IND vs SA 2nd test | ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ; ಭಾರತದಲ್ಲಿ 300ನೇ ಟೆಸ್ಟ್

Date:

ಟೀಮ್ ಇಂಡಿಯಾದ ನಾಯಕ ಶುಭಮನ್‌ ಗಿಲ್‌ ಗಾಯಕ್ಕೆ ತುತ್ತಾಗಿರುವುದರಿಂದ ರಿಷಭ್ ಪಂತ್ ಎರಡನೇ ಟೆಸ್ಟ್‌ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುತ್ತಿದ್ದು, ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.


ಇತ್ತೀಚಿನ ವರದಿಗಳಂತೆ ದಕ್ಷಿಣ ಆಫ್ರಿಕಾ 26.5 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 82 ರನ್‌ ಗಳಿಸಿದೆ. ಐಡೆನ್ ಮಾರ್ಕ್ರಾಮ್ 38 ರನ್‌ ಗಳಿಸಿ ಬುಮ್ರಾ ಬೌಲಿಂಗ್‌ನಲ್ಲಿ ಔಟಾದರು. ರಿಯಾನ್ ರಿಕೆಲ್ಟನ್ 35 ರನ್‌ ಗಳಿಸಿ ಆಡುತ್ತಿದ್ದಾರೆ.

ಎರಡನೇ ಟೆಸ್ಟ್‌ ಪಂದ್ಯಕ್ಕಾಗಿ ದಕ್ಷಿಣ ಆಫ್ರಿಕಾ ತಂಡ ಒಂದು ಬದಲಾವಣೆಯೊಂದಿಗೆ ಕಣಕ್ಕೆ ಇಳಿದಿದೆ. ಈ ಪಂದ್ಯಕ್ಕಾಗಿ ದಕ್ಷಿಣ ಆಫ್ರಿಕಾ ಕಾರ್ಬಿನ್ ಬಾಷ್ ಅವರಿಗೆ ಕೈ ಬಿಟ್ಟಿದ್ದು, ಇವರ ಬದಲಿಗೆ ಸೆನುರನ್ ಮುತ್ತುಸಾಮಿ ಅವರಿಗೆ ಅವಕಾಶ ನೀಡಲಾಗಿದೆ. ಇನ್ನು ಈ ಪಂದ್ಯ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಎಡೆನ್ ಮಾರ್ಕ್ರಾಮ್ ಅವರಿಗೆ ಸ್ಮರಣೀಯ ಪಂದ್ಯವಾಗಿರಲಿದೆ. ಈ ಪಂದ್ಯ ಮಾರ್ಕ್ರಾಮ್ ಟೆಸ್ಟ್‌ ಕ್ರಿಕೆಟ್‌ ವೃತ್ತಿ ಜೀವನದ 50ನೇ ಪಂದ್ಯವಾಗಿರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುವಾಹಟಿಯಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್‌ ಪಂದ್ಯವನ್ನು ಆಡಲಾಗುತ್ತಿದೆ. ಈ ಟೆಸ್ಟ್‌ ಪಂದ್ಯ ಟೀಮ್ ಇಂಡಿಯಾ ಪಾಲಿಗೆ ಮಹತ್ವದಾಗಿದೆ. ಈ ಪಂದ್ಯದ ಮೂಲಕ ಭಾರತ 300ನೇ ಟೆಸ್ಟ್‌ವನ್ನು ಆಯೋಜಿಸಿದ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ.

ಇದನ್ನು ಓದಿದ್ದೀರಾ? ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್‌ಗೆ ಶುಭ್‌ಮನ್‌ ಗಿಲ್‌ ಅಲಭ್ಯ; ಮುಂಬೈನಲ್ಲಿ ವೈದ್ಯರ ಭೇಟಿ

ಇದಕ್ಕೂ ಮೊದಲು ಈ ಸಾಧನೆಯನ್ನು ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಮಾಡಿದ್ದವು. ಈಗ ಈ ಸಾಧನೆಯನ್ನು ಮಾಡಿದ ವಿಶ್ವದ ಮೂರನೇ ರಾಷ್ಟ್ರ ಎಂಬ ಕೀರ್ತಿ ಭಾರತ ತಂಡದ್ದಾಗಲಿದೆ. ಈ ಸ್ಮರಣೀಯ ಪಂದ್ಯದಲ್ಲಿ ರಿಷಭ್‌ ಪಂತ್ ಪಡೆ ಸೊಗಸಾದ ಪ್ರದರ್ಶನ ನೀಡಿ ಅಬ್ಬರಿಸಲು ಪ್ಲ್ಯಾನ್ ಮಾಡಿಕೊಂಡಿದೆ.

ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ಬಿ ಸಾಯಿ ಸುದರ್ಶನ್, ಧ್ರುವ್ ಜುರೇಲ್, ರಿಷಭ್ ಪಂತ್ (ನಾಯಕ, ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೋನಿ ಡಿ ಜೋರ್ಜಿ, ತೆಂಬಾ ಬವುಮಾ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆಯಿನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಸೆನುರನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...