ಭವಿಷ್ಯದಲ್ಲಿ ಬಿಸಿಸಿಐಗೆ ಕಾದಿದೆ ದೊಡ್ಡ ಅಪಾಯ; ಪಾಕಿಸ್ತಾನ ಕ್ರಿಕೆಟ್ ಮಂಡಳಿ ಎಚ್ಚರಿಕೆ

Date:

ಚಾಂಪಿಯನ್ಸ್ ಟ್ರೋಫಿ ಟೂರ್ನಿ ಮುಕ್ತಾಯದ ಬಳಿಕ ಅತಿಥೇಯ ದೇಶ ಭಾರಿ ನಷ್ಟ ಅನುಭವಿಸಿದೆ ಎಂಬ ವರದಿಗಳು ಹರಿದಾಡುತ್ತಿವೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಭಾರತ ಜಯ ಸಾಧಿಸಿದ ಚಾಂಪಿಯನ್ಸ್ ಟ್ರೋಫಿ ಆತಿಥ್ಯದಿಂದ ಸುಮಾರು ಒಂದು ಕೋಟಿ ಡಾಲರ್ ಗಳಿಸಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿಕೊಂಡಿದೆ.

ಇಂತಹ ಋಣಾತ್ಮಕ ಪ್ರಚಾರಕ್ಕೆ ಭಾರತದ ಮಾಧ್ಯಮಗಳ ವಿರುದ್ಧ ಪಿಸಿಬಿ ವಕ್ತಾರ ಆಮೀರ್ ಮಿರ್ ಮತ್ತು ಮುಖ್ಯ ಹಣಕಾಸು ಅಧಿಕಾರಿ ಜಾವೇದ್ ಮುರ್ತಝಾ ಹರಿಹಾಯ್ದಿದ್ದಾರೆ. ಭವಿಷ್ಯದಲ್ಲಿ ಬಿಸಿಸಿಐ ಇನ್ನೂ ದೊಡ್ಡ ನಷ್ಟ ಅನುಭವಿಸಲಿದೆ ಎಂದು ಆಮೀರ್ ಮಿರ್ ಎಚ್ಚರಿಕೆ ನೀಡಿದ್ದಾರೆ.

“ಎಲ್ಲ ನಿರ್ಧಾರಗಳನ್ನು ಐಸಿಸಿ ಕೈಗೊಂಡಿದೆ. ಭಾರತ ಪಾಕಿಸ್ತಾನಕ್ಕೆ ಹಾನಿ ಮಾಡುವ ಪ್ರಯತ್ನ ಮಾಡಿದ್ದರೆ, ಇದಕ್ಕೆ ಬೆಲೆ ತೆರುತ್ತದೆ ಎಂದು ನಾನು ಹೇಳಬಲ್ಲೆ. ಭಾರತ-ಪಾಕಿಸ್ತಾನ ಬಿಸಿ ಕೇಕ್ ನಂತೆ ಮಾರಾಟವಾಗುತ್ತವೆ ಎಂದು ನಿಮಗೆ ಗೊತ್ತು. ಮುಂದಿನ ಮೂರು ವರ್ಷಗಳ ಕಾಲ ಪಾಕಿಸ್ತಾನ ಭಾರತಕ್ಕೆ ಪ್ರವಾಸ ಕೈಗೊಳ್ಳುವುದಿಲ್ಲ. ಆದ್ದರಿಂದ ಪಾಕಿಸ್ತಾನಕ್ಕೆ ಯಾವುದೇ ಹಣಕಾಸು ನಷ್ಟವಾಗಿದ್ದರೆ, ಭಾರತಕ್ಕೆ ಪಾಕಿಸ್ತಾನ ತೆರಳದೇ ಇರುವುದರಿಂದ ಆ ದೇಶಕ್ಕೆ ಮತ್ತಷ್ಟು ದೊಡ್ಡ ನಷ್ಟವಾಗಲಿದೆ” ಎಂದು ಮಿರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪಾಕಿಸ್ತಾನ V/s ನ್ಯೂಜಿಲೆಂಡ್‌ | ಬ್ಯಾಟರ್​ಗಳ ಅಬ್ಬರ; ವಿಶ್ವ ದಾಖಲೆ ಛಿದ್ರಗೊಳಿಸಿದ ಪಾಕ್‌ ತಂಡ

ಚಾಂಪಿಯನ್ಸ್ ಟ್ರೋಫಿಗಿಂತ ಮುನ್ನ ಪಾಕಿಸ್ತಾನಕ್ಕೆ ಭಾರತ ಪ್ರವಾಸ ಕೈಗೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಉಭಯ ದೇಶಗಳ ಪಂದ್ಯದ ಸ್ಥಳದ ಬಗ್ಗೆ ಭಾರಿ ಗೊಂದಲ ಮೂಡಿತ್ತು.ಹಲವು ತಿಂಗಳ ವಿಳಂಬದ ಬಳಿಕ, ಪಂದ್ಯ ನಡೆಯುವ ಸ್ಥಳವನ್ನು ಐಸಿಸಿ ಘೋಷಿಸಿತ್ತು. ಪಾಕಿಸ್ತಾನದ ಎಲ್ಲೆಡೆ ಮತ್ತು ತಟಸ್ಥ ಸ್ಥಳಗಳಲ್ಲಿ ಪಂದ್ಯ ನಡೆಯಲಿದೆ ಎಂದು ಐಸಿಸಿ ಸ್ಪಷ್ಟಪಡಿಸಿತ್ತು.

ಅಂದರೆ ಭಾರತ ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಅಡಲು ಅವಕಾಶ ಮಾಡಿಕೊಟ್ಟಿತ್ತು.2027ರ ವರೆಗೂ ಉಭಯ ದೇಶಗಳ ನಡುವಿನ ಪಂದ್ಯಗಳು ತಟಸ್ಥ ಸ್ಥಳದಲ್ಲಿ ನಡೆಯಲಿದೆ ಎಂದು ಐಸಿಸಿ ಅಧ್ಯಕ್ಷ ಜಯ್ ಶಾ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...