ದ್ವಿಪಕ್ಷೀಯ ಸರಣಿಗಳಲ್ಲಷ್ಟೇ ಭಾರತದ ಅಬ್ಬರ; ಐಸಿಸಿ ಟೂರ್ನಿಗಳಲ್ಲಿ ಪ್ರಶಸ್ತಿ ಬರ!

Date:

ಐಸಿಸಿ ಟೆಸ್ಟ್‌ ಮತ್ತು ಟಿ20 ರ‍್ಯಾಂಕಿಂಗ್‌ನಲ್ಲಿ ಭಾರತ ನಂ.1 ಸ್ಥಾನದಲ್ಲಿದೆ. ಆದರೆ ಐಸಿಸಿ ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲದೇ ದಶಕವೇ ಕಳದಿದೆ.

ಲಂಡನ್‌ನ ಓವಲ್‌ ಮೈದಾನದಲ್ಲಿ ಭಾನುವಾರ ಮುಕ್ತಾಯಗೊಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ, 209 ರನ್‌ಗಳ ಬೃಹತ್‌ ಅಂತರದಲ್ಲಿ ರೋಹಿತ್‌ ಪಡೆಯನ್ನು ಬಗ್ಗುಬಡಿದು ತನ್ನ ಚೊಚ್ಚಲ ಡಬ್ಲ್ಯೂಟಿಸಿ ಪ್ರಶಸ್ತಿ ಗೆದ್ದು ಬೀಗಿತ್ತು. ಮತ್ತೊಂದೆಡೆ ಸತತ ಎರಡನೇ ಬಾರಿ ಫೈನಲ್‌ ಪ್ರವೇಶಿಸಿದರೂ ಸಹ ಭಾರತ, ಯಾವುದೇ ಹಂತದಲ್ಲೂ ಪ್ರತಿರೋಧ ತೋರದೆ ಶರಾಣಗಿತ್ತು. ಎದುರಾಳಿಗಳು ಕಳೆದ ಬಾರಿ ನ್ಯೂಜಿಲೆಂಡ್ ಮತ್ತು ಈ ಬಾರಿ ಆಸ್ಟ್ರೇಲಿಯಾ ಎಂಬುದಷ್ಟೇ ವ್ಯತ್ಯಾಸ. ಆದರೆ ಫಲಿತಾಂಶದಲ್ಲಿ ಮಾತ್ರ ಯಾವುದೇ ಬದಲವಾವಣೆ ಆಗಿಲ್ಲ.

ಓವಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಕಾಣುವ ಮೂಲಕ ಭಾರತ, ಕಳೆದ 10 ವರ್ಷಗಳಲ್ಲಿ ಐಸಿಸಿ ಟೂರ್ನಿಗಳಲ್ಲಿ ನಾಲ್ಕನೇ ಬಾರಿಗೆ ಫೈನಲ್‌ನಲ್ಲಿ ಸೋಲು ಕಂಡಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2011ರಲ್ಲಿ ಭಾರತದ ನೆಲದಲ್ಲಿ ನಡೆದಿದ ಐಸಿಸಿ ಏಕದಿನ ವಿಶ್ವಕಪ್‌ನಲ್ಲೂ ಪ್ರಶಸ್ತಿ ಜಯಿಸಿದ್ದ ಭಾರತ ಆ ಬಳಿಕ 2013ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಚಾಂಪಿಯನ್‌ ಆಗಿ ಸಂಭ್ರಮಿಸಿತ್ತು. ಈ ಎರಡೂ ಟೂರ್ನಿಗಳಲ್ಲೂ ಭಾರತ ತಂಡವನ್ನು ಮಹೇಂದ್ರ ಸಿಂಗ್‌ ಧೋನಿ ಮುನ್ನಡೆಸಿದ್ದರು. ಅದುವೇ ಕೊನೆ. ಆ ನಂತರದಲ್ಲಿ ಐಸಿಸಿ ಟ್ರೋಫಿ ಭಾರತದ ಪಾಲಿಗೆ ಮರೀಚಿಕೆಯಾಗಿಯೇ ಉಳಿದಿದೆ.

ಕಳೆದ ಒಂದು ದಶಕದಿಂದ ಭಾರತಕ್ಕೆ ಐಸಿಸಿ ಸೆಮಿಫೈನಲ್‌- ಫೈನಲ್‌ನಲ್ಲಿ ಸೋಲಿನ ಸರಪಳಿ ಕಳಚಲು ಸಾಧ್ಯವಾಗಿಲ್ಲ.

ಧೋನಿ ನಾಯಕತ್ವದಲ್ಲಿ,

2014ರ ಟಿ-20 ವಿಶ್ವಕಪ್‌; ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಸೋಲು.

2015ರ ಏಕದಿನ ವಿಶ್ವಕಪ್; ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು

2016ರ ಟಿ20 ವಿಶ್ವಕಪ್‌; ಸೆಮಿಫೈನಲ್‌ನಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಸೋಲು.

ಕೊಹ್ಲಿ ನಾಯಕತ್ವದಡಿಯಲ್ಲಿ,

2017ರ ಚಾಂಪಿಯನ್ಸ್‌ ಟ್ರೋಫಿ; ಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೋಲು

2019ರ ಏಕದಿನ ವಿಶ್ವಕಪ್; ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಸೋಲು

2021ರ ಟೆಸ್ಟ್ ಚಾಂಪಿಯನ್‌ಶಿಪ್‌;  ಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಸೋಲು

ರೋಹಿತ್ ಶರ್ಮಾ ನಾಯಕತ್ವದಲ್ಲಿ,

2022ರ ಟಿ20 ವಿಶ್ವಕಪ್; ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಸೋಲು

2023ರ ಟೆಸ್ಟ್ ಚಾಂಪಿಯನ್‌ಶಿಪ್‌;  ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...