ಭಾರತ – ವೆಸ್ಟ್‌ ಇಂಡೀಸ್‌ 2ನೇ ಟಿ20: ಸೇಡಿಗೆ ಕಾದಿರುವ ಹಾರ್ದಿಕ್‌ ಪಡೆಗೆ ಮಳೆಯ ಆತಂಕ

Date:

ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವಿನ ಎರಡನೇ ಟಿ20 ಪಂದ್ಯ ಗಯಾನಾದಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮೊದಲ ಪಂದ್ಯ ಸೋತಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಪಡೆ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.

ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆದ ಆರಂಭಿಕ ಪಂದ್ಯದಲ್ಲಿ ಭಾರತದ ವಿರುದ್ಧ ನಾಲ್ಕು ರನ್‌ಗಳ ರೋಚಕ ಜಯದ ನಂತರ ವಿಂಡೀಸ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಬ್ಯಾಟಿಂಗ್​ನಲ್ಲಿ ತೀವ್ರ ವೈಫಲ್ಯ ಕಂಡಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ ಮೇಲುಗೈ ಸಾಧಿಸಿ ಸರಣಿಯ ಮೇಲೆ ಹಿಡಿತ ಸಾಧಿಸಲು ಕಾತರಿಸುತ್ತಿದೆ. ಅನುಭವಿ ಅಟಗಾರರಿಲ್ಲದ ತಂಡದಲ್ಲಿ ಯುವ ಆಟಗಾರರೇ ತುಂಬಿದ್ದು, ಇಂದು ಅಬ್ಬರಿಸುವ ನಿರೀಕ್ಷೆಯಲ್ಲಿದೆ. ಇದಕ್ಕಾಗಿ ಕೆಲವು ಬದಲಾವಣೆಗಳಾಗುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತಮ ಆರಂಭ ಒದಗಿಸುವಲ್ಲಿ ವಿಫಲವಾಗುತ್ತಿರುವ ಶುಭಮನ್‌​ ಗಿಲ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್‌ ಈ ಪಂದ್ಯದಲ್ಲಿ ಅಬ್ಬರಿಸುತ್ತಾರಾ ಎಂಬುದನ್ನು ಕಾದುನೋಡಬೇಕು. ಸಂಜು ಸ್ಯಾಮ್ಸನ್ ಕೂಡ ಉತ್ತಮ ಪ್ರದರ್ಶನ ನೀಡಿ ತಂಡದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಬೇಕಿದೆ.

ಬೌಲಿಂಗ್‌ನಲ್ಲಿ ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್ ಎದುರಾಳಿಗಳಿಗೆ ಸಿಂಹಸ್ವಪ್ನರಾಗಿದ್ದರು. ಆದರೆ ಲಯ ಕಂಡುಕೊಳ್ಳದ ಅಕ್ಷರ್ ಪಟೇಲ್​ ಅವರನ್ನು ಕೈಬಿಟ್ಟರು ಅಚ್ಚರಿ ಇಲ್ಲ. ವೇಗಿಗಳಾಗಿ ಕಣಕ್ಕಿಳಿದಿದ್ದ ಅರ್ಶ್​ದೀಪ್ ಸಿಂಗ್, ಮುಕೇಶ್ ಕುಮಾರ್ ಜೊತೆಗೆ ಉಮ್ರಾನ್ ಮಲಿಕ್-ಆವೇಶ್ ಖಾನ್ ಇಬ್ಬರಲ್ಲಿ ಮತ್ತೊಬ್ಬ ವೇಗಿ ಅವಕಾಶ ಪಡೆಯುತ್ತಾರೆ ಎನ್ನುತ್ತದೆ ವರದಿಗಳು.

ಈ ಸುದ್ದಿ ಓದಿದ್ದೀರಾ? ಟಿ20: ಭಾರತದ ವಿರುದ್ಧ ರೋಚಕ ಗೆಲುವು ಸಾಧಿಸಿದ ವೆಸ್ಟ್ ಇಂಡೀಸ್

ಇನ್ನು ವೆಸ್ಟ್‌ ಇಂಡೀಸ್‌ ತಂಡದಲ್ಲಿ ನಾಯಕ ರೋವ್​ಮನ್ ಪೊವೆಲ್, ಬ್ರೆಂಡನ್ ಕಿಂಗ್ ಮತ್ತು ನಿಕೋಲಸ್ ಪೂರನ್ ಉತ್ತಮ ಫಾರ್ಮ್​ನಲ್ಲಿದ್ದಾರೆ. ಇವರ ಜೊತೆಗೆ ಜಾನ್ಸ್​ ಚಾರ್ಲೆಸ್, ಶಿಮ್ರಾನ್ ಹೆಟ್ಮೆಯರ್​ ಬ್ಯಾಟಿಂಗ್‌ನಲ್ಲಿ ಸ್ಪೋಟಿಸುವ ಸಾಧ್ಯತೆಯಿದೆ. ಒಬೆಡ್ ಮೆಕಾಯ್, ರೊಮಾರಿಯೋ ಶೆಫಾರ್ಡ್​, ಜೇಸನ್ ಹೋಲ್ಡರ್ ಉತ್ತಮ ಬೌಲಿಂಗ್​ ನಡೆಸುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ಗೆದ್ದಿರುವ ಕಾರಣ ತಂಡದ ಬದಲಾವಣೆ ಸಾಧ್ಯತೆ ಕಡಿಮೆಯಿದೆ.

ಮಳೆ ಬರುವ ನಿರೀಕ್ಷೆ

ಗಯಾನದಲ್ಲಿ ನಡೆಯುವ ಎರಡನೇ ಟಿ20 ಪಂದ್ಯಕ್ಕೆ ಮಳೆಯ ಆತಂಕವಿದೆ. ಹವಾಮಾನ ವರದಿಗಳ ಪ್ರಕಾರ ಶೇ. 30 ರಿಂದ 40 ರಷ್ಟು ಮಳೆ ಬರುವ ಸಾಧ್ಯತೆಯಿದೆ. ವರುಣ ಆಗಮಿಸಿದರೆ ಪಂದ್ಯಕ್ಕೆ ಸ್ವಲ್ಪ ವಿಳಂಬ ಉಂಟುಮಾಡಬಹುದು. ಮಳೆ ಬಂದು ಪಂದ್ಯ ತಡವಾಗಿ ಆರಂಭವಾದರೆ ಎರಡನೇ ಬ್ಯಾಟಿಂಗ್ ಮಾಡುವ ತಂಡಕ್ಕೆ ಪಿಚ್‌ ಅನುಕೂಲವಾಗಬಹುದು.

ಪಂದ್ಯವಾಡುವ ಉಭಯ ತಂಡಗಳ ಸಂಭಾವ್ಯ ಬಳಗ

ಭಾರತ:

ಶುಭಮನ್‌ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್(ಉಪ ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಮುಕೇಶ್ ಕುಮಾರ್.

ವೆಸ್ಟ್‌ ಇಂಡೀಸ್‌:

ಕೈಲ್ ಮೇಯರ್ಸ್, ಬ್ರೆಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೊಮಾರಿಯೋ ಶೆಫಾರ್ಡ್, ಅಕೆಲ್ ಹೊಸೈನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್.

ಪಂದ್ಯ ಆರಂಭ: ಸಂಜೆ 8ಕ್ಕೆ

ನೇರ ಪ್ರಸಾರ: ಜಿಯೋ ಸಿನಿಮಾ, ಡಿಡಿ ಸ್ಪೋರ್ಟ್ಸ್‌, ಫ್ಯಾನ್‌ಕೋಡ್‌ ಆ್ಯಪ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...