ಏಷ್ಯಾ ಕಪ್ | ಕುಲ್‌ದೀಪ್‌ ಮಾರಕ ದಾಳಿ; ಪಾಕ್‌ ವಿರುದ್ಧ ಭಾರತಕ್ಕೆ 228 ರನ್‌ಗಳ ಭರ್ಜರಿ ಜಯ

Date:

ಸ್ಪಿನ್ನರ್‌ ಕುಲ್‌ದೀಪ್ ಯಾದವ್‌ ಮಾರಕ ದಾಳಿಯ ನೆರವಿನಿಂದ ಏಷ್ಯಾ ಕಪ್ ಸೂಪರ್ 4ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ 228 ರನ್‌ಗಳ ದಾಖಲೆ ಅಂತರದ ಜಯ ಸಾಧಿಸಿದೆ.

ಕೊಲೊಂಬೊದ ಆರ್‌ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 357 ರನ್‌ಗಳ ಭಾರಿ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ 32 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 128 ರನ್‌ ಮಾತ್ರ ಗಳಿಸಿತು. ಗಾಯದಿಂದ ಕೊನೆಯ ಇಬ್ಬರು ಆಟಗಾರರಾದ ನಸೀಮ್‌ ಶಾ ಹಾಗೂ ಹ್ಯಾರಿಸ್ ರಾವುಫ್ ಆಟವಾಡದ ಕಾರಣ ಟೀಂ ಇಂಡಿಯಾ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು.

8 ಓವರ್‌ಗಳಲ್ಲಿ 25 ರನ್‌ ನೀಡಿ ಪಾಕಿಸ್ತಾನದ ಪ್ರಮುಖ 5 ವಿಕೆಟ್ ಕಬಳಿಸಿದ ಕುಲದೀಪ್‌ ಯಾದವ್ ಗೆಲುವಿನ ರೂವಾರಿಯಾದರು. ಉಳಿದಂತೆ ಹಾರ್ದಿಕ್‌ ಪಾಂಡ್ಯಾ, ಬೂಮ್ರಾ ಹಾಗೂ ಶಾರ್ದೂಲ್‌ ಠಾಕೂರ್‌ ತಲಾ ಒಂದು ವಿಕೆಟ್ ಕಿತ್ತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಾಕರ್‌ ಜಮಾನ್ 27, ಆಘಾ ಸಲ್ಮಾನ್ ಹಾಗೂ ಇಫ್ತಿಕರ್ ಅಹಮದ್‌ ತಲಾ 23 ಗಳಿಸಿದ್ದನ್ನು ಬಿಟ್ಟರೆ ಉಳಿದ ಪಾಕಿಸ್ತಾನದ ಆಟಗಾರರು 20ರ ಗಡಿ ದಾಟಲಿಲ್ಲ.

ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಆಕರ್ಷಕ ಶತಕದಿಂದ ಭಾರತ ಬೃಹತ್ ಮೊತ್ತ

ಇದಕ್ಕೂ ಮೊದಲು ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ಗೆ ಇಳಿದು ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್ ಅವರ ತಲಾ ಶತಕಗಳ ನೆರವಿನಿಂದ ಟೀಂ ಇಂಡಿಯಾ ಏಷ್ಯಾ ಕಪ್ ಸೂಪರ್‌ 4 ಸುತ್ತಿನ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಗೆಲುವಿಗೆ 357 ರನ್‌ಗಳ ಬೃಹತ್ ಗುರಿ ನೀಡಿತ್ತು.

ಕೆ ಎಲ್ ರಾಹುಲ್ 106 ಎಸೆತಗಳಿಂದ 12 ಬೌಂಡರಿ ಹಾಗೂ 2 ಸಿಕ್ಸರ್ ಸೇರಿ ಅಜೇಯ 111 ರನ್ ಗಳಿಸಿದರು.

ಕಿಂಗ್ ಕೊಹ್ಲಿ ಪಾಕ್ ವೇಗಿ ಶಾಹೀನ್ ಅಫ್ರಿದಿ ಅವರ 10ನೇ ಓವರ್‌ನ ಮೂರನೇ ಎಸೆತದಲ್ಲಿ ಸಿಂಗಲ್ ಪಡೆಯುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ 47ನೇ ಶತಕ ಬಾರಿಸಿದರು. ವಿರಾಟ್ 94 ಎಸೆತಗಳಿಂದ ಅಜೇಯ 122 ರನ್ ಗಳಿಸಿದರು. ಇದರಲ್ಲಿ 9 ಬೌಂಡರಿ 3 ಸಿಕ್ಸರ್‌ಗಳಿದ್ದವು.

ಈ ಸುದ್ದಿ ಓದಿದ್ದೀರಾ? ಬಿಸಿಸಿಐ ಹಾಳು ಮಾಡಲು ಭ್ರಷ್ಟ ಜಯ್‌ ಶಾ ಸಾಕು ಎಂದಿದ್ದ ಮಾಜಿ ಕ್ರಿಕೆಟಿಗ ವೆಂಕಿ: ಕೆಲವೇ ನಿಮಿಷದಲ್ಲಿ ಪೋಸ್ಟ್‌ ಡಿಲೀಟ್!

ಭಾರತ ತಂಡದ ಪರವಾಗಿ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಅದ್ಭುತ ಆರಂಭವನ್ನು ಒದಗಿಸಿದ್ದರು. ಈ ಜೋಡಿ ಮೊದಲ ವಿಕೆಟ್‌ಗೆ 16.4 ಓವರ್‌ಗಳಲ್ಲಿ 121 ರನ್ ಜೊತೆಯಾಟ ನೀಡಿತ್ತು.

49 ಎಸೆತಗಳಿಂದ 6 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿ 56 ರನ್ ಗಳಿಸಿದ್ದ ರೋಹಿತ್ ಶರ್ಮಾ, ಶಾದಾಬ್ ಖಾನ್ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರೆ, ವೇಗಿ ಶಾಹೀದ್ ಅಫ್ರಿದಿ ಎಸೆತದಲ್ಲಿ ಗಿಲ್ 52 ಎಸೆತಗಳಿಂದ 10 ಬೌಂಡರಿ ಸೇರಿ 58 ರನ್ ಗಳಿಸಿದ್ದಾಗ ಸುಲಭ ಕ್ಯಾಚ್ ನೀಡಿ ಮೈದಾನ ತೊರೆದರು.

ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ವಿರಾಟ್ ಕೊಹ್ಲಿ ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಅವರು ಉತ್ತಮ ಜೊತೆಯಾಟವನ್ನು ಆಡುವ ಮೂಲಕ ಟೀಂ ಇಂಡಿಯಾ 300ರ ಗಡಿ ದಾಟಲು ಉಪಯುಕ್ತ ಕಾಣಿಕೆ ನೀಡಿದರು.

ಅಜೇಯ 122 ರನ್‌ ಗಳಿಸಿದ ವಿರಾಟ್‌ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಏಷ್ಯಾ ಕಪ್ ಸೂಪರ್‌ 4ನ ಭಾರತದ 2ನೇ ಪಂದ್ಯ ಸೆ.12 ರಂದು ಶ್ರೀಲಂಕಾದ ವಿರುದ್ಧ ಆಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...