ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: 2-1 ಮುನ್ನಡೆ ಪಡೆದ ಟೀಂ ಇಂಡಿಯಾ

Date:

ಟೀಂ ಇಂಡಿಯಾ ತಂಡ ಜಿಂಬಾಬ್ವೆ ವಿರುದ್ಧ 23 ರನ್‌ಗಳ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ. 183 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಅತಿಥೇಯ ತಂಡ ಭಾರತದ ಬೌಲರ್‌ಗಳ ದಾಳಿಗೆ ಸಿಲುಕಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್‌ಗಳನ್ನು ಮಾತ್ರ ಗಳಿಸಿತು.

ಟೀಂ ಇಂಡಿಯಾ ಪರ ವಾಷಿಂಗ್ಟನ್‌ ಸುಂದರ್‌ 15/3, ಆವೇಶ್ ಖಾನ್ 39/2 ಹಾಗೂ ಖಲೀಲ್‌ ಅಹಮದ್‌ 15/1 ವಿಕೆಟ್‌ ಪಡೆದು ಜಿಂಬಾಬ್ವೆ ಗೆಲುವಿಗೆ ಅಡ್ಡಿಯಾದರು.

ಅತಿಥೇಯ ತಂಡದ ಪರ ಡಿಯೋನ್‌ ಮೈಯರ್ಸ್ ಅಜೇಯ 65 ರನ್‌ ಗಳಿಸುವ ಮೂಲಕ ಕೊನೆಯವರೆಗೂ ಹೋರಾಟ ನಡೆಸಿದರೂ ತಂಡದ ಉಳಿದ ಆಟಗಾರರು ಇವರಿಗೆ ಬೆಂಬಲ ನೀಡಲಿಲ್ಲ. ವಿಕೆಟ್ ಕೀಪರ್‌ ಕ್ಲಿವ್ ಮಡಂದೆ 37 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು 20ರ ಗಡಿ ದಾಟಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹರಾರೆಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್‌ ಆಯ್ಕೆ ಆಯ್ದುಕೊಂಡು 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್‌ಗಳ ಉತ್ತಮ ಮೊತ್ತ ಕಲೆಹಾಕಿತು.

ಈ ಸುದ್ದಿ ಓದಿದ್ದೀರಾ? ಗೌತಮ್ ಗಂಭೀರ್: ಖ್ಯಾತಿಗಿಂತ ಹೆಚ್ಚು ವಿವಾದಗಳನ್ನೇ ಉಸಿರಾಡಿದ ಕ್ರಿಕೆಟಿಗನಿಗೆ ಹೊಣೆಗಾರಿಕೆಯ ಹುದ್ದೆ

ಮೊದಲ ವಿಕೆಟ್‌ ಜೊತೆಯಾಟದಲ್ಲಿ ನಾಯಕ ಶುಭಮನ್‌ ಗಿಲ್ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 8.1 ಓವರ್‌ಗಳಲ್ಲಿ 67 ರನ್‌ ಪೇರಿಸಿದರು. 27 ಚೆಂಡುಗಳಲ್ಲಿ 4 ಬೌಂಡರಿ, 2 ಸಿಕ್ಸರ್‌ಗಳೊಂದಿಗೆ 36 ರನ್‌ ಗಳಿಸಿದ ಜೈಸ್ವಾಲ್‌, ಸಿಕಂದರ್‌ ರಜಾ ಬೌಲಿಂಗ್‌ನಲ್ಲಿ ಔಟಾದರು.

ನಂತರ ಇನಿಂಗ್ಸ್ ಮುಂದುವರೆಸಿದ ಗಿಲ್‌ಗೆ ಎರಡನೇ ಪಂದ್ಯದಲ್ಲಿ ಶತಕ ಸ್ಫೋಟಿಸಿದ್ದ ಯುವ ಆಟಗಾರ ಅಭಿಷೇಕ್‌ ಶರ್ಮಾ(10) ಹೆಚ್ಚು ಹೊತ್ತು ಜೊತೆ ನೀಡಲಿಲ್ಲ. ರುತುರಾಜ್‌ ಗಾಯಕ್ವಾಡ್‌ ಮೂರನೇ ಪಂದ್ಯದಲ್ಲಿಯೂ ಉತ್ತಮ ಆಟವಾಡಿದರು. 28 ಎಸೆತಗಳಲ್ಲಿ 3 ಸಿಕ್ಸರ್‌, 4 ಬೌಂಡರಿಗಳೊಂದಿಗೆ 49 ಬಾರಿಸಿದ ರುತುರಾಜ್‌ 1 ರನ್‌ನಿಂದ ಅರ್ಧ ಶತಕ ವಂಚಿತರಾದರು. ಕೊನೆಯ ಓವರ್‌ಗಳಲ್ಲಿ ಬಂದ ಸಂಜು ಸ್ಯಾಮ್ಸನ್‌ 12 ರನ್‌ ಗಳಿಸಿ ಅಜೇಯರಾಗುಳಿದರು.

ನಾಲ್ಕನೇ ಟಿ20 ಪಂದ್ಯ ಜುಲೈ 13 ರಂದು ನಡೆಯಲಿದ್ದು, ಅತಿಥೇಯ ಜಿಂಬಾಬ್ವೆ ತಂಡಕ್ಕೆ ಮಾಡು ಇಲ್ಲವೆ ಮಡಿ ಪಂದ್ಯವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...