ಭಾರತ-ಪಾಕ್ ಕ್ರಿಕೆಟ್ ಪಂದ್ಯ: ‘ರಕ್ತಕ್ಕಿಂತ ಹಣ ಮುಖ್ಯ’; ಬಿಸಿಸಿಐ ವಿರುದ್ಧ ಆಕ್ರೋಶ

Date:

2025ರ ಸೆಪ್ಟೆಂಬರ್ 9ರಿಂದ ‘ಏಷ್ಯನ್ ಕಪ್’ ಕ್ರಿಕೆಟ್‌ ಟೂರ್ನಿ ಆರಂಭವಾಗಲಿದೆ. ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ‘ಗ್ರೂಪ್ ಎ’ನಲ್ಲಿ ಆಡಲಿವೆ. ಪಾಕಿಸ್ತಾನದ ಜೊತೆಗೆ ಕ್ರಿಕೆಟ್‌ ಪಂದ್ಯ ಆಡಲು ಮುಂದಾಗಿರುವ ಭಾರತ ತಂಡದ ವಿಚಾರವಾಗಿ ಬಿಸಿಸಿಐ ವಿರುದ್ಧ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ವಾಗ್ದಾಳಿ ನಡೆಸಿದ್ದಾರೆ. ಬಿಸಿಸಿಐಗೆ ‘ರಕ್ತಕ್ಕಿಂದ ಹಣವೇ ಮುಖ್ಯ’ ಎಂದು ಕಿಡಿಕಾರಿದ್ದಾರೆ.

ಏಪ್ರಿಲ್‌ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಉಭಯ ರಾಷ್ಟ್ರಗಳ ರಾಜತಾಂತ್ರಿಕ ಮತ್ತು ವ್ಯಾವಹಾರಿಕ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಇದೆಲ್ಲದರ ನಡುವೆಯೂ, ಸೆಪ್ಟೆಂಬರ್‌ 9ರಿಂದ 28ರವರೆಗೆ ಯುಎಇಯಲ್ಲಿ ನಡೆಯಲಿರುವ ಏಷ್ಯನ್‌ ಕಪ್‌ನಲ್ಲಿ ಪಾಕ್‌ ಜೊತೆ ಟೀಮ್ ಇಂಡಿಯಾ ಆಟವಾಡುತ್ತದೆ ಎಂದು ಬಿಸಿಸಿಐ ಘೋಷಿಸಿದೆ.

ಸೆಪ್ಟೆಂಬರ್‌ 14ರಂದು ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್‌ ತಂಡಗಳ ನಡುವೆ ಪಂದ್ಯ ನಡೆಯಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಘೋಷಿಸಿದೆ. ಅಲ್ಲದೆ, ಈ ಪಂದ್ಯವನ್ನು ‘ಬ್ಲಾಕ್‌ಬಸ್ಟರ್ ಪಂದ್ಯ’ ಎಂದು ಕರೆದಿದೆ. ಸೂಪರ್ ಫೋರ್ ಸುತ್ತಿನಲ್ಲಿ ಮತ್ತು ಫೈನಲ್‌ನಲ್ಲಿಯೂ ಎರಡೂ ತಂಡಗಳು ಮುಖಾಮುಖಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ-ಪಾಕ್ ಪಂದ್ಯದ ವಿಚಾರವಾಗಿ ಬಿಸಿಸಿಐ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಿಯಾಂಕಾ ಚತುರ್ವೇದಿ, “ಪಾಕ್‌ ಜೊತೆಗಿನ ಕ್ರಿಕೆಟ್‌ ಸಂಬಂಧವನ್ನು ಬಿಸಿಸಿಐ ಪುನರಾರಂಭಿಸುವುದು ‘ಶಾಪಗ್ರಸ್ತ ಹಣ’ ಸಂಪಾದನೆಗೆ ಸಮವಾಗಿದೆ” ಎಂದು ಹೇಳಿದ್ದಾರೆ.

“ಭಾರತ-ಪಾಕ್ ಕ್ರಿಕೆಟ್‌ ಪಂದ್ಯದಿಂದ ಹಣ ಗಳಿಸಲು ಯತ್ನಿಸುತ್ತಿರುವ ಪ್ರತಿಯೊಂದು ಪ್ರಾಯೋಜಕ, ಪ್ರಸಾರಕ ಹಾಗೂ ಸ್ಟ್ರೀಮಿಂಗ್ ಆ್ಯಪ್‌ನ ಹೆಸರನ್ನು ಬಹಿರಂಗಪಡಿಸಿ ಮತ್ತು ಟೀಕಿಸಿ. ಏಕೆಂದರೆ, BCCI ಮತ್ತು ಭಾರತ ಸರ್ಕಾರವು ಈ ಪಂದ್ಯವನ್ನು ಯಾವುದೇ ಲಜ್ಜೆ ಇಲ್ಲದೆ ಮುಂದುವರೆಸುತ್ತಿರುವುದು ಸ್ಪಷ್ಟವಾಗಿದೆ. ಆದ್ದರಿಂದ, ನಾವು ಭಾರತೀಯ ನಾಗರಿಕರಾಗಿ ನಮ್ಮ ಧ್ವನಿಯನ್ನು ಜೋರಾಗಿ ಮತ್ತು ಸ್ಪಷ್ಟವಾಗಿ ಎತ್ತಬೇಕಾಗಿದೆ. ಭಾರತ-ಪಾಕ್ ಪಂದ್ಯವನ್ನು ನೇರಪ್ರಸಾರ ಮಾಡುವ ಎಲ್ಲ ಸ್ಟ್ರೀಮಿಂಗ್ ಆ್ಯಪ್‌ಗಳು ಮತ್ತು ಪ್ರಸಾರ ಚಾನಲ್‌ಗಳನ್ನು ನಿಷೇಧಿಸುವಂತೆ ನಾನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವಗಳಿಗೆ ಮನವಿ ಮಾಡುತ್ತೇನೆ. ಅಥವಾ ಈ ಸಚಿವಾಲಯಗಳೂ ಕೂಡ ಒತ್ತಡಕ್ಕೆ ಮಣಿಯುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ನಡೆದ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (WCL) ಟೂರ್ನಿಯಲ್ಲಿ ಜುಲೈ 31ರಂದು ನಡೆಯಬೇಕಿದ್ದ ಟೂರ್ನಿಯ ಸೆಮಿಫೈನಲ್‌ನಲ್ಲಿ ಯುವರಾಜ್ ಸಿಂಗ್ ನೇತೃತ್ವದ ಭಾರತ ಕ್ರಿಕೆಟ್‌ ತಂಡವು ಪಾಕಿಸ್ತಾನ ವಿರುದ್ಧ ಆಡಲು ನಿರಾಕರಿಸಿತ್ತು. ಇದಕ್ಕೆ, ಪಹಲ್ಗಾಮ್ ದಾಳಿ ಕಾರಣವಂದು ಹೇಳಲಾಗಿತ್ತು. ಭಾರತೀಯ ತಂಡ ನಿರ್ಧಾರವನ್ನು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸ್ವಾಗತಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...