ಟಿ20 ವಿಶ್ವಕಪ್ | ಆಸ್ಟ್ರೇಲಿಯಾ ವಿರುದ್ಧ 24 ರನ್‌ಗಳ ಜಯ: ಟೀಮ್ ಇಂಡಿಯಾ ಸೆಮಿಫೈನಲ್‌ಗೆ

Date:

ಸೈಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು(ಜೂನ್ 24) ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ವಿಶ್ವಕಪ್ 2024ರ ಸೂಪರ್ 8ರ ಘಟ್ಟದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ 24 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಆ ಮೂಲಕ 2023ರ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿದೆ.

ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಸೆಮಿಫೈನಲ್ ಪ್ರವೇಶಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಟೀಮ್ ಇಂಡಿಯಾವು, ನಾಯಕ ರೋಹಿತ್ ಶರ್ಮಾ ಅವರ ಭರ್ಜರಿ ಅರ್ಧಶತಕದ ನೆರವಿನಿಂದ 205 ರನ್‌ಗಳನ್ನು ದಾಖಲಿಸಿತ್ತು.

206 ರನ್‌ಗಳ ಗುರಿಯನ್ನು ಬೆನ್ನಟ್ಟಲು ಹೊರಟ ಮಿಚೆಲ್ ಮಾರ್ಷ್‌ ನೇತೃತ್ವದ ಆಸ್ಟೇಲಿಯಾವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 181 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 24 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಗೆಲ್ಲಲೇಬೇಕಾದ ಒತ್ತಡದಲ್ಲಿದ್ದ ಆಸ್ಟ್ರೇಲಿಯಾವು ಸೋಲೊಪ್ಪಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್ 24ರಂದು ಸೈಂಟ್ ವಿನ್ಸೆಂಟ್‌ನಲ್ಲಿ ನಡೆಯಲಿರುವ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ವ್ಯರ್ಥವಾದ ಟ್ರಾವಿಸ್ ಹೆಡ್ ಹೋರಾಟ

ಭಾರತ ನೀಡಿದ್ದ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಕೇವಲ 6 ರನ್ ಗಳಿಸಿ ವಾರ್ನರ್ ಅರ್ಶ್ ದೀಪ್ ಸಿಂಗ್ ಗೆ ವಿಕೆಟ್ ಒಪ್ಪಿಸಿದರು. ಆದರೆ ಈ ಹಂತದಲ್ಲಿ ಜೊತೆಗೂಡಿದ ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಮಾರ್ಶ್ 81 ರನ್ ಗಳ ಅಮೋಘ ಜೊತೆಯಾಟವಾಡಿದರು.

ಒಂದು ಹಂತದಲ್ಲಿ ಪಂದ್ಯ ಭಾರತ ತಂಡದ ಕೈತಪ್ಪುವ ಅಪಾಯ ಕೂಡ ಇತ್ತು. ಈ ಹಂತದಲ್ಲಿ ಅಕ್ಸರ್ ಪಟೇಲ್ ಹಿಡಿದ ಕ್ಯಾಚ್ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು. ಭಾರತ ತಂಡಕ್ಕೆ ಅಪಾಯಕಾರಿಯಾಗಿ ಬ್ಯಾಟ್ ಮಾಡುತ್ತಿದ್ದ ಮಿಚೆಲ್ ಮಾರ್ಶ್ ಅಕ್ಸರ್ ಪಟೇಲ್ ಹಿಡಿದ ಅದ್ಭುತ ಕ್ಯಾಚ್ ಗೆ ಬಲಿಯಾದರು.

ಕುಲ್‌ದೀಪ್ ಯಾದವ್ ಎಸೆದ 9ನೇ ಓವರ್ ನ ಕೊನೆಯ ಎಸೆತದಲ್ಲಿ ಮಾರ್ಶ್ ಅದ್ಭುತ ಹೊಡೆತಕ್ಕೆ ಮುಂದಾಗಿ ಅಕ್ಸರ್ ಪಟೇಲ್ ಕ್ಯಾಚಿತ್ತು ಔಟಾದರು. ಓವರ್‌ನ ಕೊನೆಯ ಎಸೆತದಲ್ಲಿ ಸಿಕ್ಸರ್‌ ಬಾರಿಸಲು ಮಾರ್ಶ್ ಯತ್ನಿಸಿದರೂ ಬೌಂಡರಿ ಲೈನ್ ಬಳಿ ಅಕ್ಸರ್ ಪಟೇಲ್ ಆ ಎಸೆತವನ್ನು ಅದ್ಭುತವಾಗಿ ಜಂಪ್ ಮಾಡಿ ಹಿಡಿತಕ್ಕೆ ಪಡೆಯುವಲ್ಲಿ ಯಶಸ್ವಿಯಾದರು. ಆ ಮೂಲಕ ಇಡೀ ಪಂದ್ಯಕ್ಕೆ ಮೊದಲ ತಿರುವು ನೀಡಿದರು.

