ಏಕದಿನ ವಿಶ್ವಕಪ್ 2023 | ಭಾರತಕ್ಕೆ ಸವಾಲಿನ ಗುರಿ ನೀಡಿದ ಬಾಂಗ್ಲಾ

Date:

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಭಾರತಕ್ಕೆ 257 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಬಾಂಗ್ಲಾ ಬ್ಯಾಟಿಂಗ್‌ ಆಯ್ದುಕೊಂಡು ಲಿಟ್ಟನ್‌ ದಾಸ್, ತಂಝೀದ್ ಹಸನ್, ಮುಶ್ಫಿಕರ್ ರಹೀಮ್ ಹಾಗೂ ಮಹಮ್ಮದುಲ್ಲಾ ಅವರ ಸಮಯೋಚಿತ ಆಟದಿಂದ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್‌ ಪೇರಿಸಿದೆ.

ಆರಂಭಿಕರಾಗಿ ಕಣಕ್ಕಿಳಿದ ಲಿಟ್ಟನ್‌ ದಾಸ್ ಹಾಗೂ ತಂಝೀದ್ ಹಸನ್ ಬಿರುಸಿನ ಹೊಡೆತಗಳ ಮೂಲಕ ಮೊದಲ 14 ಓವರ್‌ಗಳಲ್ಲಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು. 14.4 ಓವರ್‌ನಲ್ಲಿ ತಂಡದ ಮೊತ್ತ 93 ಆಗಿದ್ದಾಗ ತಂಝೀದ್ ಹಸನ್(51)  ಅವರನ್ನು ಎಲ್‌ಬಿ ಬಲೆಗೆ ಕೆಡವುದರ ಮೂಲಕ ಇವರಿಬ್ಬರ ಜೋಡಿಯನ್ನು ಕುಲದೀಪ್‌ ಯಾದವ್‌ ಮುರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಬಂದ ನಜ್ಮುಲ್ ಹೊಸೈನ್ ಶಾಂಟೊ(8), ಮೆಹಿದಿ ಹಸನ್ ಮಿರಾಜ್(3) ಹಾಗೂ ತೌಹಿದ್ ಹೃದಯೋಯ್(16) ಅವರು ಸಿರಾಜ್‌ ಹಾಗೂ ಜಡೇಜಾ ದಾಳಿಗೆ ಕ್ರೀಸ್‌ನಲ್ಲಿ ಹೆಚ್ಚು ಕಾಲ ಉಳಿಯದೆ ಪೆವಿಲಿಯನ್‌ ಕಡೆ ಮುಖಮಾಡಿದರು.

ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ

ರವೀಂದ್ರ ಜಡೇಜಾ ಬೌಲಿಂಗ್‌ನಲ್ಲಿ ಲಿಟ್ಟನ್‌ ದಾಸ್‌ (66) ಔಟಾದ ನಂತರ ತಂಡಕ್ಕೆ ಚೇತರಿಕೆ ನೀಡಿದವರು ಮುಶ್ಫಿಕರ್ ರಹೀಮ್(38) ಹಾಗೂ ಮಹಮ್ಮದುಲ್ಲಾ(46). ಅಂತಿಮವಾಗಿ 50 ಓವರ್‌ಗಳಲ್ಲಿ ಬಾಂಗ್ಲಾದೇಶ 256 ರನ್‌ ಕಲೆ ಹಾಕಿತು.

ಭಾರತದ ಪರ ರವೀಂದ್ರ ಜಡೇಜಾ 38/2, ಮೊಹಮ್ಮದ್ ಸಿರಾಜ್ 52/2, ಜಸ್ಪ್ರೀತ್ ಬುಮ್ರಾ 41/2 ಗಳಿಸಿದರೆ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಗಾಯಗೊಂಡ ಹಾರ್ದಿಕ್, ಕೊಹ್ಲಿ ಬೌಲಿಂಗ್

ಮೂರು ಚೆಂಡುಗಳನ್ನು ಹಾಕಿದ ನಂತರ ಬೌಲಿಂಗ್‌ ಮಾಡುವ ವೇಳೆ ಗಾಯಗೊಂಡ ಮಧ್ಯಮ ವೇಗಿ ಹಾರ್ದಿಕ್ ಪಾಂಡ್ಯ ಪಂದ್ಯದಿಂದ ಹೊರಗುಳಿದರು. ಹಾರ್ದಿಕ್‌ನ ಬಾಕಿ ಮೂರು ಎಸೆತವನ್ನು ವಿರಾಟ್‌ ಕೊಹ್ಲಿ ಮಾಡಿ 2 ರನ್‌ಗಳಷ್ಟನ್ನೇ ನೀಡಿದರು. ಇದರೊಂದಿಗೆ 6 ವರ್ಷಗಳ ನಂತರ ಕೊಹ್ಲಿ ಬೌಲಿಂಗ್‌ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...