ಚೆನ್ನೈ ಟೆಸ್ಟ್ | ಬೃಹತ್‌ ಮುನ್ನಡೆಯತ್ತ ಭಾರತ; 149 ರನ್‌ಗಳಿಗೆ ಬಾಂಗ್ಲಾ ಆಲೌಟ್

Date:

ಚೆನ್ನೈನ ಎಂ ಎ ಚಿದಂಬರಮ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಪ್ರವಾಸಿ ಬಾಂಗ್ಲಾದೇಶ ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ಸಿಲುಕಿ 149 ರನ್‌ಗಳಿಗೆ ಆಲೌಟ್‌ ಆಗಿದೆ. ಫಾಲೋಆನ್‌ ಅವಕಾಶ ನೀಡದೆ ಎರಡನೇ ಇನಿಂಗ್ಸ್‌ ಆರಂಭಿಸಿರುವ ಭಾರತ ಎರಡನೇ ದಿನದಾಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 81 ರನ್‌ ಗಳಿಸಿ 308 ರನ್‌ಗಳ ಮುನ್ನಡೆ ಪಡೆದಿದೆ.

6 ವಿಕೆಟ್ ನಷ್ಟಕ್ಕೆ 339 ರನ್‌ಗಳೊಂದಿಗೆ ಎರಡನೇ ದಿನದಾಟ ಶುರುಮಾಡಿದ ಭಾರತ 91.2 ಓವರ್‌ಗಳಲ್ಲಿ ಆಲೌಟ್‌ ಆಯಿತು. ಟೀಂ ಇಂಡಿಯಾದ 376 ರನ್‌ ಮೊತ್ತಕ್ಕೆ ರವಿಚಂದ್ರನ್ ಅಶ್ವಿನ್ ಶತಕ (113), ರವೀಂದ್ರ ಜಡೇಜಾ (86) ಹಾಗೂ ಯಶಸ್ವಿ ಜೈಸ್ವಾಲ್‌ (56) ಪ್ರಮುಖ ಕಾರಣಕರ್ತರಾದರು.

ನಂತರ ಮೊದಲ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ ಟೀಂ ಇಂಡಿಯಾದ ಬೌಲರ್‌ಗಳ ಕರಾರುವಾಕ್‌ ದಾಳಿಗೆ 47.1 ಓವರ್‌ಗಳಲ್ಲಿ 149 ರನ್‌ಗಳಿಗೆ ಆಲೌಟ್‌ ಆಗಿ 227 ರನ್‌ ಹಿನ್ನಡೆ ಅನುಭವಿಸಿತು. ಬೂಮ್ರಾ 50 ರನ್‌ಗಳಿಗೆ 4 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್‌ ಎನಿಸಿದರು. ಮೊಹಮದ್‌ ಸಿರಾಜ್‌, ಆಕಾಶ್ ದೀಪ್‌ ಹಾಗೂ ರವೀಂದ್ರ ಜಡೇಜಾ ಕೂಡ ತಲಾ 2 ವಿಕೆಟ್‌ ಕಿತ್ತು ಪ್ರವಾಸಿಗರ ಪತನಕ್ಕೆ ಕಾರಣರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಾಂಗ್ಲಾ ವಿರುದ್ಧದ ಟೆಸ್ಟ್: ಮೊದಲ ಇನಿಂಗ್ಸ್‌ನಲ್ಲಿ 376 ಪೇರಿಸಿದ ಭಾರತ, ಪ್ರವಾಸಿಗರಿಗೆ ಆರಂಭಿಕ ಆಘಾತ

ಬಾಂಗ್ಲಾದೇಶದ ಪರ ಶಕೀಬ್‌(32), ಲಿಟ್ಟನ್(22), ಮೆಹದಿ(27) ಹಾಗೂ ಶಾಂಟೋ(20) ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್‌ಗಳ್ಯಾರು ಹೆಚ್ಚು ಪ್ರತಿರೋಧ ತೋರಲಿಲ್ಲ.

ಎರಡನೇ ಇನಿಂಗ್ಸ್ ಆರಂಭಿಸಿರುವ ಭಾರತ 23 ಒವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 81 ರನ್‌ ಗಳಿಸಿದೆ. ಶುಭಮನ್‌ ಗಿಲ್ ಅಜೇಯ 32 ಹಾಗೂ ರಿಷಬ್‌ ಪಂತ್‌ ಅಜೇಯ 12 ರನ್‌ ಗಳಿಸಿ ಆಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...