T20 ವಿಶ್ವಕಪ್ | ರೋಹಿತ್ ಶರ್ಮಾ ಅರ್ಧಶತಕ; ಇಂಗ್ಲೆಂಡ್‌ ಗೆಲುವಿಗೆ 172 ರನ್‌ಗಳ ಗುರಿ ನೀಡಿದ ಟೀಮ್ ಇಂಡಿಯಾ

Date:

ವೆಸ್ಟ್‌ಇಂಡೀಸ್‌ನ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 172 ರನ್‌ಗಳ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 171 ರನ್ ದಾಖಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೀಮ್ ಇಂಡಿಯಾ ಪರ ಇನ್ನಿಂಗ್ಸ್ ಆರಂಭಿಸಿದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರ ಪೈಕಿ ಕೊಹ್ಲಿ ಸ್ಫೋಟಕ ಆರಂಭ ನೀಡುವ ಮುನ್ಸೂಚನೆ ನೀಡಿದರು. ರೀಸ್ ಟಾಪ್ಲಿಯ ಓವರ್‌ನಲ್ಲಿ ಒಂದು ಸಿಕ್ಸರ್‌ ಬಾರಿಸಿ, ನಂತರದ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಬಳಿಕ ಬಂದ ರಿಷಭ್ ಪಂತ್ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಕೇವಲ 4 ರನ್ ಬಾರಿಸಿ, ಸ್ಯಾಮ್ ಕರನ್ ಎಸೆತದಲ್ಲಿ ಔಟಾದರು.

ಬಳಿಕ ಕ್ರೀಸ್‌ನಲ್ಲಿದ್ದ ನಾಯಕ ರೋಹಿತ್ ಶರ್ಮಾ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ಉತ್ತಮ ಜೊತೆಯಾಟ ನಡೆಸಿದರು. ನಾಯಕ ರೋಹಿತ್ ಶರ್ಮಾ 39 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಬೌಂಡರಿಯ ನೆರವಿನಿಂದ 57 ರನ್ ಗಳಿಸಿದ್ದಾಗ, ಆದಿಲ್ ರಶೀದ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಸೂರ್ಯ ಕುಮಾರ್ ಯಾದವ್ ಹಾಗೂ ರೋಹಿತ್ ಶರ್ಮಾ ಜೋಡಿಯು 73 ರನ್‌ಗಳ ಜೊತೆಯಾಟ ನಡೆಸಿದರು.

ಆ ಬಳಿಕ ಉತ್ತಮವಾಗಿ ಬ್ಯಾಟ್ ನಡೆಸಿ ಅರ್ಧಶತಕದತ್ತ ಮುನ್ನುಗ್ಗುತ್ತಿದ್ದ ಸೂರ್ಯ ಕುಮಾರ್ ಯಾದವ್ ಅವರನ್ನು ಜೋಫ್ರಾ ಆರ್ಚರ್, ತನ್ನ ಓವರ್‌ನಲ್ಲಿ ವಿಕೆಟ್ ಪಡೆಯುವ ಮೂಲಕ ರನ್‌ಗೆ ಬ್ರೇಕ್ ಹಾಕಿದರು. ಕ್ರಿಸ್ ಜೋರ್ಡಾನ್‌ಗೆ ಕ್ಯಾಚ್ ನೀಡಿ, ಔಟಾಗುವುದಕ್ಕೂ ಮುನ್ನ 36 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಬೌಂಡರಿಯ ನೆರವಿನಿಂದ 47 ರನ್ ಗಳಿಸಿದರು.

ಆನಂತರ ಟೀಮ್ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯಾ 13 ಎಸೆತಗಳಲ್ಲಿ 23 ರನ್ ಗಳಿಸಿದರೆ, ರವೀಂದ್ರ ಜಡೇಜಾ 17 ರನ್, ಅಕ್ಷರ್ ಪಟೇಲ್ 10 ರನ್ ಗಳಿಸಿದರು. ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ ಮಹತ್ವದ ಪಂದ್ಯದಲ್ಲೇ ಶೂನ್ಯಕ್ಕೆ ಔಟಾದರು. ತಾನೆದುರಿಸಿದ ಜೋರ್ಡಾನ್ ಅವರ ಮೊದಲ ಎಸೆತದಲ್ಲೇ ವಿಕೆಟ್ ಕೀಪರ್ ಬಟ್ಲರ್‌ಗೆ ಕ್ಯಾಚಿತ್ತು ಔಟಾಗುವ ಮೂಲಕ ಮತ್ತೊಮ್ಮೆ ಬ್ಯಾಟಿಂಗ್‌ನಲ್ಲಿ ವಿಫಲರಾದರು.

ಅಂತಿಮವಾಗಿ ಟೀಮ್ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 171 ರನ್ ದಾಖಲಿಸುವ ಮೂಲಕ ಸವಾಲಿನ ಗುರಿ ನೀಡಿದೆ. ಇಂಗ್ಲೆಂಡ್ ಪರವಾಗಿ ಕ್ರಿಸ್ ಜೋರ್ಡಾನ್ 3 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಜೋಫ್ರಾ ಆರ್ಚರ್, ಆದಿಲ್ ರಶೀದ್, ಸ್ಯಾಮ್ ಕರನ್ ಹಾಗೂ ರೀಸ್ ಟಾಪ್ಲಿ ತಲಾ ಒಂದೊಂದು ವಿಕೆಟ್ ಗಳಿಸುವಲ್ಲಿ ಸಫಲರಾದರು.

ಗೆದ್ದವರು ಫೈನಲ್‌ಗೆ

ಇಂದಿನ ಸೆಮಿಫೈನಲ್‌ನಲ್ಲಿ ಗೆದ್ದವರು ಜೂನ್ 29ರಂದು ಬಾರ್ಬಡೋಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ, ಈಗಾಗಲೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿರುವ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...