ಆಸೀಸ್ ವಿರುದ್ಧ ಐದನೇ ಟೆಸ್ಟ್ | ಟೀಂ ಇಂಡಿಯಾ ಮತ್ತೆ ವೈಫಲ್ಯ: 185ಕ್ಕೆ ಆಲೌಟ್

Date:

ಸಿಡ್ನಿಯಲ್ಲಿ ನಡೆಯುತ್ತಿರುವ ಬಾರ್ಡರ್‌ – ಗವಾಸ್ಕರ್‌ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿರುವ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗಳಿಗೆ ಆಲೌಟ್‌ ಆಗಿದೆ. ಈ ಟೆಸ್ಟ್‌ ಪಂದ್ಯದಲ್ಲೂ ಟೀಮ್ ಇಂಡಿಯಾದ ಸ್ಟಾರ್‌ ಬ್ಯಾಟರ್‌ಗಳು ರನ್‌ ಕಲೆ ಹಾಕುವಲ್ಲಿ ಮತ್ತೆ ವಿಫಲರಾದರು.

ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ ಜಸ್ಪ್ರಿತ್ ಬುಮ್ರಾ ಅವರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಟೀಮ್ ಇಂಡಿಯಾಗೆ ಇದು ಮಹತ್ವದ ಪಂದ್ಯವಾಗಿತ್ತು. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ದೃಷ್ಟಿಯಿಂದ ಈ ಪಂದ್ಯ ಗೆಲ್ಲುವುದು ಭಾರತಕ್ಕೆ ಅನಿವಾರ್ಯವಾಗಿತ್ತು. ಆದರೆ ಟೀಮ್ ಇಂಡಿಯಾದ ಆರಂಭಿಕ ಬ್ಯಾಟರ್‌ಗಳು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲಿಲ್ಲ.

ಯಶಸ್ವಿ ಜೈಸ್ವಾಲ್‌ (10), ಕೆ ಎಲ್ ರಾಹುಲ್ (4) ರನ್‌ ಕಲೆ ಹಾಕುವಲ್ಲಿ ವಿಫಲರಾದರು. ನಾಲ್ಕನೇ ಟೆಸ್ಟ್‌ನಲ್ಲಿ ತಂಡದಿಂದ ಹೊರಗುಳಿದಿದ್ದ ಶುಭಮನ್‌ ಗಿಲ್‌, ಸಿಡ್ನಿ ಟೆಸ್ಟ್‌ನಲ್ಲಿ ಆಡುವ ಅವಕಾಶವನ್ನು ಪಡೆದರು. ಆದರೆ ಇವರು ಸಹ 20 ರನ್‌ಗಳ ಮೇಲೆ ದೊಡ್ಡ ಕಾಣಿಕೆ ನೀಡಲಿಲ್ಲ. ಹಳೆಯ ದಾಟಿಯಲ್ಲಿ ಔಟ್ ಆದ ವಿರಾಟ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವ ಸೂಚನೆ ನೀಡಿದ್ದರು. ಆದರೆ 17 ರನ್‌ಗಳಿಸಿ ಔಟಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಾಲ್ಕನೇ ಟೆಸ್ಟ್‌ | ಕೈಕೊಟ್ಟ ಬ್ಯಾಟಿಂಗ್: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾಗೆ ಹೀನಾಯ ಸೋಲು

48 ರನ್‌ಗಳ ಜೊತೆಯಾಟ 72 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ರವೀಂದ್ರ ಜಡೇಜಾ ಹಾಗೂ ರಿಷಭ್ ಪಂತ್ ಜೋಡಿ ಕೊಂಚ ಆಸರೆ ಆಯಿತು. ಇವರಿಬ್ಬರ ಜೋಡಿ 151 ಎಸೆತಗಳನ್ನು ಎದುರಿಸಿ 48 ರನ್‌ಗಳ ಪೇರಿಸಿತು. ರಿಷಭ್‌ ಪಂತ್‌ 98 ಎಸೆತಗಳಲ್ಲಿ 40 ರನ್‌ ಬಾರಿಸಿ ನಿರ್ಗಮಿಸಿದರು. ರವೀಂದ್ರ ಜಡೇಜಾ 95 ಎಸೆತಗಳಲ್ಲಿ 26 ರನ್‌ ಸಿಡಿಸಿದರು. ಕೆಳ ಮಧ್ಯಮ ಕ್ರಮಾಂಕದಲ್ಲಿ ವಾಷಿಂಗ್ಟನ್‌ ಸುಂದರ್ 14, ಜಸ್ಪ್ರಿತ್ ಬುಮ್ರಾ 22 ರನ್ ಬಾರಿಸಿ ತಂಡದ ಮೊತ್ತವನ್ನು 180ರ ಗಡಿ ದಾಟಿಸಿದರು.

ಆಸ್ಟ್ರೇಲಿಯಾದ ಪರ ವೇಗದ ಬೌಲರ್‌ಗಳು ಬಿಗುವಿನ ದಾಳಿಯನ್ನು ನಡೆಸಿದರು. ಸ್ಕಾಟ್‌ ಬೋಲೆಂಡ್‌ 31 ರನ್‌ ನೀಡಿ 4 ವಿಕೆಟ್‌ ಪಡೆದರೆ, ಮಿಚೆಲ್ ಸ್ಟಾರ್ಕ್‌ 3, ಪ್ಯಾಟ್‌ ಕಮಿನ್ಸ್‌ 2 ವಿಕೆಟ್‌ ಪಡೆದರು, ಲಿಯೋನ್‌ 1 ವಿಕೆಟ್ ಕಬಳಿಸಿದರು.

ಮೊದಲ ಇನಿಂಗ್ಸ್ ಆರಂಭಿಸಿರುವ ಆಸೀಸ್ ಆರಂಭಿಕ ಪತನ ಕಂಡಿದ್ದು 3 ಓವರ್‌ಗಳಲ್ಲಿ 9 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...