ಏಷ್ಯಾ ಕಪ್‌ ಕ್ರಿಕೆಟ್‌ನಿಂದ ಹಿಂದೆ ಸರಿದ ಭಾರತ

Date:

ಭಾರತ-ಪಾಕಿಸ್ತಾನ ನಡುವೆ ನಡೆದ ಇತ್ತೀಚಿನ ಮಿಲಿಟರಿ ಘರ್ಷಣೆಗಳ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಡೆಸುವ ಎಲ್ಲ ಟೂರ್ನಿಗಳಿಂದ ಸದ್ಯಕ್ಕೆ ದೂರವಿರಲು ನಿರ್ಧರಿಸಿದೆ. ಹೀಗಾಗಿ ಈ ವರ್ಷ ನಡೆಯಲಿರುವ ಏಷ್ಯಾಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ.

ಶ್ರೀಲಂಕಾದಲ್ಲಿ ಮುಂದಿನ ತಿಂಗಳಿಂದ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಗೆ ತಂಡವನ್ನು ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ. ಹಾಗೆಯೇ ಈ ವರ್ಷಾಂತ್ಯದಲ್ಲಿ ಪುರುಷರ ಏಷ್ಯಾಕಪ್ ಟೂರ್ನಿ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿತ್ತು. ಇದೀಗ ಈ ಟೂರ್ನಿಯಿಂದಲೂ ಭಾರತ ಹೊರಗುಳಿಯುವುದಾಗಿ ಬಿಸಿಸಿಐ ತಿಳಿಸಿದೆ.

ಈ ಬಾರಿಯ ಏಷ್ಯಾಕಪ್ ಟೂರ್ನಿಯು ಭಾರತದಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಮುಂಬರುವ ಟಿ20 ವಿಶ್ವಕಪ್​ ಅನ್ನು ಕೇಂದ್ರೀಕರಿಸಿ ಟಿ20 ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲು ಯೋಜನೆ ರೂಪಿಸಲಾಗಿತ್ತು. ಆದರೀಗ ಆತಿಥ್ಯದ ಹಕ್ಕನ್ನು ಹೊಂದಿರುವ ಭಾರತವೇ ಟೂರ್ನಿಯಿಂದ ಹಿಂದೆ ಸರಿದಿದೆ. ಹೀಗಾಗಿ ಟೂರ್ನಿ ನಡೆಯುವ ಸಾಧ್ಯತೆಯಿಲ್ಲ ಎನ್ನಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಐಪಿಎಲ್ 2025: ಪ್ಲೇ ಆಫ್‌ನಲ್ಲಿ ಯಾರ್ಯಾರು ಆಡುವುದಿಲ್ಲ: ಆಟಗಾರರ ಪಟ್ಟಿ ಇಲ್ಲಿದೆ

ಏಷ್ಯಾಕಪ್ ಟೂರ್ನಿಗೆ ಅತೀ ಹೆಚ್ಚು ಪ್ರಾಯೋಜಕತ್ವ ಸಿಗುವುದು ಭಾರತದಿಂದ. ಇದೀಗ ಟೀಮ್ ಇಂಡಿಯಾ ಟೂರ್ನಿಯಿಂದ ಹೊರಗುಳಿದರೆ, ಪ್ರಾಯೋಜಕರ ಕೊರತೆ ಎದುರಾಗಲಿದೆ. ಅಲ್ಲದೆ ಆದಾಯದ ಮೇಲೂ ಭಾರೀ ಹೊಡೆತ ಬೀಳಲಿದೆ. ಹೀಗಾಗಿ ಈ ಬಾರಿ ಟೂರ್ನಿ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

ಪಾಕಿಸ್ತಾನದ ಸಚಿವರು ಮುಖ್ಯಸ್ಥರಾಗಿರುವ ಎಸಿಸಿ ಆಯೋಜಿಸುವ ಪಂದ್ಯಾವಳಿಯಲ್ಲಿ ಭಾರತ ತಂಡ ಆಡಲು ಸಾಧ್ಯವಿಲ್ಲ. ಹೀಗಾಗಿ ಮುಂಬರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್‌ನಿಂದ ಹಿಂದೆ ಸರಿಯುವ ಬಗ್ಗೆ ನಾವು ಈಗಾಗಲೇ ಎಸಿಸಿಗೆ ಮೌಖಿಕವಾಗಿ ತಿಳಿಸಿದ್ದೇವೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹೀಗಾಗಿ ಈ ವರ್ಷದ ನಡೆಯಲಿರುವ ಏಷ್ಯಾಕಪ್ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಕಾಣಿಸಿಕೊಳ್ಳುವುದಿಲ್ಲ. ಈ ಮೂಲಕ ಪಾಕಿಸ್ತಾನದ ಕ್ರಿಕೆಟ್ ಆದಾಯಕ್ಕೂ ಹೊಡೆತ ನೀಡಲು ಭಾರತ ಮುಂದಾಗಿದೆ.

2023 ರಲ್ಲಿ ನಡೆದ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಕೇವಲ 50 ರನ್​ಗಳಿಗೆ ಆಲೌಟ್ ಮಾಡಿ ಟ್ರೋಫಿ ಜಯಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...