್ಚು ಪರಿಣಾಮಕಾರಿಯಾಗಿದ್ದರು. ಕುಲದೀಪ್ ಯಾದವ್ 3 ವಿಕೆಟ್‌ಗಳನ್ನು ಪಡೆದು ದಕ್ಷಿಣ ಆಫ್ರಿಕಾದ ಮಧ್ಯ ಕ್ರಮಾಂಕಕ್ಕೆ ಪೆಟ್ಟು ನಿಡಿದರು. ಬುಮ್ರಾ, ಸಿರಾಜ್ ಮತ್ತು ಜಡೇಜಾ ತಲಾ ಒಂದು ವಿಕೆಟ್‌ ಪಡೆದು ದಕ್ಷಿಣ ಆಫ್ರಿಕಾ ತಂಡದ ರನ್‌ ವೇಗವನ್ನು ನಿಯಂತ್ರಣದಲ್ಲಿಟ್ಟರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...