IND – WI 2nd Test | ಇನಿಂಗ್ಸ್‌ ಹಿನ್ನಡೆಯ ಭೀತಿಯಲ್ಲಿ ವಿಂಡೀಸ್‌; ಜಡೇಜಾಗೆ 3 ವಿಕೆಟ್

Date:

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ–ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳ ಆಕ್ರಮಣಕ್ಕೆ ಸಿಲುಕಿರುವ ವಿಂಡೀಸ್ ತಂಡ 43 ಓವರ್‌ಗಳಲ್ಲಿ 140 ರನ್‌ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡು ಇನಿಂಗ್ಸ್ ಹಿನ್ನಡೆಯ ಭೀತಿಯಲ್ಲಿದೆ. ಪ್ರವಾಸಿಗರು ಮುನ್ನಡೆ ಸಾಧಿಸಬೇಕಾದರೆ 378 ರನ್‌ಗಳನ್ನು ಗಳಿಸಬೇಕಾಗಿದೆ.

ದಿನದಾಟದ ಮಧ್ಯಾಹ್ನದ ನಂತರ ಬ್ಯಾಟಿಂಗ್ ಆರಂಭಿಸಿದ ವಿಂಡೀಸ್ ತಂಡಕ್ಕೆ ಆರಂಭಿಕ ಆಘಾತ ಸಿಕ್ಕಿತು. ಜಾನ್ ಕ್ಯಾಂಪ್‌ಬೆಲ್ 10 ರನ್‌ಗಳಿಗೆ ರವೀಂದ್ರ ಜಡೇಜಾ ಬೌಲಿಂಗ್‌ನಲ್ಲಿ ಔಟ್ ಆದರು. ಟಿ ಚಂದ್ರಪೌಲ್ 34 ರನ್‌ಗಳೊಂದಿಗೆ ತಂಡಕ್ಕೆ ಸ್ಥಿರತೆ ನೀಡಲು ಯತ್ನಿಸಿದರೂ, ಜಡೇಜಾ ದಾಳಿಗೆ ಬಲಿಯಾದರು. ಅಲಿಕ್ ಅಥನೇಜ್ 41 ರನ್‌ಗಳೊಂದಿಗೆ ಉತ್ತಮ ಪ್ರದರ್ಶನ ನೀಡಿ ತಂಡವನ್ನು ಮುನ್ನಡೆಸಲು ಪ್ರಯತ್ನಿಸಿದರು, ಆದರೆ ಕುಲದೀಪ್ ಯಾದವ್ ಬೌಲಿಂಗ್‌ನಲ್ಲಿ ವಿಕೆಟ್ ಕಳೆದುಕೊಂಡರು.

ಇದನ್ನು ಓದಿದ್ದೀರಾ? ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡ ಸಿದ್ದ; ಶುಭಮನ್ ಗಿಲ್‌ಗೆ ನಾಯಕತ್ವ – ತಂಡಕ್ಕೆ ಮರಳಿದ ಕೊಹ್ಲಿ, ರೋಹಿತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಯಕ ರಾಸ್ಟನ್ ಚೇಸ್ ಶೂನ್ಯಕ್ಕೆ ಜಡೇಜಾ ಬೌಲಿಂಗ್‌ನಲ್ಲಿ ಔಟ್ ಆದರು. ಇದರ ನಡುವೆ ಶಾಯ್ ಹೋಪ್ 31 ರನ್‌ಗಳೊಂದಿಗೆ ಮತ್ತು ಟೆವಿನ್ ಇಮ್ಲಾಚ್ 14 ರನ್‌ಗಳೊಂದಿಗೆ ಅಜೇಯರಾಗಿ ಉಳಿದು ತಂಡಕ್ಕೆ ಸ್ವಲ್ಪ ಹೋರಾಟದ ಆಸರೆ ನೀಡಿದರು. ಒಟ್ಟಾರೆಯಾಗಿ ವಿಂಡೀಸ್ ಬ್ಯಾಟಿಂಗ್ ಭಾರತದ ಸ್ಪಿನ್ ದಾಳಿಗೆ ತತ್ತರಿಸಿ ಹೋಯಿತು, ರವೀಂದ್ರ ಜಡೇಜಾ 3 ವಿಕೆಟ್ ಮಿಂಚಿದರೆ ಕುಲದೀಪ್ 1 ವಿಕೆಟ್ ಕಬಳಿಸಿದರು.

ಭಾರತ ತಂಡ ಎರಡನೇ ದಿನದಲ್ಲಿ ತನ್ನ ಇನ್ನಿಂಗ್ಸ್ ಅನ್ನು ಮುಂದುವರೆಸಿತು. ಯಶಸ್ವಿ ಜೈಸ್ವಾಲ್ 175 ರನ್‌ಗಳ ಭರ್ಜರಿ ಇನಿಂಗ್ಸ್ ಆಡಿ ಔಟ್ ಆದರು. ಸಾಯಿ ಸುಧರ್ಶನ್ 87 ರನ್‌ಗಳೊಂದಿಗೆ ಉತ್ತಮ ಬೆಂಬಲ ನೀಡಿದರೂ ಶತಕಕ್ಕೆ ತಪ್ಪಿದರು. ನಾಯಕ ಶುಭಮನ್ ಗಿಲ್ 129 ರನ್‌ಗಳ ಅಜೇಯ ಶತಕದೊಂದಿಗೆ ಮಿಂಚಿದರು, ಇದರೊಂದಿಗೆ ಭಾರತ ತನ್ನ ಮೊದಲ ಇನ್ನಿಂಗ್ಸ್ ಅನ್ನು 518/5 ರನ್‌ಗಳಿಗೆ ಡಿಕ್ಲೇರ್ ಮಾಡಿತು.

ನಿತೀಶ್ ಕುಮಾರ್ ರೆಡ್ಡಿ 43 ಮತ್ತು ಧ್ರುವ್ ಜುರೆಲ್ 44 ರನ್‌ಗಳೊಂದಿಗೆ ಉಪಯುಕ್ತ ಕೊಡುಗೆ ನೀಡಿದರು. ಭಾರತದ ಬ್ಯಾಟಿಂಗ್ ಲೈನ್‌ಅಪ್ ವಿಂಡೀಸ್ ಬೌಲರ್‌ಗಳನ್ನು ಸಂಪೂರ್ಣವಾಗಿ ಆಧೀನಗೊಳಿಸಿತು, ವಿಶೇಷವಾಗಿ ಜೊಮೆಲ್ ವಾರಿಕನ್ 3 ವಿಕೆಟ್ ಪಡೆದರೂ ತಂಡದ ಇತರ ಬೌಲರ್‌ಗಳು ಪರಿಣಾಮಕಾರಿಯಾಗಿ ಬೌಲ್ ಮಾಡಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...