ಆಸ್ಟ್ರೇಲಿಯಾ-ಅಫ್ಘಾನಿಸ್ತಾನಕ್ಕೆ ತೆರೆದ ‘ಸೆಮಿ’ ಬಾಗಿಲು!

ಟೀಮ್ ಇಂಡಿಯಾ ವಿರುದ್ಧದ ಇಂದಿನ ಪಂದ್ಯದಲ್ಲಿ ಸೋತರೂ ಕೂಡ ಆಸ್ಟ್ರೇಲಿಯಾಗೂ ಕೂಡ ಸೆಮಿಫೈನಲ್‌ಗೆ ತೆರಳಲು ಅವಕಾಶವಿದೆ. ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಒಂದು ವೇಳೆ ಅಫ್ಘಾನಿಸ್ತಾನ ಸೋತಲ್ಲಿ, ರನ್‌ರೇಟ್ ಆಧಾರದಲ್ಲಿ ಆಸ್ಟ್ರೇಲಿಯಾವು ಸೆಮಿಫೈನಲ್‌ ಪ್ರವೇಶಿಸಲಿದೆ. ಬಾಂಗ್ಲಾದೇಶ ವಿರುದ್ಧ ಅಫ್ಘಾನಿಸ್ತಾನ ಗೆದ್ದಲ್ಲಿ ಆಸ್ಟ್ರೇಲಿಯಾದ ಸೆಮಿಫೈನಲ್‌ ಕನಸಿಗೆ ತೆರೆ ಬೀಳಲಿದೆ.

ಬಾಂಗ್ಲಾದೇಶಕ್ಕೂ ಇದೆ ಒಂದು ಚಾನ್ಸ್‌

ಟೀಮ್ ಇಂಡಿಯಾ ಇಂದು ಆಸ್ಟ್ರೇಲಿಯಾ ವಿರುದ್ಧ ಗೆದ್ದ ಬಳಿಕ ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಆಸ್ಟ್ರೇಲಿಯಾ-ಅಫ್ಘಾನಿಸ್ತಾನಕ್ಕೆ ಮಾತ್ರವಲ್ಲದೇ, ಬಾಂಗ್ಲಾದೇಶಕ್ಕೂ ಕೂಡ ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ಅವಕಾಶವಿದೆ.

ಕುತೂಹಲಕಾರಿ ಅರ್ಹತೆಯ ಸನ್ನಿವೇಶ ಸದ್ಯ ನಿರ್ಮಾಣವಾಗಿದ್ದು, ಅಫ್ಘಾನ್ ವಿರುದ್ಧ ಬಾಂಗ್ಲಾದೇಶವು 61 ರನ್‌ಗಳಿಗಿಂತ ಹೆಚ್ಚು ಗೆದ್ದರೆ ಅಥವಾ 13 ಓವರ್‌ಗಳಲ್ಲಿ ಚೇಸ್ ಮಾಡಿದರೆ ಅರ್ಹತೆ ಪಡೆಯಲಿದೆ. ಬಾಂಗ್ಲಾದೇಶ 61 ರನ್‌ಗಳಿಗಿಂತ ಕಡಿಮೆ ಅಂತರದಲ್ಲಿ ಗೆದ್ದರೆ ಆಸ್ಟ್ರೇಲಿಯಾ ಅರ್ಹತೆ ಪಡೆಯುತ್ತದೆ. ಬಾಂಗ್ಲಾದೇಶವನ್ನು ಸೋಲಿಸಿದರೆ ಅಫ್ಘಾನಿಸ್ತಾನ ಅರ್ಹತೆ ಪಡೆಯುತ್ತದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...