ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

Date:

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗಬಹುದು ಎಂಬ ಊಹಾಪೋಹಗಳು ತಳ್ಳಿಹಾಕಲ್ಪಟ್ಟಿವೆ. ಆಯೋಜಕರ ಮೂಲಗಳ ಪ್ರಕಾರ, ಪಂದ್ಯ ನಿಗದಿಯಂತೆ ನಡೆಯಲಿದೆ.

ಸೆಪ್ಟೆಂಬರ್‌ 9ರಿಂದ ಆರಂಭವಾಗುವ ಏಷ್ಯಾಕಪ್‌ನಲ್ಲಿ, ಎ ಗುಂಪಿನಲ್ಲಿರುವ ಭಾರತ ತನ್ನ ಮೊದಲ ಪಂದ್ಯವನ್ನು ಸೆ.10ರಂದು ಯುಎಇ ವಿರುದ್ಧ ಆಡಲಿದೆ. ಭಾರತ–ಪಾಕಿಸ್ತಾನ ನಡುವಿನ ಪಂದ್ಯ ಸೆ.14ರಂದು ದುಬೈನಲ್ಲಿ ನಡೆಯಲಿದೆ. 2024ರ ಟಿ20 ವಿಶ್ವಕಪ್‌ನಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದವು.

ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್‌ ಪಂದ್ಯವನ್ನು ಆಡಬಾರದು ಎಂದು ಸಂಸದರೂ ಸೇರಿದಂತೆ ಹಲವರು ಒತ್ತಡ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಮುಕ್ತಾಯವಾದ ವಿಶ್ವ ಲೆಜೆಂಡ್ಸ್‌ ಚಾಂಪಿಯನ್‌ ಶಿಪ್‌ ಪಂದ್ಯಾವಳಿಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಆಡಿರಲಿಲ್ಲ. ಹೀಗಾಗಿ ಏಷ್ಯಾಕಪ್‌ನಲ್ಲೂ ಭಾರತ ಹಿಂದೆ ಸರಿಯಬಹುದು ಎಂಬ ಗೊಂದಲಗಳು ಸೃಷ್ಟಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಟೆಸ್ಟ್ ಕ್ರಿಕೆಟ್‌ನಲ್ಲಿರುವ ನಿಜವಾದ ಸೌಂದರ್ಯ ಹಾಗೂ ಭರವಸೆ ಮೂಡಿಸಿದ ಯಂಗ್ ಇಂಡಿಯಾ ಟೀಮ್

ಪಾಕಿಸ್ತಾನದ ವಿರುದ್ಧ ಭಾರತ ಆಡಬಾರದೆಂದು ರಾಜಕೀಯ ವಲಯದಲ್ಲೂ ಒತ್ತಡವಿದ್ದರೂ, ಏಷ್ಯಾಕಪ್‌ಗೆ ಹಾಗೂ ಪಾಕಿಸ್ತಾನದ ವಿರುದ್ಧ ಪಂದ್ಯವಾಡಲು ಸರ್ಕಾರದ ಅನುಮತಿ ಈಗಾಗಲೇ ದೊರೆತಿದೆ. ದುಬೈನಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಭಾರತ ಹಿಂದೆ ಸರಿಯುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ, ಆ.29ರಿಂದ ಸೆ.7ರವರೆಗೆ ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ ಏಷ್ಯಾಕಪ್‌ ಹಾಕಿ ಟೂರ್ನಿಯಿಂದ ಪಾಕಿಸ್ತಾನ ಭದ್ರತೆಯ ಕಾರಣ ನೀಡಿ ಹಿಂದೆ ಸರಿಯಿತು. ಪಾಕಿಸ್ತಾನ ಆಟಗಾರರಿಗೆ ಭಾರತ ಸರ್ಕಾರ ವೀಸಾ ನೀಡಲು ಸಿದ್ಧವಿದ್ದರೂ, ಪಾಕಿಸ್ತಾನ ತಂಡ ಭಾರತ ಪ್ರವಾಸ ನಿರಾಕರಿಸಿತು ಎಂದು ಹಾಕಿ ಇಂಡಿಯಾ ತಿಳಿಸಿದೆ. ಈ ಹಾಕಿ ಟೂರ್ನಿ 2026ರ ವಿಶ್ವಕಪ್‌ ಅರ್ಹತೆ ಪಡೆಯಲು ಪ್ರಮುಖವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...