IND vs SA Test | 7 ವಿಕೆಟ್‌ ಕಳೆದುಕೊಂಡ ದಕ್ಷಿಣ ಆಫ್ರಿಕಾ ಸಂಕಷ್ಟದಲ್ಲಿ; ಗೆಲುವಿನತ್ತ ಭಾರತ

Date:

ಕೋಲ್ಲತ್ತಾದ ಈಡನ್ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ – ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಮುಕ್ತಾಯಗೊಂಡಿದ್ದು, ಪ್ರವಾಸಿ ತಂಡವು ತನ್ನ ಎರಡನೇ ಇನಿಂಗ್ಸ್‌ನಲ್ಲಿ 93 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಆತಂಕದ ಸ್ಥಿತಿಯಲ್ಲಿದೆ.

ಹರಿಣಗಳ ತಂಡ ಕೇವಲ 63 ರನ್‌ಗಳ ಮುನ್ನಡೆ ಹೊಂದಿದೆ. ಪಂದ್ಯವು ನಾಳೆ ನಡೆಯಲಿರುವ ಮೂರನೇ ದಿನದಲ್ಲಿಯೇ ಮುಗಿದು ಭಾರತಕ್ಕೆ ಗೆಲುವು ಸಿಗುವ ಸಂಭವವಿದೆ. ಆಲ್‌ರೌಂಡರ್‌ ರವೀಂದ್ರ ಜಡೇಜಾ 4 ವಿಕೆಟ್‌ಗಳನ್ನು ಪಡೆದು ಪ್ರಾಬಲ್ಯ ಮೆರೆದಿದ್ದು, ಆತಿಥೇಯರು ಸರಣಿಯಲ್ಲಿ ಮುನ್ನಡೆ ಸಾಧಿಸುವ ಹಾದಿಯಲ್ಲಿದ್ದಾರೆ.

ಮಧ್ಯಾಹ್ನದ ನಂತರ ದಕ್ಷಿಣ ಆಫ್ರಿಕಾ ತನ್ನ ಎರಡನೇ ಇನಿಂಗ್ಸ್ ಆರಂಭಿಸಿತು, ಆದರೆ ಭಾರತದ ಸ್ಪಿನ್ ದಾಳಿಯ ಮುಂದೆ ಕುಸಿಯಿತು. ಆರಂಭಿಕ ರಯಾನ್ ರಿಕೆಲ್ಟನ್ (11 ರನ್) ಕುಲದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರೆ, ಏಡನ್ ಮಾರ್ಕ್ರಮ್ (4 ರನ್) ಮತ್ತು ವಿಯಾನ್ ಮುಲ್ಡರ್ (11 ರನ್) ಜಡೇಜಾ ಅವರ ಬೌಲಿಂಗ್‌ಗೆ ಔಟಾದರು. ನಾಯಕ ಟೆಂಬಾ ಬವುಮಾ (29 ಅಜೇಯ) ಏಕಾಂಗಿಯಾಗಿ ಹೋರಾಡುತ್ತಿದ್ದರೂ, ಟೋನಿ ಡಿ ಜೋರ್ಜಿ (2 ರನ್), ಟ್ರಿಸ್ಟನ್ ಸ್ಟಬ್ಸ್ (5 ರನ್), ಕೈಲ್ ವೆರ್ರೇಯ್ನೆ (9 ರನ್) ಮತ್ತು ಮಾರ್ಕೋ ಜಾನ್ಸೆನ್ (13 ರನ್) ಸ್ಪಿನ್ನರ್‌ಗಳಿಗೆ ವಿಕೆಟ್ ಒಪ್ಪಿಸಿದರು. ಜಡೇಜಾ (4/29) ಮತ್ತು ಕುಲದೀಪ್ (2/12) ಅವರ ಬೌಲಿಂಗ್‌ ದಿನದ ಪ್ರಮುಖ ಪ್ರದರ್ಶನವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2ನೇ ದಿನದ ಆಟವು ಭಾರತದ ಮೊದಲ ಇನಿಂಗ್ಸ್‌ನ್‌ 37/1 ರನ್‌ಗಳಿಂದ ಮುಂದುವರಿಯಿತು. ಕೆಎಲ್ ರಾಹುಲ್ (39 ರನ್) ಮತ್ತು ವಾಷಿಂಗ್ಟನ್ ಸುಂದರ್ (29 ರನ್) ತಂಡಕ್ಕೆ ಉತ್ತಮ ಆರಂಭ ನೀಡಿದರೂ, ಶುಭಮನ್ ಗಿಲ್ (4 ರನ್) ಗಾಯದ ಕಾರಣ ಹೊರಗುಳಿದರು. ರಿಷಭ್ ಪಂತ್ (27 ರನ್) ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರೂ, ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಸೈಮನ್ ಹಾರ್ಮರ್ (4/30) ಮತ್ತು ಮಾರ್ಕೋ ಜಾನ್ಸೆನ್ (3/35) ಅವರ ಬೌಲಿಂಗ್‌ನಿಂದ ಭಾರತದ ಇನಿಂಗ್ಸ್ 189 ರನ್‌ಗಳಿಗೆ ಮುಗಿಯಿತು. ಇದರೊಂದಿಗೆ ಭಾರತಕ್ಕೆ 30 ರನ್‌ಗಳ ಮುನ್ನಡೆ ದೊರಕಿತು.

ಇದನ್ನು ಓದಿದ್ದೀರಾ? ದೇಶಿ ಕ್ರಿಕೆಟ್‌ನಲ್ಲಿ ಆಡಿದರೆ ಮಾತ್ರ ಏಕದಿನಕ್ಕೆ ಅವಕಾಶ: ರೋಹಿತ್, ಕೊಹ್ಲಿಗೆ ಬಿಸಿಸಿಐ ಸಂದೇಶ

ಕಪಿಲ್‌ ದೇವ್‌ ಸರಿಗಟ್ಟಿದ ಜಡೇಜ

ಈ ಪಂದ್ಯದಲ್ಲಿ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 4,000 ರನ್‌ಗಳು ಮತ್ತು 338 ವಿಕೆಟ್‌ಗಳನ್ನು ಪಡೆದುಕೊಂಡು ಜಡೇಜಾ ಅವರು ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದನ್ನು ಅವರು ತಮ್ಮ 88ನೇ ಟೆಸ್ಟ್ ಪಂದ್ಯದಲ್ಲಿ ಸಾಧಿಸಿದ್ದು, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಹೆಮ್ಮೆಯ ಕ್ಷಣವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...