ವಿಶ್ವಕಪ್ | ನೆದರ್‌ಲ್ಯಾಂಡ್ಸ್‌ ವಿರುದ್ಧವೂ ಜಯ ಸಾಧಿಸಿ ಟೀಮ್ ಇಂಡಿಯಾ ‘ಅಜೇಯ’

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಏಕದಿನ ವಿಶ್ವಕಪ್‌ನ ಕೊನೆಯ ಲೀಗ್ ಪಂದ್ಯದಲ್ಲೂ ಕೂಡ ನೆದರ್‌ಲ್ಯಾಂಡ್ಸ್‌ ವಿರುದ್ಧವೂ ಟೀಮ್ ಇಂಡಿಯಾ 160 ರನ್‌ಗಳ ಭರ್ಜರಿ ದಾಖಲಿಸುವ ಮೂಲಕ ಲೀಗ್ ಮಟ್ಟದಲ್ಲಿ ಆಡಿರುವ ಎಲ್ಲ 9 ಪಂದ್ಯಗಳಲ್ಲಿ ಯಾವುದೇ ಸೋಲು ಕಾಣದೆ ಅಜೇಯರಾಗಿ ಉಳಿದಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ್ದ ಟೀಮ್ ಇಂಡಿಯಾ, ಕೆ ಎಲ್ ರಾಹುಲ್-ಶ್ರೇಯಸ್ ಅಯ್ಯರ್ ಭರ್ಜರಿ ಶತಕದ ನೆರವಿನಿಂದ ನೆದರ್‌ಲ್ಯಾಂಡ್ಸ್‌ ಗೆಲುವಿಗೆ 411 ರನ್‌ಗಳ ಬೃಹತ್ ಗುರಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿಯನ್ನು ಬೆನ್ನತ್ತಿದ ನಾಯಕ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ಡಚ್ಚರ ತಂಡ, 47.5 ಓವರ್‌ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 250 ರನ್‌ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ಟೀಮ್ ಇಂಡಿಯಾ 160 ರನ್‌ಗಳ ಭರ್ಜರಿ ದಾಖಲಿಸಿತು.

ನೆದರ್‌ಲ್ಯಾಂಡ್ಸ್‌ ಪರ ಬ್ಯಾಟಿಂಗ್‌ನಲ್ಲಿ ತೇಜ ನಿಡಮನೂರು ಅರ್ಧ ಶತಕ(54 ರನ್) ಗಳಿಸಿ, ರೋಹಿತ್ ಶರ್ಮಾಗೆ ವಿಕೆಟ್ ಒಪ್ಪಿಸಿದರು. ಉಳಿದಂತೆ ಸೈಬ್ರಾಂಡ್ ಎಂಗಲ್ಬ್ರೆಕ್ಟ್ 45 ರನ್, ಕಾಲಿನ್ ಅಕರ್ಮನ್ 35, ಮ್ಯಾಕ್ಸ್​ ಓಡೌಡ್ 30, ಸ್ಕಾಟ್ ಎಡ್ವರ್ಡ್ಸ್ 17 ರನ್ ಗಳಿಸಿದರು.

ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್, ಜಸ್‌ಪ್ರೀತ್ ಬುಮ್ರಾ, ಕುಲ್‌ದೀಪ್ ಯಾದವ್, ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ, ಅಪರೂಪಕ್ಕೆ ಬೌಲಿಂಗ್ ನಡೆಸಿದ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ಟೀಮ್ ಇಂಡಿಯಾ ಪರ ಬ್ಯಾಟಿಂಗ್‌ನಲ್ಲಿ ಔಟಾಗದೆ 128*(94 ಎಸೆತ, 5 ಸಿಕ್ಸ್, 10 ಬೌಂಡರಿ) ರನ್ ಗಳಿಸಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

9 ಮಂದಿ ಆಟಗಾರರಿಂದ ಬೌಲಿಂಗ್

ನೆದರ್‌ಲ್ಯಾಂಡ್ಸ್‌ ವಿರುದ್ಧದ ಇಂದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ವಿಕೆಟ್ ಕೀಪರ್ ಕೆ ಎಲ್ ರಾಹುಲ್ ಇಬ್ಬರನ್ನು ಬಿಟ್ಟರೆ ಒಂಭತ್ತು ಮಂದಿ ಆಟಗಾರರು ಬೌಲಿಂಗ್ ನಡೆಸಿದ್ದು ವಿಶೇಷವಾಗಿತ್ತು. ಶುಭಮನ್ ಗಿಲ್, ಸೂರ್ಯ ಕುಮಾರ್ ಯಾದವ್ ಕೂಡ ಬೌಲಿಂಗ್ ನಡೆಸಿದ್ದು, ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿತು.

ಸೆಮಿಫೈನಲ್‌ನಲ್ಲಿ ನ್ಯೂಝಿಲ್ಯಾಂಡ್ ತಂಡವನ್ನು ಟೀಮ್ ಇಂಡಿಯಾ ಎದುರಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...