ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

Date:

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಏಪ್ಯಾ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ರೋಚಕವಾಗಿ ಸೋಲಿಸಿದ್ದಲ್ಲದೇ, 9ನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿದೆ.

ಟಾಸ್ ಗೆದ್ದಿದ್ದ ಸೂರ್ಯ ಕುಮಾರ್ ನೇತೃತ್ವದ ಟೀಮ್ ಇಂಡಿಯಾ, ಪಾಕಿಸ್ತಾನವನ್ನು ಬ್ಯಾಟಿಂಗ್‌ಗೆ ಇಳಿಸಿತ್ತು. ಟೀಮ್ ಇಂಡಿಯಾದ ಸಂಘಟಿತ ಬೌಲಿಂಗ್ ಅನ್ನು ಎದುರಿಸುವಲ್ಲಿ ವಿಫಲರಾದ ಪಾಕಿಸ್ತಾನ 19.1 ಓವರ್‌ ಆಗುವಷ್ಟರಲ್ಲಿ 146 ರನ್ ಗಳಿಸಿ ಆಲೌಟ್ ಆಗಿತ್ತು.

ಈ ಗುರಿಯನ್ನು ಬೆನ್ನಟ್ಟಿದ್ದ ಟೀಮ್ ಇಂಡಿಯಾ ಆರಂಭಿಕ ಆಘಾತ ಎದುರಿಸಿತ್ತಲ್ಲದೇ, 20 ರನ್ ಗಳಿಸುಷ್ಟರಲದಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡಿತ್ತು. ಆ ಬಳಿಕ ಜೊತೆಯಾದ ಸಂಜು ಸ್ಯಾಮ್ಸನ್ ಹಾಗೂ ತಿಲಕ್ ವರ್ಮಾ 4 ನೇ ವಿಕೆಟ್‌ಗೆ ಸಾವಧಾನ ಜೊತೆಯಾಟ ನಡೆಸಿದರು. 77 ರನ್‌ಗಳಾಗುವಷ್ಟರಲ್ಲಿ 24 ರನ್ ಗಳಿಸಿದ್ದ ಸಂಜು ಔಟಾದರು. ಆ ಬಳಿಕ ಕ್ರೀಸ್‌ನಲ್ಲಿದ್ದ ತಿಲಕ್ ವರ್ಮಾಗೆ ಜೊತೆಯಾದ ಶಿವಂ ದುಬೆ 60 ರನ್‌ಗಳ ಜೊತೆಯಾಟ ನಡೆಸಿ, ಪಾಕ್ ಕೈಯಲ್ಲಿದ್ದ ಪಂದ್ಯವನ್ನು ಟೀಮ್ ಇಂಡಿಯಾ ಕಡೆಗೆ ವಾಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊನೆಯ ಓವರ್‌ನಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು 10 ರನ್‌ಗಳಿದ್ದಾಗ ಹಾರಿಸ್ ರೌಫ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಿಲಕ್ ವರ್ಮಾ ಗೆಲುವಿನ ಸನಿಹಕ್ಕೆ ತಂದು‌ ನಿಲ್ಲಿಸಿದರು. ಕೊನೆಯಲ್ಲಿ ರಿಂಕು ಸಿಂಗ್ ಬೌಂಡರಿ ಬಾರಿಸಿ ಗೆಲುವಿನ ರನ್ ದಾಖಲಿಸಿದರು.

ಟೀಮ್ ಇಂಡಿಯಾ 19.4 ಓವರುಗಳಲ್ಲಿ 5 ವಿಕೆಟ್ ಕಳೆದುಕೊಂಡು 150 ರನ್ ಗಳಿಸಿ, 9ನೇ ಬಾರಿಗೆ ಏಷ್ಯಾ ಕಪ್‌ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿತು.

2025ರ ಏಷ್ಯಾ ಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಯಾವುದೇ ಪಂದ್ಯದಲ್ಲಿ ಸೋಲು ಅನುಭವಿಸಿಲ್ಲ. ಶ್ರೀಲಂಕಾ ವಿರುದ್ಧ ನಡೆದಿದ್ದ ಪಂದ್ಯವು ಟೈ ಆಗಿತ್ತಾದರೂ, ಟೀಮ್ ಇಂಡಿಯಾ ಸೂಪರ್ ಓವರ್‌ನಲ್ಲಿ ಪಂದ್ಯವನ್ನು ಗೆದ್ದುಕೊಂಡಿತ್ತು.

ಫೈನಲ್ ಪಂದ್ಯದ ಬಳಿಕವೂ ಕೂಡ ಟೀಮ್ ಇಂಡಿಯಾ No Hand Shake Policy ಅನ್ನು ಮುಂದುವರಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...