ಏಷ್ಯಾಕಪ್ ಮುಕ್ತಾಯವಾಗುತ್ತಿದ್ದಂತೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಎರಡು ಪಂದ್ಯಗಳ ತವರು
ಟೆಸ್ಟ್ ಸರಣಿ ನಡೆಯಲಿದೆ. ಇದಕ್ಕಾಗಿ ಬಿಸಿಸಿಐ 15 ಸದಸ್ಯರುಗಳ ಭಾರತ ಟೆಸ್ಟ್ ತಂಡವನ್ನು ಘೋಷಿಸಿದೆ.
ಶುಭಮನ್ ಗಿಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಈ ತಂಡದಲ್ಲಿ 7 ಆಟಗಾರರಿಗೆ ಸ್ಥಾನ ಲಭಿಸಿಲ್ಲ. ಕನ್ನಡಿಗ ದೇವದತ್ತ ಪಡಿಕ್ಕಲ್, ಎನ್. ಜಗದೀಶನ್ ಅವರಿಗೆ ಅವಕಾಶ ನೀಡಲಾಗಿದೆ. ಕರುಣ್ ನಾಯರ್, ಅಭಿಮನ್ಯು ಈಶ್ವರನ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ ಕಾಣಿಸಿಕೊಂಡಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಪಂತ್ ಅಲಭ್ಯರಾಗಿದ್ದಾರೆ. ಉಪನಾಯಕರಾಗಿ ರವೀಂದ್ರ ಜಡೇಜಾ ಅವರನ್ನು ಹೆಸರಿಸಲಾಗಿದೆ.
ಆಂಗ್ಲರ ವಿರುದ್ಧದ ಸರಣಿಯಲ್ಲಿ 4 ಮ್ಯಾಚ್ ಆಡಿದ್ದ ಕರುಣ್ ನಾಯರ್ಗೆ ಈ ಬಾರಿ ಅವಕಾಶ ಸಿಕ್ಕಿಲ್ಲ. ಏಕೆಂದರೆ ಇಂಗ್ಲೆಂಡ್ ವಿರುದ್ಧ 8 ಇನಿಂಗ್ಸ್ ಆಡಿದ್ದ ಕರುಣ್ ಕಲೆಹಾಕಿದ್ದು ಕೇವಲ 205 ರನ್ಗಳು ಮಾತ್ರ. ಹೀಗಾಗಿ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಶಾರ್ದೂಲ್ ಠಾಕೂರ್ ಆಲ್ರೌಂಡರ್ ಆಗಿ ಕಣಕ್ಕಿಳಿದಿದ್ದರು. ಇದಾಗ್ಯೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಶಾರ್ದೂಲ್ ಅವರನ್ನು ಹೊರಗಿಡಲಾಗಿದೆ.
15 ಸದಸ್ಯರ ಭಾರತ ತಂಡ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್,
ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜ (ಉಪನಾಯಕ), ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಎನ್. ಜಗದೀಶನ್ (ವಿಕೆಟ್ ಕೀಪರ್), ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಕುಲೀಪ್ ಯಾದವ್





