ಐರ್ಲೆಂಡ್‌ ವಿರುದ್ಧ ಟಿ20 ಸರಣಿ| ಗೆದ್ದು ಬೀಗಿದ ಭಾರತ;ಬೂಮ್ರಾ ಸಾರಥ್ಯಕ್ಕೆ 2-0 ಗೆಲುವು

Date:

ಐರ್ಲೆಂಡ್‌ ವಿರುದ್ಧದ 2ನೇ ಟಿ20 ಪಂದ್ಯವನ್ನು ಗೆಲ್ಲುವುದರ ಮೂಲಕ ಜಸ್‌ಪ್ರೀತ್‌ ಬೂಮ್ರಾ ಸಾರಥ್ಯದ ಭಾರತ ತಂಡ 3 ಪಂದ್ಯಗಳ ಸರಣಿಯಲ್ಲಿ 2-0 ಜಯಗಳಿಸುವುದರೊಂದಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ಟೀಂ ಇಂಡಿಯಾ ನೀಡಿದ 186 ರನ್‌ಗಳ ಸವಾಲನ್ನು ಬೆನ್ನಟ್ಟಿದ ಪೌಲ್ ಸ್ಟಿರ್ಲಿಂಗ್ ನೇತೃತ್ವದ ಐರ್ಲೆಂಡ್‌ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 152 ರನ್‌ಗಳಷ್ಟನ್ನೇ ಗಳಿಸುವುದರೊಂದಿಗೆ 33 ರನ್‌ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು.

ಆರಂಭಿಕ ಆಟಗಾರ ಆಂಡ್ರ್ಯೂ ಬಾಲ್ಬಿರ್ನಿ 72 ರನ್‌(51 ಎಸೆತ,4 ಸಿಕ್ಸರ್, 5 ಬೌಂಡರಿ) ಬಾರಿಸಿದ್ದನ್ನು ಬಿಟ್ಟರೆ ಉಳಿದವರ್ಯಾರು ಪ್ರತಿರೋಧ ತೋರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭಾರತ vs ಐರ್ಲೆಂಡ್ ಎರಡನೇ ಟಿ20: ಸರಣಿ ಗೆಲ್ಲುವ ತವಕದಲ್ಲಿರುವ ಬೂಮ್ರಾ ಪಡೆಗೆ ಆರಂಭಿಕ ಆಘಾತ

ಭಾರತದ ಪರ ನಾಯಕ ಜಸ್‌ಪ್ರೀತ್‌ ಬೂಮ್ರಾ 15/2, ಕನ್ನಡಿಗ ಪ್ರಸಿದ್ಧ ಕೃಷ್ಣ 29/2 ಹಾಗೂ ಸ್ಪಿನ್ನರ್ ರವಿ ಬಿಷ್ಣೋಯಿ 37/2 ವಿಕೆಟ್ ಕಬಳಿಸುವುದರೊಂದಿಗೆ ಗೆಲುವಿನ ಪಾಲುದಾರರಾದರು.

ಋತುರಾಜ್,ರಿಂಕು, ಸಂಜು ಸ್ಯಾಮ್ಸನ್‌ ಉತ್ತಮ ಆಟ

ಇದಕ್ಕೂ ಮೊದಲು ದಿ ವಿಲೇಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಭಾರತ ತಂಡ ಋತುರಾಜ್‌ ಸಿಂಗ್‌(58),ಸಂಜು ಸ್ಯಾಮ್ಸನ್‌ (40) ಹಾಗೂ ರಿಂಕುಸಿಂಗ್‌ (38) ರನ್‌ಗಳ ಭರ್ಜರಿ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್‌ ಪೇರಿಸಿತು.

ಆಕ್ರಮಣಕಾರಿ ಆಟವಾಡಿದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್‌ (18) ದೊಡ್ಡ ಹೊಡೆತಕ್ಕೆ ಕೈಹಾಕಿ ನಿರಾಶೆ ಅನುಭವಿಸಿದರು. ಆದರೆ, ಮತ್ತೊಬ್ಬ ಯುವ ಆರಂಭಿಕ ಋತುರಾಜ್‌ ಗಾಯಕ್ವಾಡ್‌, 43 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್‌ ನೆರವಿನೊಂದಿಗೆ 58 ರನ್‌ ಬಾರಿಸಿ ತಂಡದ ದೊಡ್ಡ ಮೊತ್ತಕ್ಕೆ ಭದ್ರ ಅಡಿಪಾಯ ಹಾಕಿದರು.

ಇನಿಂಗ್ಸ್‌ ಮಧ್ಯದಲ್ಲಿ ಬ್ಯಾಟ್‌ ಮಾಡಿದ ಸಂಜು ಸ್ಯಾಮ್ಸನ್‌, 26 ಎಸೆತಗಳಲ್ಲಿ 40 ರನ್‌ ಸಿಡಿಸಿ ತಂಡದ ರನ್‌ ಗಳಿಕೆಯ ವೇಗ ಹೆಚ್ಚಿಸಿಕೊಟ್ಟರು. ಅಂತಿಮ ಓವರ್‌ಗಳಲ್ಲಿ ಸ್ಪೋಟಕ ಆಟವಾಡಿದ ರಿಂಕು ಸಿಂಗ್‌ (21 ಎಸೆತಗಳಲ್ಲಿ 38 ರನ್‌,3 ಸಿಕ್ಸರ್‌,2 ಬೌಂಡರಿ) ಮತ್ತು ಶಿವಂ ದುಬೇ (16 ಎಸೆತಗಳಲ್ಲಿಅಜೇಯ 22 ರನ್) ತಂಡದ ಮೊತ್ತವನ್ನು 180ರ ಗಡಿ ದಾಟಿಸಿದರು. ಐರ್ಲೆಂಡ್ ಪರ ವೇಗಿ ಬ್ಯಾರಿ ಮೆಕಾರ್ತಿ ಎರಡು ವಿಕೆಟ್‌ ಪಡೆದರು.

ವೇಗವಾಗಿ 38 ರನ್‌ ಸಿಡಿಸಿದ ರಿಂಕು ಸಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...