ಶ್ರೀಲಂಕಾ ವಿರುದ್ಧ ಟಿ20 ಸರಣಿ: ಭಾರತಕ್ಕೆ 2-0 ಜಯ

Date:

ಯಶಸ್ವಿ ಜೈಸ್ವಾಲ್‌ ಮತ್ತು ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್‌ ಹಾಗೂ ಭಾರತದ ಬೌಲರ್‌ಗಳ ಸಾಂಘಿಕ ಪ್ರಯತ್ನದಿಂದ ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆ ಟೀಂ ಇಂಡಿಯಾ ತನ್ನದಾಗಿಸಿಕೊಂಡಿತು.

ಟಾಸ್‌ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಶ್ರೀಲಂಕಾ ಕುಶಾಲ ಪೆರೆರಾ (53) ಅವರ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 9 ವಿಕೆಟ್‌ನಷ್ಟಕ್ಕೆ 161 ರನ್‌ ಗಳಿಸಿ ಭಾರತಕ್ಕೆ ಗೆಲ್ಲಲು 162 ರನ್ ಗಳ ಗುರಿ ನೀಡಿತು.

ಪಥುಮ್ ನಿಸಾಂಕ (32; 24ಎ) ಮತ್ತು ಕುಶಾಲ ಮೆಂಡಿಸ್ (10, 11ಎ) ಅವರು ಉತ್ತಮ ಆರಂಭ ನೀಡುವ ಪ್ರಯತ್ನ ಮಾಡಿದರು. ಆದರೆ ನಾಲ್ಕನೇ ಒವರ್‌ನಲ್ಲಿ ಮೆಂಡಿಸ್ ವಿಕೆಟ್ ಗಳಿಸಿದ ಆರ್ಷದೀಪ್ ಸಿಂಗ್  ಜೊತೆಯಾಟವನ್ನು ಮುರಿದರು. ಈ ಹಂತದಲ್ಲಿ ಪಥುಮ್ ಮತ್ತು ಪೆರೆರಾ ಅವರು ಜೊತೆಗೂಡಿದರು. ಎರಡನೇ ವಿಕೆಟ್‌ಗೆ ಜೊತೆಯಾಟದಲ್ಲಿ 54 ರನ್‌ ಸೇರಿಸಿದರು. ಹತ್ತನೇ ಓವರ್‌ನಲ್ಲಿ ಪಥುಮ್ ವಿಕೆಟ್ ಪಡೆದ ರವಿ ಬಿಷ್ಣೋಯಿ ಜೊತೆಯಾಟಕ್ಕೆ ತಡೆಯೊಡ್ಡಿದರು. ಕೊನೆಯಲ್ಲಿ 22 ರನ್‌ಗಳ ಅಂತರದಲ್ಲಿ ಶ್ರೀಲಂಕಾದ 5 ವಿಕೆಟ್‌ಗಳು ಪತನವಾದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್ 2024: ಪಿ ವಿ ಸಿಂಧು ಸೇರಿ ಭಾರತದ ಆರು ಕ್ರೀಡಾಪಟುಗಳ ಶುಭಾರಂಭ

ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದ ಕಾರಣ ಓವರ್‌ಗಳನ್ನು ಪರಿಷ್ಕರಿಸಿ ಗೆಲುವಿಗೆ 8 ಓವರ್‌ಗಳಲ್ಲಿ 78 ರನ್‌ಗಳ ಗುರಿ ನೀಡಲಾಯಿತು. ಟೀಂ ಇಂಡಿಯಾ 6.3 ಓವರ್‌ಗಳಲ್ಲಿ ಮೂರು ವಿಕೆಟ್‌ ನಷ್ಟಕ್ಕೆ 81 ರನ್‌ ಗಳಿಸಿ ಗೆಲುವಿನ ಗಡಿ ದಾಟಿತು. ಜೈಸ್ವಾಲ್‌ (30; 15ಎ), ಸೂರ್ಯಕುಮಾರ್ (26, 12ಎ) ಮತ್ತು ಹಾರ್ದಿಕ್‌ ಪಾಂಡ್ಯ (ಅಜೇಯ 22; 9ಎ) ರನ್‌ ಗಳಿಸಿ ಗೆಲುವಿನ ರೂವಾರಿಯಾದರು. ಕೊನೆಯ ಪಂದ್ಯವು ಮಂಗಳವಾರ(ಜುಲೈ 30) ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್:

ಶ್ರೀಲಂಕಾ: 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 161 (ಪಥುಮ್ ನಿಸಾಂಕ 32, ಕುಶಾಲ ಪೆರೆರಾ 53, ಕಮಿಂದು ಮೆಂಡಿಸ್ 26, ಅಸಲಂಕಾ 14, ಅರ್ಷದೀಪ್ ಸಿಂಗ್ 24/2, ಅಕ್ಷರ್ ಪಟೇಲ್ 30ಕ್ಕೆ/2, ರವಿ ಬಿಷ್ಣೋಯಿ 26/3, ಹಾರ್ದಿಕ್ ಪಾಂಡ್ಯ 23/2).

ಭಾರತ: 6.3 ಓವರ್‌ಗಳಲ್ಲಿ 81/3 (ಜೈಸ್ವಾಲ್‌ 30, ಸೂರ್ಯಕುಮಾರ್‌ 26, ಹಾರ್ದಿಕ್‌ ಪಾಂಡ್ಯ ಅಜೇಯ 22). ಫಲಿತಾಂಶ: ಭಾರತಕ್ಕೆ ಡಕ್ವರ್ಥ್‌ ಲೂಯಿಸ್‌ ನಿಯಮದಡಿ 7 ವಿಕೆಟ್‌ಗಳ ಜಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...