ಹಸ್ತಲಾಘವ ಮಾಡಿ ಕ್ರೀಡಾಸ್ಪೂರ್ತಿ ಮೆರೆದ ಭಾರತ–ಪಾಕ್‌ ಯುವ ಹಾಕಿ ಆಟಗಾರರು

Date:

ಸೆಪ್ಟೆಂಬರ್‌ನಲ್ಲಿ ನಡೆದ ಏಷ್ಯಾ ಕಪ್‌ ಕ್ರಿಕೆಟ್ ಟೂರ್ನಿಯ ಭಾರತ–ಪಾಕಿಸ್ತಾನ ಪಂದ್ಯಗಳು ನಕಾರಾತ್ಮಕ ಕಾರಣಗಳಿಂದ ಸುದ್ದಿಯಾಗಿದ್ದವು. ಈ ಚಿತ್ರಣಕ್ಕೆ ಸಂಪೂರ್ಣ ಭಿನ್ನವೆಂಬಂತೆ ಈ ಎರಡು ದೇಶಗಳ ಜೂನಿಯರ್‌ ಹಾಕಿ ತಂಡಗಳ ಆಟಗಾರರು ಸುಲ್ತಾನ್ ಆಫ್ ಜೋಹರ್ ಕಪ್‌ ಟೂರ್ನಿಯಲ್ಲಿ ಪರಸ್ಪರರಿಗೆ ಹಸ್ತಲಾಘವದೊಂದಿಗೆ ಶುಭ ಹಾರೈಸಿ,ಕ್ರೀಡಾಸ್ಫೂರ್ತಿ ಮೆರೆದರು.

ಟಾಸ್‌ ವೇಳೆ ಉಭಯ ತಂಡಗಳ ನಾಯಕರು ‘ಸಾಂಪ್ರದಾಯಿಕ’ ಹಸ್ತಲಾಘವವನ್ನು ನಿರಾಕರಿಸಿದ್ದರು. ಪಂದ್ಯದ ವೇಳೆಯೂ ಆಟಗಾರರ ನಡುವೆ ವಾಗ್ವಾದಗಳು ನಡೆದಿದ್ದವು. ಪಂದ್ಯ ಮುಗಿದ ನಂತರವೂ ಕೈಕುಲುಕಿ ಶುಭಾಶಯ ಹೇಳಿರಲಿಲ್ಲ. ಅಲ್ಲದೆ, ಭಾರತ ಕ್ರಿಕೆಟ್‌ ತಂಡವು ಏಷ್ಯಾ ಕಪ್ ಗೆದ್ದ ನಂತರ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್ ಮುಖ್ಯಸ್ಥ, ಪಾಕಿಸ್ತಾನದ ಮೊಹ್ಸಿನ್ ನಕ್ವಿ ಅವರಿಂದ ಟ್ರೋಫಿ ಸ್ವೀಕರಿಸಿರಲಿಲ್ಲ.

ಭಾರತ ಮಹಿಳಾ ತಂಡವೂ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಪಂದ್ಯದಲ್ಲಿ ಪಾಕ್‌ ಆಟಗಾರ್ತಿಯರ ಕೈಕುಲುಕಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡ ಸಿದ್ದ; ಶುಭಮನ್ ಗಿಲ್‌ಗೆ ನಾಯಕತ್ವ – ತಂಡಕ್ಕೆ ಮರಳಿದ ಕೊಹ್ಲಿ, ರೋಹಿತ್

ಇದಕ್ಕೆ ಭಿನ್ನವಾಗಿ, ಈ ಎಲ್ಲವೂ ಹಸಿರಾಗಿರುವಾಗಲೇ ಹಾಕಿ ತಂಡದ ಯುವ ಆಟಗಾರರು ಪರಸ್ಪರ ಶುಭಕೋರಿ, ಹೈಫೈ ಮಾಡುತ್ತಿರುವ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪಂದ್ಯ 3–3 ಡ್ರಾ: ಭಾರತ ಜೂನಿಯರ್‌ ಪುರುಷರ ಹಾಕಿ ತಂಡವು ಮಂಗಳವಾರ ನಡೆದ ಟೂರ್ನಿಯ ಗುಂಪು ಹಂತದ ತನ್ನ ಮೂರನೇ ಪಂದ್ಯದಲ್ಲಿ 3–3 ರಿಂದ ಪಾಕಿಸ್ತಾನ ವಿರುದ್ಧ ಡ್ರಾ ಸಾಧಿಸಿತು.

ಒಂದು ಹಂತದಲ್ಲಿ ಎರಡು ಗೋಲುಗಳ ಹಿನ್ನಡೆಯಲ್ಲಿದ್ದ ಭಾರತ ತಂಡ ತೀವ್ರ ಒತ್ತಡದಲ್ಲಿತ್ತು. ಮೂರನೇ ಮತ್ತು ನಾಲ್ಕನೇ ಕ್ವಾರ್ಟರ್‌ನಲ್ಲಿ ಭಾರತ ಆಟಗಾರರು 10 ನಿಮಿಷಗಳ ಅಂತರದಲ್ಲಿ ಮೂರು ಗೋಲು ದಾಖಲಿಸಿ ಡ್ರಾ ಮಾಡಿಕೊಂಡರು. ಈ ಮೂಲಕ ಟೂರ್ನಿಯಲ್ಲಿ ಅಜೇಯವಾಗಿ ಉಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...