ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ತಂಡದಿಂದ ಹೊರಬಿದ್ದ ವಿಶ್ವ ನಂ.1 ಬೌಲರ್‌ ಅಶ್ವಿನ್‌!

Date:

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ, ಆಸ್ಟ್ರೇಲಿಯಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ನಡೆಯುತ್ತಿರುವ ʻಫೈನಲ್‌ ಪೈಟ್‌ʼನಲ್ಲಿ ಭಾರತ, ಅಚ್ಚರಿ ಎಂಬಂತೆ ನಾಲ್ವರು ವೇಗಿಗಳಿಗೆ ಮಣೆ ಹಾಕಿದೆ. ಹೀಗಾಗಿ ವಿಶ್ವದ ನಂ.1 ಟೆಸ್ಟ್‌ ಬೌಲರ್‌, ನಂ.2 ಟೆಸ್ಟ್‌ ಆಲ್‌ರೌಂಡರ್‌ ಖ್ಯಾತಿಯ ಅನುಭವಿ ರವಿಚಂದ್ರನ್‌ ಅಶ್ವಿನ್‌, ಆಡುವ ಹನ್ನೊಂದರ ಬಳಗದಿಂದ ಹೊರಗುಳಿದಿದ್ದಾರೆ. ಸ್ಪಿನ್‌ ಆಲ್‌ರೌಂಡರ್‌ ವಿಭಾಗದಲ್ಲಿ ರವೀಂದ್ರ ಜಡೇಜಾ ಮತ್ತು ಅಶ್ವಿನ್‌ ಬದಲು ಶಾರ್ದೂಲ್‌ ಠಾಕೂರ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

 ಟಾಸ್‌ ಬಳಿಕ ಮಾತಣಾಡಿದ ನಾಯಕ ರೋಹಿತ್‌ ಶರ್ಮಾ, ʻಮೋಡ ಕವಿದ ವಾತಾವರಣವಿದೆ. ಹೀಗಾಗಿ ಪಿಚ್‌ ತುಂಬಾ ಬದಲಾಗುತ್ತದೆ ಎಂದು ಅನಿಸುತ್ತಿಲ್ಲ. ನಾಲ್ಕು ವೇಗದ ಬೌಲರ್‌ ಮತ್ತು ಓರ್ವ ಸ್ಪಿನ್ನರ್‌ ಜೊತೆ ನಾವು ಆಡಲಿದ್ದೇವೆ. ಜಡೇಜಾ ಆಡಲಿದ್ದು, ಅಶ್ವಿನ್‌ ಹೊರಗುಳಿಯಲಿದ್ದಾರೆ. ಅನುಭವಿ ಅಶ್ವಿನ್‌ ಅವರನ್ನು ತಂಡದಿಂದ ಕೈ ಬಿಡುವುದು ಕಠಿಣ ನಿರ್ಧಾರವಾಗಿದೆ. ಹಲವು ವರ್ಷಗಳಿಂದ ಆಶ್ವಿನ್‌ ತಂಡದ ಪಾಲಿಗೆ ಮ್ಯಾಚ್ ವಿನ್ನರ್ ಆಗಿದ್ದಾರೆ. ಮಧ್ಯಮ ಕ್ರಮಾಖದಲ್ಲಿ ರಹಾನೆ ಆಡಲಿದ್ಧಾರೆ. 80 ಟೆಸ್ಟ್ ಪಂದ್ಯಗಳನ್ನು ಆಡಿರುವ ರಹಾನೆ ಅನುಭವ, ಈ ಪಂದ್ಯದಲಿ ತಂಡಕ್ಕೆ ನೆರವಾಗುವ ನಿರೀಕ್ಷೆ ಇದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

18 ತಿಂಗಳುಗಳ ಬಳಿಕ ಮರಳಿದ ರಹಾನೆ

ಅನುಭವಿ ಬ್ಯಾಟರ್‌ ಅಜಿಂಕ್ಯಾ ರಹಾನೆ, ಸುಮಾರು 18 ತಿಂಗಳ ಬಳಿಕ ಭಾರತ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಕಂಡ ಐಪಿಎಲ್‌ನಲ್ಲಿ ಚೆನ್ನೈ ಪರ ಆಡಿದ್ದ ರಹಾನೆ, ವೇಗವಾಗಿ ರನ್‌ ಗಳಿಸುವ ಮೂಲಕ ತಂಡಕ್ಕೆ ನೆರವಾಗಿದ್ದರು.  

ಇನ್ನು ಮುಂಬೈ ಓಪನರ್‌ ಇಶಾನ್‌ ಕಿಶನ್‌ ಬದಲು ಮಹತ್ವದ ಪಂದ್ಯದಲ್ಲಿ ಕೆಎಸ್ ಭರತ್‌ಗೆ ವಿಕೆಟ್ ಕೀಪಿಂಗ್‌ ಅವಕಾಶ ದೊರೆತಿದೆ. ಮುಹಮ್ಮದ್ ಶಮಿ, ಮುಹಮ್ಮದ್ ಸಿರಾಜ್, ಉಮೇಶ್ ಯಾದವ್‌ ಜೊತೆಗೆ ಶಾರ್ದೂಲ್ ಠಾಕೂರ್ ನಾಲ್ಕನೇ ವೇಗದ ಬೌಲರ್‌ ಸ್ಥಾನವನ್ನು ತುಂಬಿದ್ದಾರೆ.

ಆಡುವ ಹನ್ನೊಂದರ ಬಳಗ
ಭಾರತ : ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್‌ ಕೀಪರ್), ರವೀಂದ್ರ ಜಡೇಜಾ, ಉಮೇಶ್ ಯಾದವ್, ಶಾರ್ದೂಲ್ ಠಾಕೂರ್, ಮುಹಮ್ಮದ್ ಸಿರಾಜ್, ಮುಹಮ್ಮದ್ ಶಮಿ.

ಆಸ್ಟ್ರೇಲಿಯಾ : ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್‌ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...