ಭಾರತ-ಪಾಕ್‌ ನಡುವೆ ಕ್ರಿಕೆಟ್ ಸಂಬಂಧ ಮುಂದುವರಿಯಬೇಕು: ಸೌರವ್ ಗಂಗೂಲಿ

Date:

ಭಾರತ ಮತ್ತು ಪಾಕಿಸ್ತಾನ ತಂಡಗಳು 2025ರ ಏಷ್ಯಾ ಕಪ್ ಟೂರ್ನಿಯಲ್ಲಿ ಮುಖಾಮುಖಿಯಾಗಲು ಸಜ್ಜಾಗಿರುವ ಹಿನ್ನೆಲೆಯಲ್ಲಿ, ಎರಡೂ ದೇಶಗಳು ತಮ್ಮ ಕ್ರಿಕೆಟ್ ಸಂಬಂಧವನ್ನು ಮುಂದುವರಿಸಬೇಕು ಎಂಬ ಅಭಿಪ್ರಾಯವನ್ನು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐದ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ವ್ಯಕ್ತಪಡಿಸಿದ್ದಾರೆ.

“ಕ್ರಿಕೆಟ್ ಮುಂದುವರಿಯಬೇಕು. ಆದರೆ ಪಹಲ್ಗಾಮ್ ಘಟನೆಯಂಥ ಭಯೋತ್ಪಾದಕ ದಾಳಿಗಳು ನಡೆಯಬಾರದು. ಭಾರತ ಭಯೋತ್ಪಾದನೆಯ ವಿರುದ್ಧ ಸದಾ ಬಲವಾದ ನಿಲುವು ಹೊಂದಿದೆ. ಅಂತಹ ದಾಳಿಗಳನ್ನು ಖಂಡಿಸಲೇಬೇಕು. ಆದರೆ, ಅದರ ನಡುವೆ ಕ್ರೀಡೆಗಳು ನಿಲ್ಲಬಾರದು” ಎಂದು ಗಂಗೂಲಿ ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

2025ರ ಏಷ್ಯಾ ಕಪ್ ಟೂರ್ನಿಯ ವೇಳಾಪಟ್ಟಿ ಇತ್ತೀಚೆಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಬಿಡುಗಡೆ ಮಾಡಿದೆ. ಭಾರತ ಹಾಗೂ ಪಾಕಿಸ್ತಾನವನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಒಮಾನ್ ತಂಡಗಳೊಂದಿಗೆ ಒಂದೇ ಗುಂಪಿನಲ್ಲಿ ಇರಿಸಲಾಗಿದೆ. ಸೆಪ್ಟೆಂಬರ್ 14ರಂದು ಈ ಎರಡೂ ಬಲಿಷ್ಠ ತಂಡಗಳು ಮೊದಲ ಪಂದ್ಯದಲ್ಲಿ ಸೆಣಸಲಿವೆ. ಎರಡೂ ತಂಡಗಳು ಸೂಪರ್ ಫೋರ್ ಹಂತಕ್ಕೆ ಅರ್ಹತೆ ಪಡೆದರೆ, ಸೆಪ್ಟೆಂಬರ್ 21ರಂದು ಮತ್ತೊಮ್ಮೆ ಎದುರಾಗಲಿದೆ. ಫೈನಲ್‌ಗೆ ತಲುಪಿದರೆ, ಭಾರತ–ಪಾಕ್‌ ನಡುವೆ ಮೂರನೇ ಬಾರಿಗೆ ಪಂದ್ಯ ನಡೆಯುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ಜಯಗಳಿಸಿದ್ದು ಹೇಗೆ? ಗೆಲುವಿಗೆ ತಂತ್ರ ರೂಪಿಸಿದ್ದು ಹೇಗಿತ್ತು?

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತವು ಪಾಕಿಸ್ತಾನದೊಂದಿಗೆ ಕ್ರಿಕೆಟ್ ಆಡಲು ಒಪ್ಪಿಕೊಂಡಿರುವುದು ಟೀಕೆಗೆ ಗುರಿಯಾಗಿದೆ. ಆದರೆ ಬಿಸಿಸಿಐನ ನಿರ್ಧಾರವನ್ನು ಬೆಂಬಲಿಸಿದ ಗಂಗೂಲಿ, “ರಾಷ್ಟ್ರೀಯ ಭದ್ರತೆ ಬಗ್ಗೆ, ಭಾರತ ಭಯೋತ್ಪಾದನೆಯ ವಿರುದ್ಧ ಸದಾ ಬಲವಾದ ನಿಲುವು ಹೊಂದಿದೆ. ಅಂತಹ ದಾಳಿಗಳನ್ನು ಖಂಡಿಸಲೇಬೇಕು. ಆದರೆ ಕ್ರೀಡಾಕ್ಷೇತ್ರದಲ್ಲಿ ಸ್ನೇಹದ ಬಾಗಿಲು ಸದಾ ತೆರೆದಿರಬೇಕು” ಎಂದು ಹೇಳಿದ್ದಾರೆ.

ಈ ಬಾರಿ ಏಷ್ಯಾ ಕಪ್‌ನಲ್ಲಿ ಒಟ್ಟು 19 ಪಂದ್ಯಗಳು ನಡೆಯಲಿದ್ದು, 8 ತಂಡಗಳು ಭಾಗವಹಿಸುತ್ತಿವೆ. ಹಿಂದಿನ ಆವೃತ್ತಿಯ ಹೋಲಿಕೆಗಿಂತ ಈ ಬಾರಿ ಎರಡು ತಂಡಗಳು ಹೆಚ್ಚಾಗಿವೆ. ಟೂರ್ನಿಯ ಪಂದ್ಯಗಳು ಯುಎಇನ ಅಬುಧಾಬಿ ಮತ್ತು ದುಬೈನಲ್ಲಿ ನಡೆಯಲಿದ್ದು, ನಿರ್ದಿಷ್ಟ ಪಂದ್ಯಗಳ ಸ್ಥಳಗಳನ್ನು ಇನ್ನೂ ಘೋಷಿಸಲಾಗಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...